Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...