Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...