HomeUncategorizedರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

“ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ”

- Advertisement -
- Advertisement -

| ನಾನುಗೌರಿ ಡೆಸ್ಕ್ |

ಮೇಕೆದಾಟು ಯೋಜನೆ ವಿಚಾರವಾಗಿ ಡಿಪಿಆರ್ ಸಿದ್ದಪಡಿಸಿಲ್ಲ ಎಂದು ಪತ್ರಿಕೆಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಸದಾನಂದಗೌಡರ ವಿರುದ್ಧ ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ನಲ್ಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಡಿ.ವಿ ಸದಾನಂದಗೌಡರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿಯವರು “ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ” ಎಂದಿದ್ದಾರೆ.

ನಿನ್ನೆ ಸದಾನಂದಗೌಡರು “ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪುತ್ತದೆ. ಹಾಗಾಗಿ ಡಿಪಿಆರ್ ಸಿದ್ದಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ನಾನು ಮುಂಚೆಯೂ ರಾಜ್ಯದ ಪರ ಕೆಲಸ ಮಾಡಿದ್ದು ಈಗಲೂ ರಾಜ್ಯದ ಪರ ಕೆಲಸ ಮುಂದುವರೆಸುತ್ತೇನೆ. ಅಭಿವೃದ್ದಿಯ ವಿಷಯದಲ್ಲಿ ಯಾರೋಬ್ಬರು ರಾಜಕಾರಣ ಮಾಡಬಾರದು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಪತ್ರಿಕೆಯ ತುಣುಕನ್ನು ಟ್ವಿಟ್ಟರ್ ನಲ್ಲಿ ಅಂಟಿಸಿ ನೊ ಪಾಲಿಟಿಕ್ಸ್ ಇನ್ ಡೆವಲಪ್‍ಮೆಂಟ್ ಎಂಬ ಶೀರ್ಷಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿಯವರು ಮೇಲಿನಂತೆ ಕಿಡಿಕಾರಿದ್ದು ಅಲ್ಲದೇ “ಸಬರ್ಬನ್ ರೈಲು ಯೋಜನೆಯ ಕುರಿತು ಕೇಂದ್ರ ಮಂತ್ರಿ ಪಿಯೂಶ್ ಗೋಯಲ್‍ರವರ ಜೊತೆ ಸಭೆ ನಡೆಸಿ ಕಾರ್ಯ ಸಾಧ್ಯಾತ ವರದಿಗೆ ಅನುಮೋದನೆ ನೀಡಿದ್ದೇವೆ. ರೈಲ್ವೇ ಸಚಿವಾಲಯದ ಮೇ 28ರ ಪತ್ರದಂತೆ ಎಸ್.ಪಿ.ವಿ ರಚನೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಿಜವಾಗಿಯೂ ಕಾಳಜಿ ಇದ್ದರೆ ‘ರಾಜಕೀಯ ಬೇಡ’ ಎನ್ನುವ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಟಾಂಗ್ ನೀಡಿದ್ದಾರೆ.

ಅಚ್ಚರಿಯ ರೀತಿಯಲ್ಲಿ ಡಿ.ಕೆ ಶಿವಕುಮಾರ್‍ರವರು ಡಿ.ಕೆ ಶಿವಕುಮಾರ್ ರವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ದಿ ಕೆಲಸ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...