Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...