Homeಮುಖಪುಟದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

ದೇವೇಗೌಡರೇ ಮುಂದಿನ ಪ್ರಧಾನಮಂತ್ರಿ : ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ಹೌದು. ಇದು ಖಾಸಗಿ ಸಂಭಾಷಣೆಯಲ್ಲಿ ಹೇಳಿದ ಮಾತಲ್ಲ. ಅಥವಾ ಸುಮ್ಮನೇ ತೇಲಿಬಿಟ್ಟಿರುವುದೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ಮಹಾರಾಷ್ಟ್ರದಲ್ಲಿ (ಎಐಎಂಐಎಂ ಜೊತೆ ಸೇರಿ ಕಟ್ಟಿಕೊಂಡಿರುವ) ವಂಚತ್ ಬಹುಜನ್ ಅಗಾಢಿಯ ನೇತಾರ ಪ್ರಕಾಶ್ ಅಂಬೇಡ್ಕರ್ ಅವರು ಲೆಕ್ಕಾಚಾರದೊಂದಿಗೆ ಮುಂದಿಟ್ಟಿರುವ ಮಾತು. ಪಿಟಿಐ ಸುದ್ದಿ ಸಂಸ್ಥೆಯನ್ನು ಉಲ್ಲೇಖಿಸಿ ಏಷ್ಯನ್ ಏಜ್, ಮನಿ ಕಂಟ್ರೋಲ್ ಸೇರಿದಂತೆ ಮುಂಬೈನಿಂದ ಪ್ರಕಟವಾಗುವ ಹಲವು ಪತ್ರಿಕೆಗಳಲ್ಲಿ ಇಂದು ಈ ಸುದ್ದಿ ಇದೆ.

ಮಹಾರಾಷ್ಟ್ರದಲ್ಲಿ ಮುಗಿದಿರುವ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಪ್ರಕಾಶ್ ಅಂಬೇಡ್ಕರ್ ಮಾತಾಡುತ್ತಾ, ರಾಷ್ಟ್ರ ರಾಜಕಾರಣದ ಸಾಧ್ಯತೆಗಳ ಕುರಿತು ಬೆಳಕು ಚೆಲ್ಲಿದ್ದಾರೆ.

ಅವರ ಪ್ರಕಾರ ಕಾಂಗ್ರೆಸ್ 100 ಸೀಟುಗಳಿಗೆ ಸೀಮಿತವಾದರೆ, ಬಿಜೆಪಿಯು 150ರಿಂದ 200 ಸೀಟುಗಳಿಗೆ ಇಳಿಯಲಿದೆ. ಉಳಿದೆಲ್ಲಾ ಸೀಟುಗಳು ಮಿಕ್ಕ ಪಕ್ಷಗಳ ಪಾಲಾಗಲಿವೆ. ಅಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲು ಸಾಧ್ಯವೇ ಇಲ್ಲ. ಉಳಿದಂತೆ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ವಿರೋಧಿಸುತ್ತಿರುವ ಪಕ್ಷಗಳು ರಾಹುಲ್‍ಗಾಂಧಿಯನ್ನು ಪ್ರಧಾನಿಯಾಗಿಸಲು ಒಪ್ಪುವುದಿಲ್ಲ. ಆಗ ದೇವೇಗೌಡರಂತಹ ‘ಕಪ್ಪು ಕುದುರೆ’ಗೇ ಹೆಚ್ಚಿನ ಸಾಧ್ಯತೆ ಎಂಬುದು ಅವರ ಅಭಿಪ್ರಾಯ.

ಉಳಿದ ಪ್ರಾದೇಶಿಕ ನಾಯಕರುಗಳಿಗಿಂತ ಒಮ್ಮೆ ಪ್ರಧಾನಿಯಾದ ಅನುಭವವಿರುವ ದೇವೇಗೌಡರೇ ಈ ಹುದ್ದೆಗೆ ಸೂಕ್ತವಾಗುತ್ತಾರೆ ಮತ್ತು ಎಲ್ಲರಿಗೂ ಅವರ ನಾಯಕತ್ವ ಒಪ್ಪಿಗೆಯಾಗುತ್ತದೆ ಎಂದಿದ್ದಾರೆ.

4 ಹಂತಗಳ ಚುನಾವಣೆ ಮುಗಿದ ನಂತರ, ಬಿಜೆಪಿಗೆ ಹೆಚ್ಚಿನ ಸೀಟುಗಳು ಬರುವುದಿಲ್ಲ ಎಂಬ ವಾತಾವರಣ ಎಲ್ಲೆಡೆ ನಿರ್ಮಾಣವಾಗುತ್ತಿರುವಾಗ ಪ್ರಕಾಶ್ ಅಂಬೇಡ್ಕರ್ ಅವರ ಮಾತು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. 1996ರಲ್ಲೂ ದೇವೇಗೌಡರು ಪ್ರಧಾನ ಮಂತ್ರಿ ಸ್ಥಾನಕ್ಕೇರಬಹುದು ಎಂದು ಅಥವಾ ಅವರ ನಂತರ ಇಂದ್ರಕುಮಾರ್ ಗುಜ್ರಾಲ್ ಪ್ರಧಾನಿಯಾಗಬಹುದೆಂದು ಯಾರೂ ಊಹಿಸಿರಲಿಲ್ಲ. ಈ ಸಾರಿ ಎರಡೂ ರಾಜಕೀಯ ಪಕ್ಷಗಳು ಬಹುಮತ ಪಡೆದುಕೊಳ್ಳುವ ಸಾಧ್ಯತೆ ಇಲ್ಲವೇ ಇಲ್ಲ ಮಾತ್ರವಲ್ಲಾ ಪ್ರಕಾಶ್ ಅಂಬೇಡ್ಕರ್ ಅವರು ಹೇಳಿದ ಸ್ಥಿತಿ ನಿರ್ಮಾಣವಾದರೆ ಅಚ್ಚರಿಯೇನಿಲ್ಲ.

ಯಾವುದಕ್ಕೂ ಮೇ 23ರ ಎಣಿಕೆಯವರೆಗೆ ಕಾದು ನೋಡಬೇಕು. ಆಗ ಯಾವ ಬಗೆಯ ಅಚ್ಚರಿಯ ಸಮೀಕರಣಗಳು ತೆರೆದುಕೊಳ್ಳುತ್ತವೆ ಎಂಬುದು ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...