Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...