ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಿಂದಿ ಬ್ಯಾನರ್ ಹರಿದ ಕಾರಣಕ್ಕಾಗಿ 6 ಜನ ಕನ್ನಡ ಹೋರಾಟಗಾರರ ಮೇಲೆ ಜಾಮೀನು ರಹಿತ ಕೇಸುಗಳನ್ನು ಹಾಕಿ ಜೈಲಿಗೆ ತಳ್ಳಿರುವುದನ್ನು ವಿರೋಧಿಸಿರುವ ಕುಮಾರಸ್ವಾಮಿಯವರು ಕನ್ನಡ ಹೋರಾಟಗಾರರನ್ನು ರಿಲೀಸ್ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ನಿಮ್ಮ ಪೌರುಷವನ್ನು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ತೋರಿಸಿ.#ReleaseKannadaActivists
— H D Kumaraswamy (@hd_kumaraswamy) August 19, 2019
ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ
ಕನ್ನಡ ಹೋರಾಟಗಾರರ ಬಂಧನವನ್ನು ವಿರೋಧಿಸಿ #ReleaseKannadaActivists ಹ್ಯಾಷ್ ಟ್ಯಾಗ್ ಬಳಸಿ ಟ್ರೆಂಡ್ ಮಾಡಲು ಕರೆ ನೀಡಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಾವಿರಾರು ಜನ ಟ್ವೀಟ್ ಮಾಡುವ ಮೂಲಕ ಬೆಂಬಲಿಸಿದ್ದಾರೆ.
ಇಂದು ಸಂಜೆ 3 ಗಂಟೆಗೆ ಮೈಸೂರು ವೃತ್ತದ ಬಳಿ ಮತ್ತು ಸಂಜೆ 5:30ಕ್ಕೆ ಟೌನ್ ಹಾಲ್ ಎದುರು ಕನ್ನಡ ಹೋರಾಟಗಾರರ ಬಂಧನ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
Super HDK
EDIYAPPA NINU SUPER KARNATAKA MATRA ಕೇಂದ್ರ ಸರ್ಕಾರದ ಮುಂದೆ ELIGALU