Homeಅಂಕಣಗಳುಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ. ಲೇವಣ್ಣನ ಹಿಲ್ಲೇರಿಯಸ್ ಅಡ್ವೆಂಚರ್‍ಗಳಿಗೆ ಹೊಸದೊಂದು ಸಾಹಸ ಸೇರ್ಪಡೆಯಾಗಿದೆ. ತನ್ನ ಮನೆಯ ಬೆಡ್ರೂಂ ಮಂಚದ ಮೇಲೆ ಹೋಮಕುಂಡ ಕಟ್ಟಿಸಿಕೊಂಡು ಅದ್ರೊಳಗೇ ಮಲಗಿದ್ದ ಲೇವಣ್ಣನಿಗೆ ಕನಸಿನಲ್ಲಿ ಸನಿಮಾತ್ಮನು ಬಂದು ತನ್ನ ಕಾಗೆ ಕೊಕ್ಕಿನಿಂದ ಲೇವಣ್ಣನ ಕಣ್ಣಿಗೆ ಕುಕ್ಕಿಸಿ ಎಬ್ಬಿಸಿದ್ದಾನೆ. ಪ್ರವಾಹ ಬಂದು ಜನ ಸಾಯ್ತಾವರೆ, ನೀನಿಲ್ಲಿ ಕುಂಡದೊಳಗೆ ಕಾಲೆತ್ತಿಕೊಂಡು ಬಿದ್ಕಂಡಿದೀಯ ಎದ್ದೇಳೋ ಲೋಪರ್ ಎಂದು ಬೈದನಂತೆ. ತಕ್ಷಣ ಕುಂಡದೊಳಗಿನಿಂದ ಕಣ್ಣುಜ್ಜಿಕೊಂಡು ಎದ್ದ ಲೇವಣ್ಣ ಕಾರಲ್ಲಿ ಒಂದೆರಡು ಬಂಡಲ್ ಬಿಸ್ಕತ್ ಪ್ಯಾಕೆಟ್ ಎತ್ಕೊಂಡು ಪ್ರವಾಹ ಸಂತ್ರಸ್ತರ ಗಂಜಿಕೇಂದ್ರಗಳಿಗೆ ಓಡೋಗಿದೆ. ಅಲ್ಲಿ ಮೊದಲೇ ನೊಂದು ಬೆಂದು ಹೈರಾಣಾಗಿದ್ದ ಸಂತ್ರಸ್ತ ಜನರಿಗೆ ನಾಯಿಗೆ ಎಸೆಯುವಂತೆ ಬಿಸ್ಕತ್ ಎಸೆದು ಬಂದಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜನ ಕ್ಯಾಕರಿಸಿ ತುಪಾತುಪಾ ಉಗಿಯತೊಡಗಿದ್ದಾರೆ. ದೊಡ್ಡಗೌಡರ ಮಗ ಅನ್ನೋ ಕ್ವಾಲಿಫಿಕೇಷನ್ ಬಿಟ್ರೆ ಗ್ರಾಮಪಂಚಾಯ್ತಿ ಪೀವನ್ ಆಗಲೂ ಲಾಯಕ್ಕಿಲ್ಲದ ಭಯಂಕರ ವದನ ಹೊಂದಿರೋ ಲೇವಣ್ಣ, ಮುಖಕ್ಕೆ ಬೀಳ್ತಿರೋ ಎಂಜಲು ಒರೆಸಿಕೊಳ್ಳಲು ಮನೇಲಿರೋ ಟವೆಲ್ಲು, ಬೆಡ್‍ಶೀಟುಗಳು ಸಾಲದಾಗಿ ಹೊಸ ಎರಡು ಶಾಮಿಯಾನ ತರಿಸಿಕೊಂಡಿದ್ದಾರೆಂದು ಲೇವಣ್ಣನ ಅಧಿಕೃತ ಪುತ್ರ ಹೇಳಿಕೆ ಕೊಟ್ಟಿದ್ದಾರೆ. ಇದರ ನಡುವೆ ಲೇವಣ್ಣನೇನಾದ್ರೂ ಸಂತ್ರಸ್ತ ಶಿಬಿರಗಳಿಗೆ ಅಪ್ಪಿತಪ್ಪಿ ಮತ್ತೆ ಭೇಟಿ ಕೊಟ್ಟರೆ ಅಲ್ಲಿರೋ ಜನರು ಲೇವಣ್ಣನ ಕಾಲುಹಿಡಿದು ದರದರನೆ ಎಳೆದೊಯ್ದು ರಾಜಾಸೀಟ್ ಮೇಲಿಂದ ಕೆಳಕ್ಕೆಸೆಯಲು ಪ್ಲಾನ್ ಮಾಡಿದ್ದಾರೆಂದು ಗುಪ್ತಚರ ಮೂಲಗಳು ಸ್ಪಷ್ಟಪಡಿಸಿವೆ.

********

ಆಡಳಿತ ನಡೆಸಿ ಅನುಭವವಿರದ ಎಲ್ ಬೋರ್ಡ್ ಎನ್.ಡಿ.ಎ ಸರ್ಕಾರ, ಎಲ್ಲಿ ಕೈ ಇಟ್ಟರೂ ಅಲ್ಲೊಂದು ಕೊಳಕುಮಂಡಲದ ಹಾವಿನ ಕೈಲಿ ಗಚ್ಚನೆ ಕಡಿಸಿಕೊಂಡು ಕಿಟಾರ್ ಎಂದು ಕಿರುಚಿಕೊಳ್ಳುತ್ತಿರುವ ಸುದ್ದಿಗಳು ಲಭ್ಯವಾಗಿವೆ. ಕೇಂದ್ರ ಅಂಕಿಅಂಶ ಆಯೋಗ ನಡೆಸಿದ ಅವಲೋಕನದಲ್ಲಿ ಕೇಂದ್ರದ ‘ಹಾಫ್ ಮೆಂಟ್ಲು ಓಲ್ಡ್ ಮ್ಯಾನ್’ ಸರ್ಕಾರದ ಕಾಲದ ಜಿ.ಡಿ.ಪಿಯು ಹಿಂದಿನ ಯುಪಿಎ ಸರ್ಕಾರದ ಕಾಲದ ಜಿಡಿಪಿಯ ಕಾಲಧೂಳಿಗೂ ಸಮವಿಲ್ಲದಂತೆ ಯಕ್ಕುಟ್ಟಿ ಹೋಗಿರುವುದು ಬಯಲಾಗಿದೆ. ಇದನ್ನೇ ಸರ್ಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಿದಾಗ ತಲೆಯಿರುವ ಮಾಧ್ಯಮಗಳು ಪೊರಕೆ ಎತ್ತಿಕೊಂಡು ‘ಗಟರ್ ಗ್ಯಾಸ್ ಮೆಂಟ್ಲುಮ್ಯಾನ್’ ಮುಖಕ್ಕೆ ಹೆಟ್ಟಿ ‘ಏನಲೇ ಇದು ಭಾಡಕೋ’ ಎಂದು ಮಕ್ಕುಗಿದಿವೆ. ಇದರಿಂದ ನೊಂದ ಮೆಂಟ್ಲುತಾತ.. ಆ ರಿಪೋರ್ಟನ್ನೇ ವೆಬ್‍ಸೈಟಿಂದ ಕಿತ್ತು ಬಚ್ಚಿಡಲು ಹೇಳಿ, ಮತ್ತೊಮ್ಮೆ ಸಿಕ್ಕಿ ಬಿದ್ದಿದೆ. ಚಡ್ಡಿ ಹರಿದೋಗಿ ಏನೇನೋ ಕಾಣ್ತಿದೆ ನೋಡ್ಕಳಯ್ಯ ಅಂದ್ರೆ ‘ ನಾನಿರದೇ ಹಿಂಗೆ, ನೋಡಕ್ಕಾಗದಿದ್ರೆ ನೀವೇ ಕಣ್ ಮುಚ್ಕಳಿ ಅಂದ್ನಂತೆ’ ಅನ್ನೋ ಗಾದೆಯನ್ನ ಈ ಓಲ್ಡ್ ಬಫೆಲೋನ ನೋಡಿಯೇ ಬರೆದಿರಬಹುದೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

********

ಭೂಮಿಯ ಮೇಲೆ ಎಲ್ಲೂ ಕಾಣಸಿಗದ ಅತ್ಯಂತ ಶ್ರೇಷ್ಟ ಮುಠ್ಠಾಳರ ಕೊಂಪೆಯಾಗಿರೋ ಮೋತಿಜೀ ಭಕ್ತರು ಕೇರಳ ಪ್ರವಾಹದ ಸಂದರ್ಭದಲ್ಲು ತಮ್ಮ ಸೈಕೋಬುದ್ದಿಗಳನ್ನು ಬಿಡದಿರುವುದು ಆಶ್ಚರ್ಯವೇನಲ್ಲ. ಸುಪ್ರೀಂಕೋರ್ಟ್ ಶಬರಿಮಲೆ ದೇವರ ದರ್ಶನಕ್ಕೆ ಹೆಂಗಸರನ್ನು ಬಿಟ್ಟಿದ್ದೇ ಕಾರಣವೆಂದು ಈ ಅನ್ಯಗ್ರಹ ಮೂದೇವಿಗಳು ತಲೆಚಚ್ಚಿಕೊಂಡು ಅಳುತ್ತಿವೆ. ಆ ಲೆಕ್ಕದಲ್ಲಿ ನೋಡಿದರೆ ಸುಪ್ರೀಂ ತೀರ್ಪಿಗೆ ಸಿಟ್ಟಿಗೆದ್ದ ಅಯ್ಯಪ್ಪಸ್ವಾಮಿ ಕೋರ್ಟನ್ನೇ ಪ್ರವಾಹದೊಳಗೆ ಮುಳುಗಿಸುವ ಬದಲು ತನ್ನ ಟೆಂಪಲ್ಲನ್ನೇ ಯಾಕೆ ಪಂಪಾನದಿಯೊಳಗೆ ಕಂಠಮಟ್ಟ ಮುಳುಗಿಸಿಕೊಂಡನೆಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಉತ್ತರಾಖಂಡದಲ್ಲಿ ನೆರೆ ಬಂದು ಇಡೀ ಕಣಿವೆ ದೇಗುಲದ ಊರನ್ನು ಕೊಚ್ಚಿಕೊಂಡು ಹೋದಾಗ ಆ ದೇವರೇನು ಶಾಪ ಕೊಟ್ಟಿತ್ತು? ಗುಜರಾತಲ್ಲಿ ಭೂಕಂಪ ಸಂಭವಿಸಿದಾಗ ಆ ರಾಜ್ಯವೇನು ಪಾಪ ಮಾಡಿತ್ತು? ಅನ್ನತಕ್ಕಂಥ ಪ್ರಶ್ನೆಗಳು ಜನರಿಂದ ಬರುತ್ತಿದ್ದಂತೆ.. ಸೆಗಣಿ ಬ್ರೈನ್ ಸೈಕೋಭಕ್ತರು ಕಣ್ಣಿಗೆ ಬಿದ್ದ ಇಲಿಬಿಲಗಳನ್ನು ಹೊಕ್ಕಿದ್ದು, ಅಲ್ಲಿ ವಾಸವಿದ್ದ ಮೂಗಿಲಿಗಳೊಡನೆ ವೀರಾವೇಶದಿಂದ ಹೋರಾಡಿ ಅವನ್ನು ಹೊರಗಾಕಿ ಬಿಲದಲ್ಲೇ ಠಿಕಾಣಿ ಹೂಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*********

ಪಾಕಿಸ್ತಾನದ ಹೊಸ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪದವಿ ಸ್ವೀಕಾರ ಪ್ರೋಗ್ರಾಂಗೆ ಹೋಗಿಬಂದ ಮಾಜಿ ಕ್ರಿಕೆಟರ್ ಸಿಕ್ಸರ್ ಸಿದ್ದುವಿನ ಮೇಲೆ ಬ್ರಿಟಿಷರ ಬೂಟನ್ನು ನಾಲಿಗೆಯಿಂದ ಸ್ವಚ್ಛಗೊಳಿಸುತ್ತಿದ್ದ ದ್ವೇಷಭಕ್ತರು ಮುಗಿಬಿದ್ದಿದ್ದಾರೆ. ಶತ್ರು ದೇಶಕ್ಕೆ ಯಾಕೆ ಹೋದ್ರಿ, ಅಲ್ಲಿನ ಆರ್ಮಿ ಚೀಫನ್ನ ಯಾಕ್ ತಬ್ಕೊಂಡ್ರಿ, ಲೊಟ್ಟೆ ಲೊಸಕು ಅಂತ ಕೂಗಾಡುತ್ತಿದ್ದಾರೆ. ಆಲ್ ಇಂಡಿಯ ನಿರುದ್ಯೋಗಿಗಳ ಸಂಘದ ‘ಭಜ ಮಂಗದಳ’ದ ಕಮಂಗಿಗಳು ಸಿದ್ದು ತಲೆ ತೆಗೆದವರಿಗೆ 5 ಲಕ್ಷ ದುಡ್ಡನ್ನ ಪೇಟಿಎಂಲಿ ಕಳಿಸ್ತೀವಿ ಅಂತ ಬೊಗಳಾಡುತ್ತಿದ್ದಾರೆ. ಎಲ್ಲವನ್ನು ಕೇಳಿಸಿಕೊಂಡ ಸಿಕ್ಸರ್ ಸಿದ್ದು ಇದೀಗ ಅರಚಾಡುತ್ತಿರೋ ‘ಬ್ರಿಟಿಶ್ ಬೂಟ್ ಪಾಲಿಶ್’ ಗ್ಯಾಂಗಿಗೆ ಒಂದೊಂದೇ ಪ್ರಶ್ನೆಗಳನ್ನು ಹಳೇಕೆರಗಳಿಗೆ ಸಿಕ್ಕಿಸಿ ಎಸೆಯತೊಡಗಿದ್ದಾರೆ. ವಾಜಪೇಯಿ ಕಾಲದಲ್ಲಿ ಕಾರ್ಗಿಲ್ ಯುದ್ಧಕ್ಕೆ ಕಾರಣನಾಗಿ ನಮ್ಮ ಸಾವಿರಾರು ಸೈನಿಕರನ್ನು ಕೊಂದ ಪರ್ವೆಜ್ ಮುಶರಫ್‍ನನ್ನು ಅ’ತಾತ’ಶತ್ರು ವಾಜಪೇಯಿ ಇಂಡಿಯಾಗೆ ಆಹ್ವಾನಿಸಿ ತಬ್ಬಿಕೊಂಡಿದ್ರಲ್ಲ.. ಅವಾಗ ಈ ‘ಬ್ರಿಟಿಶ್ ಬೂಟ್ ಪಾಲಿಶ್ ಗ್ಯಾಂಗ್’ ಯಾವ ಹೋಟೆಲಿನಲ್ಲಿ ಎಂಜಲೆತ್ತುತ್ತಿತ್ತು? “ಕರೆಯದೇ ಬರುವನ ಕರೆದು ಹಳೆಯ ರೀಬೋಕ್ ಬೂಟಲ್ಲಿ ಹೊಡೆಯೆಂದ ಸರ್ವಜ್ಞ” ಎಂಬ ಗಾದೆಯಂತೆ ಕರೆಯದಿದ್ರೂ ನವಾಜ್ ಶರೀಫ್ ಮಗಳ ಮದ್ವೆಗೆ ಪಾಕಿಸ್ತಾನಕ್ಕೆ ಓಡೋಗಿ “ಮಮ್ಮಿಗೆ ಸೀರೆ ಇಲ್ಲ, ಇರೋ ಸೀರೆಗಳೆಲ್ಲ ಹರಿದು ಹೋಗಿವೆ, ನನಗೆ ಕೊಡಿಸೋ ತಾಕತ್ತಿಲ್ಲ, ಒಂದೆರಡು ಸೀರೆ ಕೊಡ್ರಿ” ಅಂತ ನವಾಜ್ ಶರೀಫನಿಂದ ಸೀರೆ ತಗೊಂಡು ಬಂದ ‘ಗಟರ್ ಗ್ಯಾಸ್ ಮೋರಿ’ಯ ತಲೆಗೆಷ್ಟು ಬಹುಮಾನ ಕಟ್ತೀರಿ? ಪಠಾಣ್ ಕೋಟ್ ಆರ್ಮಿಬೇಸಿಗೆ ಬಾಂಬೆಸೆದು ಹೋದ ಪಾಕ್ ಉಗ್ರರನ್ನು ಸದೆ ಬಡೆಯೋದು ಬಿಟ್ಟು ಪಾಕ್ ಗುಪ್ತಚರ ದಳದ ಐಎಸ್‍ಐ ಅಧಿಕಾರಿಗಳನ್ನ ಪಠಾಣ್ ಕೋಟಿನಲ್ಲಿ ರತ್ನಗಂಬಳಿ ಹಾಸಿ ಕರೆದುಕೊಂಡ ಅರುಳುಮರುಳು ಪಕೋಡತಾತನ್ನ ಯಾವ ಸಮುದ್ರದ ಒಳಗೆ ಎಸೀತೀರಿ? ಅಂತ ಸೈಕೋ ದ್ವೇಷಭಕ್ತರನ್ನು ಕಂಡಕಂಡಲ್ಲಿ ಒದೆಯುತ್ತಿರೋ ಸಿಕ್ಸರ್ ಸಿದ್ದು ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...