Homeಕರ್ನಾಟಕಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಿರಿ: ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದ ಮುಂದೆ ತೋರಿಸಿ -...

ಕನ್ನಡ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಿರಿ: ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದ ಮುಂದೆ ತೋರಿಸಿ – ಎಚ್.ಡಿ.ಕೆ

- Advertisement -
- Advertisement -

ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹಿಂದಿ ಬ್ಯಾನರ್ ಹರಿದ ಕಾರಣಕ್ಕಾಗಿ 6 ಜನ ಕನ್ನಡ ಹೋರಾಟಗಾರರ ಮೇಲೆ ಜಾಮೀನು ರಹಿತ ಕೇಸುಗಳನ್ನು ಹಾಕಿ ಜೈಲಿಗೆ ತಳ್ಳಿರುವುದನ್ನು ವಿರೋಧಿಸಿರುವ ಕುಮಾರಸ್ವಾಮಿಯವರು ಕನ್ನಡ ಹೋರಾಟಗಾರರನ್ನು ರಿಲೀಸ್ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ 

ಕನ್ನಡ ಹೋರಾಟಗಾರರ ಬಂಧನವನ್ನು ವಿರೋಧಿಸಿ #ReleaseKannadaActivists ಹ್ಯಾಷ್ ಟ್ಯಾಗ್ ಬಳಸಿ ಟ್ರೆಂಡ್ ಮಾಡಲು ಕರೆ ನೀಡಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಾವಿರಾರು ಜನ ಟ್ವೀಟ್ ಮಾಡುವ ಮೂಲಕ ಬೆಂಬಲಿಸಿದ್ದಾರೆ.

ಇಂದು ಸಂಜೆ 3 ಗಂಟೆಗೆ ಮೈಸೂರು ವೃತ್ತದ ಬಳಿ ಮತ್ತು ಸಂಜೆ 5:30ಕ್ಕೆ ಟೌನ್ ಹಾಲ್ ಎದುರು ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...