Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...