Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...