Homeಅಂಕಣಗಳುಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ. ಲೇವಣ್ಣನ ಹಿಲ್ಲೇರಿಯಸ್ ಅಡ್ವೆಂಚರ್‍ಗಳಿಗೆ ಹೊಸದೊಂದು ಸಾಹಸ ಸೇರ್ಪಡೆಯಾಗಿದೆ. ತನ್ನ ಮನೆಯ ಬೆಡ್ರೂಂ ಮಂಚದ ಮೇಲೆ ಹೋಮಕುಂಡ ಕಟ್ಟಿಸಿಕೊಂಡು ಅದ್ರೊಳಗೇ ಮಲಗಿದ್ದ ಲೇವಣ್ಣನಿಗೆ ಕನಸಿನಲ್ಲಿ ಸನಿಮಾತ್ಮನು ಬಂದು ತನ್ನ ಕಾಗೆ ಕೊಕ್ಕಿನಿಂದ ಲೇವಣ್ಣನ ಕಣ್ಣಿಗೆ ಕುಕ್ಕಿಸಿ ಎಬ್ಬಿಸಿದ್ದಾನೆ. ಪ್ರವಾಹ ಬಂದು ಜನ ಸಾಯ್ತಾವರೆ, ನೀನಿಲ್ಲಿ ಕುಂಡದೊಳಗೆ ಕಾಲೆತ್ತಿಕೊಂಡು ಬಿದ್ಕಂಡಿದೀಯ ಎದ್ದೇಳೋ ಲೋಪರ್ ಎಂದು ಬೈದನಂತೆ. ತಕ್ಷಣ ಕುಂಡದೊಳಗಿನಿಂದ ಕಣ್ಣುಜ್ಜಿಕೊಂಡು ಎದ್ದ ಲೇವಣ್ಣ ಕಾರಲ್ಲಿ ಒಂದೆರಡು ಬಂಡಲ್ ಬಿಸ್ಕತ್ ಪ್ಯಾಕೆಟ್ ಎತ್ಕೊಂಡು ಪ್ರವಾಹ ಸಂತ್ರಸ್ತರ ಗಂಜಿಕೇಂದ್ರಗಳಿಗೆ ಓಡೋಗಿದೆ. ಅಲ್ಲಿ ಮೊದಲೇ ನೊಂದು ಬೆಂದು ಹೈರಾಣಾಗಿದ್ದ ಸಂತ್ರಸ್ತ ಜನರಿಗೆ ನಾಯಿಗೆ ಎಸೆಯುವಂತೆ ಬಿಸ್ಕತ್ ಎಸೆದು ಬಂದಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜನ ಕ್ಯಾಕರಿಸಿ ತುಪಾತುಪಾ ಉಗಿಯತೊಡಗಿದ್ದಾರೆ. ದೊಡ್ಡಗೌಡರ ಮಗ ಅನ್ನೋ ಕ್ವಾಲಿಫಿಕೇಷನ್ ಬಿಟ್ರೆ ಗ್ರಾಮಪಂಚಾಯ್ತಿ ಪೀವನ್ ಆಗಲೂ ಲಾಯಕ್ಕಿಲ್ಲದ ಭಯಂಕರ ವದನ ಹೊಂದಿರೋ ಲೇವಣ್ಣ, ಮುಖಕ್ಕೆ ಬೀಳ್ತಿರೋ ಎಂಜಲು ಒರೆಸಿಕೊಳ್ಳಲು ಮನೇಲಿರೋ ಟವೆಲ್ಲು, ಬೆಡ್‍ಶೀಟುಗಳು ಸಾಲದಾಗಿ ಹೊಸ ಎರಡು ಶಾಮಿಯಾನ ತರಿಸಿಕೊಂಡಿದ್ದಾರೆಂದು ಲೇವಣ್ಣನ ಅಧಿಕೃತ ಪುತ್ರ ಹೇಳಿಕೆ ಕೊಟ್ಟಿದ್ದಾರೆ. ಇದರ ನಡುವೆ ಲೇವಣ್ಣನೇನಾದ್ರೂ ಸಂತ್ರಸ್ತ ಶಿಬಿರಗಳಿಗೆ ಅಪ್ಪಿತಪ್ಪಿ ಮತ್ತೆ ಭೇಟಿ ಕೊಟ್ಟರೆ ಅಲ್ಲಿರೋ ಜನರು ಲೇವಣ್ಣನ ಕಾಲುಹಿಡಿದು ದರದರನೆ ಎಳೆದೊಯ್ದು ರಾಜಾಸೀಟ್ ಮೇಲಿಂದ ಕೆಳಕ್ಕೆಸೆಯಲು ಪ್ಲಾನ್ ಮಾಡಿದ್ದಾರೆಂದು ಗುಪ್ತಚರ ಮೂಲಗಳು ಸ್ಪಷ್ಟಪಡಿಸಿವೆ.

********

ಆಡಳಿತ ನಡೆಸಿ ಅನುಭವವಿರದ ಎಲ್ ಬೋರ್ಡ್ ಎನ್.ಡಿ.ಎ ಸರ್ಕಾರ, ಎಲ್ಲಿ ಕೈ ಇಟ್ಟರೂ ಅಲ್ಲೊಂದು ಕೊಳಕುಮಂಡಲದ ಹಾವಿನ ಕೈಲಿ ಗಚ್ಚನೆ ಕಡಿಸಿಕೊಂಡು ಕಿಟಾರ್ ಎಂದು ಕಿರುಚಿಕೊಳ್ಳುತ್ತಿರುವ ಸುದ್ದಿಗಳು ಲಭ್ಯವಾಗಿವೆ. ಕೇಂದ್ರ ಅಂಕಿಅಂಶ ಆಯೋಗ ನಡೆಸಿದ ಅವಲೋಕನದಲ್ಲಿ ಕೇಂದ್ರದ ‘ಹಾಫ್ ಮೆಂಟ್ಲು ಓಲ್ಡ್ ಮ್ಯಾನ್’ ಸರ್ಕಾರದ ಕಾಲದ ಜಿ.ಡಿ.ಪಿಯು ಹಿಂದಿನ ಯುಪಿಎ ಸರ್ಕಾರದ ಕಾಲದ ಜಿಡಿಪಿಯ ಕಾಲಧೂಳಿಗೂ ಸಮವಿಲ್ಲದಂತೆ ಯಕ್ಕುಟ್ಟಿ ಹೋಗಿರುವುದು ಬಯಲಾಗಿದೆ. ಇದನ್ನೇ ಸರ್ಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಿದಾಗ ತಲೆಯಿರುವ ಮಾಧ್ಯಮಗಳು ಪೊರಕೆ ಎತ್ತಿಕೊಂಡು ‘ಗಟರ್ ಗ್ಯಾಸ್ ಮೆಂಟ್ಲುಮ್ಯಾನ್’ ಮುಖಕ್ಕೆ ಹೆಟ್ಟಿ ‘ಏನಲೇ ಇದು ಭಾಡಕೋ’ ಎಂದು ಮಕ್ಕುಗಿದಿವೆ. ಇದರಿಂದ ನೊಂದ ಮೆಂಟ್ಲುತಾತ.. ಆ ರಿಪೋರ್ಟನ್ನೇ ವೆಬ್‍ಸೈಟಿಂದ ಕಿತ್ತು ಬಚ್ಚಿಡಲು ಹೇಳಿ, ಮತ್ತೊಮ್ಮೆ ಸಿಕ್ಕಿ ಬಿದ್ದಿದೆ. ಚಡ್ಡಿ ಹರಿದೋಗಿ ಏನೇನೋ ಕಾಣ್ತಿದೆ ನೋಡ್ಕಳಯ್ಯ ಅಂದ್ರೆ ‘ ನಾನಿರದೇ ಹಿಂಗೆ, ನೋಡಕ್ಕಾಗದಿದ್ರೆ ನೀವೇ ಕಣ್ ಮುಚ್ಕಳಿ ಅಂದ್ನಂತೆ’ ಅನ್ನೋ ಗಾದೆಯನ್ನ ಈ ಓಲ್ಡ್ ಬಫೆಲೋನ ನೋಡಿಯೇ ಬರೆದಿರಬಹುದೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

********

ಭೂಮಿಯ ಮೇಲೆ ಎಲ್ಲೂ ಕಾಣಸಿಗದ ಅತ್ಯಂತ ಶ್ರೇಷ್ಟ ಮುಠ್ಠಾಳರ ಕೊಂಪೆಯಾಗಿರೋ ಮೋತಿಜೀ ಭಕ್ತರು ಕೇರಳ ಪ್ರವಾಹದ ಸಂದರ್ಭದಲ್ಲು ತಮ್ಮ ಸೈಕೋಬುದ್ದಿಗಳನ್ನು ಬಿಡದಿರುವುದು ಆಶ್ಚರ್ಯವೇನಲ್ಲ. ಸುಪ್ರೀಂಕೋರ್ಟ್ ಶಬರಿಮಲೆ ದೇವರ ದರ್ಶನಕ್ಕೆ ಹೆಂಗಸರನ್ನು ಬಿಟ್ಟಿದ್ದೇ ಕಾರಣವೆಂದು ಈ ಅನ್ಯಗ್ರಹ ಮೂದೇವಿಗಳು ತಲೆಚಚ್ಚಿಕೊಂಡು ಅಳುತ್ತಿವೆ. ಆ ಲೆಕ್ಕದಲ್ಲಿ ನೋಡಿದರೆ ಸುಪ್ರೀಂ ತೀರ್ಪಿಗೆ ಸಿಟ್ಟಿಗೆದ್ದ ಅಯ್ಯಪ್ಪಸ್ವಾಮಿ ಕೋರ್ಟನ್ನೇ ಪ್ರವಾಹದೊಳಗೆ ಮುಳುಗಿಸುವ ಬದಲು ತನ್ನ ಟೆಂಪಲ್ಲನ್ನೇ ಯಾಕೆ ಪಂಪಾನದಿಯೊಳಗೆ ಕಂಠಮಟ್ಟ ಮುಳುಗಿಸಿಕೊಂಡನೆಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಉತ್ತರಾಖಂಡದಲ್ಲಿ ನೆರೆ ಬಂದು ಇಡೀ ಕಣಿವೆ ದೇಗುಲದ ಊರನ್ನು ಕೊಚ್ಚಿಕೊಂಡು ಹೋದಾಗ ಆ ದೇವರೇನು ಶಾಪ ಕೊಟ್ಟಿತ್ತು? ಗುಜರಾತಲ್ಲಿ ಭೂಕಂಪ ಸಂಭವಿಸಿದಾಗ ಆ ರಾಜ್ಯವೇನು ಪಾಪ ಮಾಡಿತ್ತು? ಅನ್ನತಕ್ಕಂಥ ಪ್ರಶ್ನೆಗಳು ಜನರಿಂದ ಬರುತ್ತಿದ್ದಂತೆ.. ಸೆಗಣಿ ಬ್ರೈನ್ ಸೈಕೋಭಕ್ತರು ಕಣ್ಣಿಗೆ ಬಿದ್ದ ಇಲಿಬಿಲಗಳನ್ನು ಹೊಕ್ಕಿದ್ದು, ಅಲ್ಲಿ ವಾಸವಿದ್ದ ಮೂಗಿಲಿಗಳೊಡನೆ ವೀರಾವೇಶದಿಂದ ಹೋರಾಡಿ ಅವನ್ನು ಹೊರಗಾಕಿ ಬಿಲದಲ್ಲೇ ಠಿಕಾಣಿ ಹೂಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*********

ಪಾಕಿಸ್ತಾನದ ಹೊಸ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪದವಿ ಸ್ವೀಕಾರ ಪ್ರೋಗ್ರಾಂಗೆ ಹೋಗಿಬಂದ ಮಾಜಿ ಕ್ರಿಕೆಟರ್ ಸಿಕ್ಸರ್ ಸಿದ್ದುವಿನ ಮೇಲೆ ಬ್ರಿಟಿಷರ ಬೂಟನ್ನು ನಾಲಿಗೆಯಿಂದ ಸ್ವಚ್ಛಗೊಳಿಸುತ್ತಿದ್ದ ದ್ವೇಷಭಕ್ತರು ಮುಗಿಬಿದ್ದಿದ್ದಾರೆ. ಶತ್ರು ದೇಶಕ್ಕೆ ಯಾಕೆ ಹೋದ್ರಿ, ಅಲ್ಲಿನ ಆರ್ಮಿ ಚೀಫನ್ನ ಯಾಕ್ ತಬ್ಕೊಂಡ್ರಿ, ಲೊಟ್ಟೆ ಲೊಸಕು ಅಂತ ಕೂಗಾಡುತ್ತಿದ್ದಾರೆ. ಆಲ್ ಇಂಡಿಯ ನಿರುದ್ಯೋಗಿಗಳ ಸಂಘದ ‘ಭಜ ಮಂಗದಳ’ದ ಕಮಂಗಿಗಳು ಸಿದ್ದು ತಲೆ ತೆಗೆದವರಿಗೆ 5 ಲಕ್ಷ ದುಡ್ಡನ್ನ ಪೇಟಿಎಂಲಿ ಕಳಿಸ್ತೀವಿ ಅಂತ ಬೊಗಳಾಡುತ್ತಿದ್ದಾರೆ. ಎಲ್ಲವನ್ನು ಕೇಳಿಸಿಕೊಂಡ ಸಿಕ್ಸರ್ ಸಿದ್ದು ಇದೀಗ ಅರಚಾಡುತ್ತಿರೋ ‘ಬ್ರಿಟಿಶ್ ಬೂಟ್ ಪಾಲಿಶ್’ ಗ್ಯಾಂಗಿಗೆ ಒಂದೊಂದೇ ಪ್ರಶ್ನೆಗಳನ್ನು ಹಳೇಕೆರಗಳಿಗೆ ಸಿಕ್ಕಿಸಿ ಎಸೆಯತೊಡಗಿದ್ದಾರೆ. ವಾಜಪೇಯಿ ಕಾಲದಲ್ಲಿ ಕಾರ್ಗಿಲ್ ಯುದ್ಧಕ್ಕೆ ಕಾರಣನಾಗಿ ನಮ್ಮ ಸಾವಿರಾರು ಸೈನಿಕರನ್ನು ಕೊಂದ ಪರ್ವೆಜ್ ಮುಶರಫ್‍ನನ್ನು ಅ’ತಾತ’ಶತ್ರು ವಾಜಪೇಯಿ ಇಂಡಿಯಾಗೆ ಆಹ್ವಾನಿಸಿ ತಬ್ಬಿಕೊಂಡಿದ್ರಲ್ಲ.. ಅವಾಗ ಈ ‘ಬ್ರಿಟಿಶ್ ಬೂಟ್ ಪಾಲಿಶ್ ಗ್ಯಾಂಗ್’ ಯಾವ ಹೋಟೆಲಿನಲ್ಲಿ ಎಂಜಲೆತ್ತುತ್ತಿತ್ತು? “ಕರೆಯದೇ ಬರುವನ ಕರೆದು ಹಳೆಯ ರೀಬೋಕ್ ಬೂಟಲ್ಲಿ ಹೊಡೆಯೆಂದ ಸರ್ವಜ್ಞ” ಎಂಬ ಗಾದೆಯಂತೆ ಕರೆಯದಿದ್ರೂ ನವಾಜ್ ಶರೀಫ್ ಮಗಳ ಮದ್ವೆಗೆ ಪಾಕಿಸ್ತಾನಕ್ಕೆ ಓಡೋಗಿ “ಮಮ್ಮಿಗೆ ಸೀರೆ ಇಲ್ಲ, ಇರೋ ಸೀರೆಗಳೆಲ್ಲ ಹರಿದು ಹೋಗಿವೆ, ನನಗೆ ಕೊಡಿಸೋ ತಾಕತ್ತಿಲ್ಲ, ಒಂದೆರಡು ಸೀರೆ ಕೊಡ್ರಿ” ಅಂತ ನವಾಜ್ ಶರೀಫನಿಂದ ಸೀರೆ ತಗೊಂಡು ಬಂದ ‘ಗಟರ್ ಗ್ಯಾಸ್ ಮೋರಿ’ಯ ತಲೆಗೆಷ್ಟು ಬಹುಮಾನ ಕಟ್ತೀರಿ? ಪಠಾಣ್ ಕೋಟ್ ಆರ್ಮಿಬೇಸಿಗೆ ಬಾಂಬೆಸೆದು ಹೋದ ಪಾಕ್ ಉಗ್ರರನ್ನು ಸದೆ ಬಡೆಯೋದು ಬಿಟ್ಟು ಪಾಕ್ ಗುಪ್ತಚರ ದಳದ ಐಎಸ್‍ಐ ಅಧಿಕಾರಿಗಳನ್ನ ಪಠಾಣ್ ಕೋಟಿನಲ್ಲಿ ರತ್ನಗಂಬಳಿ ಹಾಸಿ ಕರೆದುಕೊಂಡ ಅರುಳುಮರುಳು ಪಕೋಡತಾತನ್ನ ಯಾವ ಸಮುದ್ರದ ಒಳಗೆ ಎಸೀತೀರಿ? ಅಂತ ಸೈಕೋ ದ್ವೇಷಭಕ್ತರನ್ನು ಕಂಡಕಂಡಲ್ಲಿ ಒದೆಯುತ್ತಿರೋ ಸಿಕ್ಸರ್ ಸಿದ್ದು ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...