Homeಅಂಕಣಗಳುಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ. ಲೇವಣ್ಣನ ಹಿಲ್ಲೇರಿಯಸ್ ಅಡ್ವೆಂಚರ್‍ಗಳಿಗೆ ಹೊಸದೊಂದು ಸಾಹಸ ಸೇರ್ಪಡೆಯಾಗಿದೆ. ತನ್ನ ಮನೆಯ ಬೆಡ್ರೂಂ ಮಂಚದ ಮೇಲೆ ಹೋಮಕುಂಡ ಕಟ್ಟಿಸಿಕೊಂಡು ಅದ್ರೊಳಗೇ ಮಲಗಿದ್ದ ಲೇವಣ್ಣನಿಗೆ ಕನಸಿನಲ್ಲಿ ಸನಿಮಾತ್ಮನು ಬಂದು ತನ್ನ ಕಾಗೆ ಕೊಕ್ಕಿನಿಂದ ಲೇವಣ್ಣನ ಕಣ್ಣಿಗೆ ಕುಕ್ಕಿಸಿ ಎಬ್ಬಿಸಿದ್ದಾನೆ. ಪ್ರವಾಹ ಬಂದು ಜನ ಸಾಯ್ತಾವರೆ, ನೀನಿಲ್ಲಿ ಕುಂಡದೊಳಗೆ ಕಾಲೆತ್ತಿಕೊಂಡು ಬಿದ್ಕಂಡಿದೀಯ ಎದ್ದೇಳೋ ಲೋಪರ್ ಎಂದು ಬೈದನಂತೆ. ತಕ್ಷಣ ಕುಂಡದೊಳಗಿನಿಂದ ಕಣ್ಣುಜ್ಜಿಕೊಂಡು ಎದ್ದ ಲೇವಣ್ಣ ಕಾರಲ್ಲಿ ಒಂದೆರಡು ಬಂಡಲ್ ಬಿಸ್ಕತ್ ಪ್ಯಾಕೆಟ್ ಎತ್ಕೊಂಡು ಪ್ರವಾಹ ಸಂತ್ರಸ್ತರ ಗಂಜಿಕೇಂದ್ರಗಳಿಗೆ ಓಡೋಗಿದೆ. ಅಲ್ಲಿ ಮೊದಲೇ ನೊಂದು ಬೆಂದು ಹೈರಾಣಾಗಿದ್ದ ಸಂತ್ರಸ್ತ ಜನರಿಗೆ ನಾಯಿಗೆ ಎಸೆಯುವಂತೆ ಬಿಸ್ಕತ್ ಎಸೆದು ಬಂದಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜನ ಕ್ಯಾಕರಿಸಿ ತುಪಾತುಪಾ ಉಗಿಯತೊಡಗಿದ್ದಾರೆ. ದೊಡ್ಡಗೌಡರ ಮಗ ಅನ್ನೋ ಕ್ವಾಲಿಫಿಕೇಷನ್ ಬಿಟ್ರೆ ಗ್ರಾಮಪಂಚಾಯ್ತಿ ಪೀವನ್ ಆಗಲೂ ಲಾಯಕ್ಕಿಲ್ಲದ ಭಯಂಕರ ವದನ ಹೊಂದಿರೋ ಲೇವಣ್ಣ, ಮುಖಕ್ಕೆ ಬೀಳ್ತಿರೋ ಎಂಜಲು ಒರೆಸಿಕೊಳ್ಳಲು ಮನೇಲಿರೋ ಟವೆಲ್ಲು, ಬೆಡ್‍ಶೀಟುಗಳು ಸಾಲದಾಗಿ ಹೊಸ ಎರಡು ಶಾಮಿಯಾನ ತರಿಸಿಕೊಂಡಿದ್ದಾರೆಂದು ಲೇವಣ್ಣನ ಅಧಿಕೃತ ಪುತ್ರ ಹೇಳಿಕೆ ಕೊಟ್ಟಿದ್ದಾರೆ. ಇದರ ನಡುವೆ ಲೇವಣ್ಣನೇನಾದ್ರೂ ಸಂತ್ರಸ್ತ ಶಿಬಿರಗಳಿಗೆ ಅಪ್ಪಿತಪ್ಪಿ ಮತ್ತೆ ಭೇಟಿ ಕೊಟ್ಟರೆ ಅಲ್ಲಿರೋ ಜನರು ಲೇವಣ್ಣನ ಕಾಲುಹಿಡಿದು ದರದರನೆ ಎಳೆದೊಯ್ದು ರಾಜಾಸೀಟ್ ಮೇಲಿಂದ ಕೆಳಕ್ಕೆಸೆಯಲು ಪ್ಲಾನ್ ಮಾಡಿದ್ದಾರೆಂದು ಗುಪ್ತಚರ ಮೂಲಗಳು ಸ್ಪಷ್ಟಪಡಿಸಿವೆ.

********

ಆಡಳಿತ ನಡೆಸಿ ಅನುಭವವಿರದ ಎಲ್ ಬೋರ್ಡ್ ಎನ್.ಡಿ.ಎ ಸರ್ಕಾರ, ಎಲ್ಲಿ ಕೈ ಇಟ್ಟರೂ ಅಲ್ಲೊಂದು ಕೊಳಕುಮಂಡಲದ ಹಾವಿನ ಕೈಲಿ ಗಚ್ಚನೆ ಕಡಿಸಿಕೊಂಡು ಕಿಟಾರ್ ಎಂದು ಕಿರುಚಿಕೊಳ್ಳುತ್ತಿರುವ ಸುದ್ದಿಗಳು ಲಭ್ಯವಾಗಿವೆ. ಕೇಂದ್ರ ಅಂಕಿಅಂಶ ಆಯೋಗ ನಡೆಸಿದ ಅವಲೋಕನದಲ್ಲಿ ಕೇಂದ್ರದ ‘ಹಾಫ್ ಮೆಂಟ್ಲು ಓಲ್ಡ್ ಮ್ಯಾನ್’ ಸರ್ಕಾರದ ಕಾಲದ ಜಿ.ಡಿ.ಪಿಯು ಹಿಂದಿನ ಯುಪಿಎ ಸರ್ಕಾರದ ಕಾಲದ ಜಿಡಿಪಿಯ ಕಾಲಧೂಳಿಗೂ ಸಮವಿಲ್ಲದಂತೆ ಯಕ್ಕುಟ್ಟಿ ಹೋಗಿರುವುದು ಬಯಲಾಗಿದೆ. ಇದನ್ನೇ ಸರ್ಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಿದಾಗ ತಲೆಯಿರುವ ಮಾಧ್ಯಮಗಳು ಪೊರಕೆ ಎತ್ತಿಕೊಂಡು ‘ಗಟರ್ ಗ್ಯಾಸ್ ಮೆಂಟ್ಲುಮ್ಯಾನ್’ ಮುಖಕ್ಕೆ ಹೆಟ್ಟಿ ‘ಏನಲೇ ಇದು ಭಾಡಕೋ’ ಎಂದು ಮಕ್ಕುಗಿದಿವೆ. ಇದರಿಂದ ನೊಂದ ಮೆಂಟ್ಲುತಾತ.. ಆ ರಿಪೋರ್ಟನ್ನೇ ವೆಬ್‍ಸೈಟಿಂದ ಕಿತ್ತು ಬಚ್ಚಿಡಲು ಹೇಳಿ, ಮತ್ತೊಮ್ಮೆ ಸಿಕ್ಕಿ ಬಿದ್ದಿದೆ. ಚಡ್ಡಿ ಹರಿದೋಗಿ ಏನೇನೋ ಕಾಣ್ತಿದೆ ನೋಡ್ಕಳಯ್ಯ ಅಂದ್ರೆ ‘ ನಾನಿರದೇ ಹಿಂಗೆ, ನೋಡಕ್ಕಾಗದಿದ್ರೆ ನೀವೇ ಕಣ್ ಮುಚ್ಕಳಿ ಅಂದ್ನಂತೆ’ ಅನ್ನೋ ಗಾದೆಯನ್ನ ಈ ಓಲ್ಡ್ ಬಫೆಲೋನ ನೋಡಿಯೇ ಬರೆದಿರಬಹುದೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

********

ಭೂಮಿಯ ಮೇಲೆ ಎಲ್ಲೂ ಕಾಣಸಿಗದ ಅತ್ಯಂತ ಶ್ರೇಷ್ಟ ಮುಠ್ಠಾಳರ ಕೊಂಪೆಯಾಗಿರೋ ಮೋತಿಜೀ ಭಕ್ತರು ಕೇರಳ ಪ್ರವಾಹದ ಸಂದರ್ಭದಲ್ಲು ತಮ್ಮ ಸೈಕೋಬುದ್ದಿಗಳನ್ನು ಬಿಡದಿರುವುದು ಆಶ್ಚರ್ಯವೇನಲ್ಲ. ಸುಪ್ರೀಂಕೋರ್ಟ್ ಶಬರಿಮಲೆ ದೇವರ ದರ್ಶನಕ್ಕೆ ಹೆಂಗಸರನ್ನು ಬಿಟ್ಟಿದ್ದೇ ಕಾರಣವೆಂದು ಈ ಅನ್ಯಗ್ರಹ ಮೂದೇವಿಗಳು ತಲೆಚಚ್ಚಿಕೊಂಡು ಅಳುತ್ತಿವೆ. ಆ ಲೆಕ್ಕದಲ್ಲಿ ನೋಡಿದರೆ ಸುಪ್ರೀಂ ತೀರ್ಪಿಗೆ ಸಿಟ್ಟಿಗೆದ್ದ ಅಯ್ಯಪ್ಪಸ್ವಾಮಿ ಕೋರ್ಟನ್ನೇ ಪ್ರವಾಹದೊಳಗೆ ಮುಳುಗಿಸುವ ಬದಲು ತನ್ನ ಟೆಂಪಲ್ಲನ್ನೇ ಯಾಕೆ ಪಂಪಾನದಿಯೊಳಗೆ ಕಂಠಮಟ್ಟ ಮುಳುಗಿಸಿಕೊಂಡನೆಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಉತ್ತರಾಖಂಡದಲ್ಲಿ ನೆರೆ ಬಂದು ಇಡೀ ಕಣಿವೆ ದೇಗುಲದ ಊರನ್ನು ಕೊಚ್ಚಿಕೊಂಡು ಹೋದಾಗ ಆ ದೇವರೇನು ಶಾಪ ಕೊಟ್ಟಿತ್ತು? ಗುಜರಾತಲ್ಲಿ ಭೂಕಂಪ ಸಂಭವಿಸಿದಾಗ ಆ ರಾಜ್ಯವೇನು ಪಾಪ ಮಾಡಿತ್ತು? ಅನ್ನತಕ್ಕಂಥ ಪ್ರಶ್ನೆಗಳು ಜನರಿಂದ ಬರುತ್ತಿದ್ದಂತೆ.. ಸೆಗಣಿ ಬ್ರೈನ್ ಸೈಕೋಭಕ್ತರು ಕಣ್ಣಿಗೆ ಬಿದ್ದ ಇಲಿಬಿಲಗಳನ್ನು ಹೊಕ್ಕಿದ್ದು, ಅಲ್ಲಿ ವಾಸವಿದ್ದ ಮೂಗಿಲಿಗಳೊಡನೆ ವೀರಾವೇಶದಿಂದ ಹೋರಾಡಿ ಅವನ್ನು ಹೊರಗಾಕಿ ಬಿಲದಲ್ಲೇ ಠಿಕಾಣಿ ಹೂಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*********

ಪಾಕಿಸ್ತಾನದ ಹೊಸ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪದವಿ ಸ್ವೀಕಾರ ಪ್ರೋಗ್ರಾಂಗೆ ಹೋಗಿಬಂದ ಮಾಜಿ ಕ್ರಿಕೆಟರ್ ಸಿಕ್ಸರ್ ಸಿದ್ದುವಿನ ಮೇಲೆ ಬ್ರಿಟಿಷರ ಬೂಟನ್ನು ನಾಲಿಗೆಯಿಂದ ಸ್ವಚ್ಛಗೊಳಿಸುತ್ತಿದ್ದ ದ್ವೇಷಭಕ್ತರು ಮುಗಿಬಿದ್ದಿದ್ದಾರೆ. ಶತ್ರು ದೇಶಕ್ಕೆ ಯಾಕೆ ಹೋದ್ರಿ, ಅಲ್ಲಿನ ಆರ್ಮಿ ಚೀಫನ್ನ ಯಾಕ್ ತಬ್ಕೊಂಡ್ರಿ, ಲೊಟ್ಟೆ ಲೊಸಕು ಅಂತ ಕೂಗಾಡುತ್ತಿದ್ದಾರೆ. ಆಲ್ ಇಂಡಿಯ ನಿರುದ್ಯೋಗಿಗಳ ಸಂಘದ ‘ಭಜ ಮಂಗದಳ’ದ ಕಮಂಗಿಗಳು ಸಿದ್ದು ತಲೆ ತೆಗೆದವರಿಗೆ 5 ಲಕ್ಷ ದುಡ್ಡನ್ನ ಪೇಟಿಎಂಲಿ ಕಳಿಸ್ತೀವಿ ಅಂತ ಬೊಗಳಾಡುತ್ತಿದ್ದಾರೆ. ಎಲ್ಲವನ್ನು ಕೇಳಿಸಿಕೊಂಡ ಸಿಕ್ಸರ್ ಸಿದ್ದು ಇದೀಗ ಅರಚಾಡುತ್ತಿರೋ ‘ಬ್ರಿಟಿಶ್ ಬೂಟ್ ಪಾಲಿಶ್’ ಗ್ಯಾಂಗಿಗೆ ಒಂದೊಂದೇ ಪ್ರಶ್ನೆಗಳನ್ನು ಹಳೇಕೆರಗಳಿಗೆ ಸಿಕ್ಕಿಸಿ ಎಸೆಯತೊಡಗಿದ್ದಾರೆ. ವಾಜಪೇಯಿ ಕಾಲದಲ್ಲಿ ಕಾರ್ಗಿಲ್ ಯುದ್ಧಕ್ಕೆ ಕಾರಣನಾಗಿ ನಮ್ಮ ಸಾವಿರಾರು ಸೈನಿಕರನ್ನು ಕೊಂದ ಪರ್ವೆಜ್ ಮುಶರಫ್‍ನನ್ನು ಅ’ತಾತ’ಶತ್ರು ವಾಜಪೇಯಿ ಇಂಡಿಯಾಗೆ ಆಹ್ವಾನಿಸಿ ತಬ್ಬಿಕೊಂಡಿದ್ರಲ್ಲ.. ಅವಾಗ ಈ ‘ಬ್ರಿಟಿಶ್ ಬೂಟ್ ಪಾಲಿಶ್ ಗ್ಯಾಂಗ್’ ಯಾವ ಹೋಟೆಲಿನಲ್ಲಿ ಎಂಜಲೆತ್ತುತ್ತಿತ್ತು? “ಕರೆಯದೇ ಬರುವನ ಕರೆದು ಹಳೆಯ ರೀಬೋಕ್ ಬೂಟಲ್ಲಿ ಹೊಡೆಯೆಂದ ಸರ್ವಜ್ಞ” ಎಂಬ ಗಾದೆಯಂತೆ ಕರೆಯದಿದ್ರೂ ನವಾಜ್ ಶರೀಫ್ ಮಗಳ ಮದ್ವೆಗೆ ಪಾಕಿಸ್ತಾನಕ್ಕೆ ಓಡೋಗಿ “ಮಮ್ಮಿಗೆ ಸೀರೆ ಇಲ್ಲ, ಇರೋ ಸೀರೆಗಳೆಲ್ಲ ಹರಿದು ಹೋಗಿವೆ, ನನಗೆ ಕೊಡಿಸೋ ತಾಕತ್ತಿಲ್ಲ, ಒಂದೆರಡು ಸೀರೆ ಕೊಡ್ರಿ” ಅಂತ ನವಾಜ್ ಶರೀಫನಿಂದ ಸೀರೆ ತಗೊಂಡು ಬಂದ ‘ಗಟರ್ ಗ್ಯಾಸ್ ಮೋರಿ’ಯ ತಲೆಗೆಷ್ಟು ಬಹುಮಾನ ಕಟ್ತೀರಿ? ಪಠಾಣ್ ಕೋಟ್ ಆರ್ಮಿಬೇಸಿಗೆ ಬಾಂಬೆಸೆದು ಹೋದ ಪಾಕ್ ಉಗ್ರರನ್ನು ಸದೆ ಬಡೆಯೋದು ಬಿಟ್ಟು ಪಾಕ್ ಗುಪ್ತಚರ ದಳದ ಐಎಸ್‍ಐ ಅಧಿಕಾರಿಗಳನ್ನ ಪಠಾಣ್ ಕೋಟಿನಲ್ಲಿ ರತ್ನಗಂಬಳಿ ಹಾಸಿ ಕರೆದುಕೊಂಡ ಅರುಳುಮರುಳು ಪಕೋಡತಾತನ್ನ ಯಾವ ಸಮುದ್ರದ ಒಳಗೆ ಎಸೀತೀರಿ? ಅಂತ ಸೈಕೋ ದ್ವೇಷಭಕ್ತರನ್ನು ಕಂಡಕಂಡಲ್ಲಿ ಒದೆಯುತ್ತಿರೋ ಸಿಕ್ಸರ್ ಸಿದ್ದು ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

"ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ" ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು...