Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...