HomeUncategorizedರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ – ಡಿವಿಎಸ್ ಗೆ ಎಚ್‍ಡಿಕೆ ಗುದ್ದು

“ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ”

- Advertisement -
- Advertisement -

| ನಾನುಗೌರಿ ಡೆಸ್ಕ್ |

ಮೇಕೆದಾಟು ಯೋಜನೆ ವಿಚಾರವಾಗಿ ಡಿಪಿಆರ್ ಸಿದ್ದಪಡಿಸಿಲ್ಲ ಎಂದು ಪತ್ರಿಕೆಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಸದಾನಂದಗೌಡರ ವಿರುದ್ಧ ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್‍ನಲ್ಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಡಿ.ವಿ ಸದಾನಂದಗೌಡರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿಯವರು “ಮೇಕೆದಾಟು ಯೋಜನೆಯ ಡಿಪಿಆರ್ ಮಾತ್ರವಲ್ಲ ಕಾರ್ಯಸಾಧ್ಯತಾ ವರದಿಯನ್ನು ಸಹ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರವರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ” ಎಂದಿದ್ದಾರೆ.

ನಿನ್ನೆ ಸದಾನಂದಗೌಡರು “ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪುತ್ತದೆ. ಹಾಗಾಗಿ ಡಿಪಿಆರ್ ಸಿದ್ದಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ನಾನು ಮುಂಚೆಯೂ ರಾಜ್ಯದ ಪರ ಕೆಲಸ ಮಾಡಿದ್ದು ಈಗಲೂ ರಾಜ್ಯದ ಪರ ಕೆಲಸ ಮುಂದುವರೆಸುತ್ತೇನೆ. ಅಭಿವೃದ್ದಿಯ ವಿಷಯದಲ್ಲಿ ಯಾರೋಬ್ಬರು ರಾಜಕಾರಣ ಮಾಡಬಾರದು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಪತ್ರಿಕೆಯ ತುಣುಕನ್ನು ಟ್ವಿಟ್ಟರ್ ನಲ್ಲಿ ಅಂಟಿಸಿ ನೊ ಪಾಲಿಟಿಕ್ಸ್ ಇನ್ ಡೆವಲಪ್‍ಮೆಂಟ್ ಎಂಬ ಶೀರ್ಷಿಕೆ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿಯವರು ಮೇಲಿನಂತೆ ಕಿಡಿಕಾರಿದ್ದು ಅಲ್ಲದೇ “ಸಬರ್ಬನ್ ರೈಲು ಯೋಜನೆಯ ಕುರಿತು ಕೇಂದ್ರ ಮಂತ್ರಿ ಪಿಯೂಶ್ ಗೋಯಲ್‍ರವರ ಜೊತೆ ಸಭೆ ನಡೆಸಿ ಕಾರ್ಯ ಸಾಧ್ಯಾತ ವರದಿಗೆ ಅನುಮೋದನೆ ನೀಡಿದ್ದೇವೆ. ರೈಲ್ವೇ ಸಚಿವಾಲಯದ ಮೇ 28ರ ಪತ್ರದಂತೆ ಎಸ್.ಪಿ.ವಿ ರಚನೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಿಜವಾಗಿಯೂ ಕಾಳಜಿ ಇದ್ದರೆ ‘ರಾಜಕೀಯ ಬೇಡ’ ಎನ್ನುವ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಟಾಂಗ್ ನೀಡಿದ್ದಾರೆ.

ಅಚ್ಚರಿಯ ರೀತಿಯಲ್ಲಿ ಡಿ.ಕೆ ಶಿವಕುಮಾರ್‍ರವರು ಡಿ.ಕೆ ಶಿವಕುಮಾರ್ ರವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದು ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ದಿ ಕೆಲಸ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...