Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...