Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...