Homeಅಂಕಣಗಳುಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ. ಲೇವಣ್ಣನ ಹಿಲ್ಲೇರಿಯಸ್ ಅಡ್ವೆಂಚರ್‍ಗಳಿಗೆ ಹೊಸದೊಂದು ಸಾಹಸ ಸೇರ್ಪಡೆಯಾಗಿದೆ. ತನ್ನ ಮನೆಯ ಬೆಡ್ರೂಂ ಮಂಚದ ಮೇಲೆ ಹೋಮಕುಂಡ ಕಟ್ಟಿಸಿಕೊಂಡು ಅದ್ರೊಳಗೇ ಮಲಗಿದ್ದ ಲೇವಣ್ಣನಿಗೆ ಕನಸಿನಲ್ಲಿ ಸನಿಮಾತ್ಮನು ಬಂದು ತನ್ನ ಕಾಗೆ ಕೊಕ್ಕಿನಿಂದ ಲೇವಣ್ಣನ ಕಣ್ಣಿಗೆ ಕುಕ್ಕಿಸಿ ಎಬ್ಬಿಸಿದ್ದಾನೆ. ಪ್ರವಾಹ ಬಂದು ಜನ ಸಾಯ್ತಾವರೆ, ನೀನಿಲ್ಲಿ ಕುಂಡದೊಳಗೆ ಕಾಲೆತ್ತಿಕೊಂಡು ಬಿದ್ಕಂಡಿದೀಯ ಎದ್ದೇಳೋ ಲೋಪರ್ ಎಂದು ಬೈದನಂತೆ. ತಕ್ಷಣ ಕುಂಡದೊಳಗಿನಿಂದ ಕಣ್ಣುಜ್ಜಿಕೊಂಡು ಎದ್ದ ಲೇವಣ್ಣ ಕಾರಲ್ಲಿ ಒಂದೆರಡು ಬಂಡಲ್ ಬಿಸ್ಕತ್ ಪ್ಯಾಕೆಟ್ ಎತ್ಕೊಂಡು ಪ್ರವಾಹ ಸಂತ್ರಸ್ತರ ಗಂಜಿಕೇಂದ್ರಗಳಿಗೆ ಓಡೋಗಿದೆ. ಅಲ್ಲಿ ಮೊದಲೇ ನೊಂದು ಬೆಂದು ಹೈರಾಣಾಗಿದ್ದ ಸಂತ್ರಸ್ತ ಜನರಿಗೆ ನಾಯಿಗೆ ಎಸೆಯುವಂತೆ ಬಿಸ್ಕತ್ ಎಸೆದು ಬಂದಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜನ ಕ್ಯಾಕರಿಸಿ ತುಪಾತುಪಾ ಉಗಿಯತೊಡಗಿದ್ದಾರೆ. ದೊಡ್ಡಗೌಡರ ಮಗ ಅನ್ನೋ ಕ್ವಾಲಿಫಿಕೇಷನ್ ಬಿಟ್ರೆ ಗ್ರಾಮಪಂಚಾಯ್ತಿ ಪೀವನ್ ಆಗಲೂ ಲಾಯಕ್ಕಿಲ್ಲದ ಭಯಂಕರ ವದನ ಹೊಂದಿರೋ ಲೇವಣ್ಣ, ಮುಖಕ್ಕೆ ಬೀಳ್ತಿರೋ ಎಂಜಲು ಒರೆಸಿಕೊಳ್ಳಲು ಮನೇಲಿರೋ ಟವೆಲ್ಲು, ಬೆಡ್‍ಶೀಟುಗಳು ಸಾಲದಾಗಿ ಹೊಸ ಎರಡು ಶಾಮಿಯಾನ ತರಿಸಿಕೊಂಡಿದ್ದಾರೆಂದು ಲೇವಣ್ಣನ ಅಧಿಕೃತ ಪುತ್ರ ಹೇಳಿಕೆ ಕೊಟ್ಟಿದ್ದಾರೆ. ಇದರ ನಡುವೆ ಲೇವಣ್ಣನೇನಾದ್ರೂ ಸಂತ್ರಸ್ತ ಶಿಬಿರಗಳಿಗೆ ಅಪ್ಪಿತಪ್ಪಿ ಮತ್ತೆ ಭೇಟಿ ಕೊಟ್ಟರೆ ಅಲ್ಲಿರೋ ಜನರು ಲೇವಣ್ಣನ ಕಾಲುಹಿಡಿದು ದರದರನೆ ಎಳೆದೊಯ್ದು ರಾಜಾಸೀಟ್ ಮೇಲಿಂದ ಕೆಳಕ್ಕೆಸೆಯಲು ಪ್ಲಾನ್ ಮಾಡಿದ್ದಾರೆಂದು ಗುಪ್ತಚರ ಮೂಲಗಳು ಸ್ಪಷ್ಟಪಡಿಸಿವೆ.

********

ಆಡಳಿತ ನಡೆಸಿ ಅನುಭವವಿರದ ಎಲ್ ಬೋರ್ಡ್ ಎನ್.ಡಿ.ಎ ಸರ್ಕಾರ, ಎಲ್ಲಿ ಕೈ ಇಟ್ಟರೂ ಅಲ್ಲೊಂದು ಕೊಳಕುಮಂಡಲದ ಹಾವಿನ ಕೈಲಿ ಗಚ್ಚನೆ ಕಡಿಸಿಕೊಂಡು ಕಿಟಾರ್ ಎಂದು ಕಿರುಚಿಕೊಳ್ಳುತ್ತಿರುವ ಸುದ್ದಿಗಳು ಲಭ್ಯವಾಗಿವೆ. ಕೇಂದ್ರ ಅಂಕಿಅಂಶ ಆಯೋಗ ನಡೆಸಿದ ಅವಲೋಕನದಲ್ಲಿ ಕೇಂದ್ರದ ‘ಹಾಫ್ ಮೆಂಟ್ಲು ಓಲ್ಡ್ ಮ್ಯಾನ್’ ಸರ್ಕಾರದ ಕಾಲದ ಜಿ.ಡಿ.ಪಿಯು ಹಿಂದಿನ ಯುಪಿಎ ಸರ್ಕಾರದ ಕಾಲದ ಜಿಡಿಪಿಯ ಕಾಲಧೂಳಿಗೂ ಸಮವಿಲ್ಲದಂತೆ ಯಕ್ಕುಟ್ಟಿ ಹೋಗಿರುವುದು ಬಯಲಾಗಿದೆ. ಇದನ್ನೇ ಸರ್ಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಿದಾಗ ತಲೆಯಿರುವ ಮಾಧ್ಯಮಗಳು ಪೊರಕೆ ಎತ್ತಿಕೊಂಡು ‘ಗಟರ್ ಗ್ಯಾಸ್ ಮೆಂಟ್ಲುಮ್ಯಾನ್’ ಮುಖಕ್ಕೆ ಹೆಟ್ಟಿ ‘ಏನಲೇ ಇದು ಭಾಡಕೋ’ ಎಂದು ಮಕ್ಕುಗಿದಿವೆ. ಇದರಿಂದ ನೊಂದ ಮೆಂಟ್ಲುತಾತ.. ಆ ರಿಪೋರ್ಟನ್ನೇ ವೆಬ್‍ಸೈಟಿಂದ ಕಿತ್ತು ಬಚ್ಚಿಡಲು ಹೇಳಿ, ಮತ್ತೊಮ್ಮೆ ಸಿಕ್ಕಿ ಬಿದ್ದಿದೆ. ಚಡ್ಡಿ ಹರಿದೋಗಿ ಏನೇನೋ ಕಾಣ್ತಿದೆ ನೋಡ್ಕಳಯ್ಯ ಅಂದ್ರೆ ‘ ನಾನಿರದೇ ಹಿಂಗೆ, ನೋಡಕ್ಕಾಗದಿದ್ರೆ ನೀವೇ ಕಣ್ ಮುಚ್ಕಳಿ ಅಂದ್ನಂತೆ’ ಅನ್ನೋ ಗಾದೆಯನ್ನ ಈ ಓಲ್ಡ್ ಬಫೆಲೋನ ನೋಡಿಯೇ ಬರೆದಿರಬಹುದೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

********

ಭೂಮಿಯ ಮೇಲೆ ಎಲ್ಲೂ ಕಾಣಸಿಗದ ಅತ್ಯಂತ ಶ್ರೇಷ್ಟ ಮುಠ್ಠಾಳರ ಕೊಂಪೆಯಾಗಿರೋ ಮೋತಿಜೀ ಭಕ್ತರು ಕೇರಳ ಪ್ರವಾಹದ ಸಂದರ್ಭದಲ್ಲು ತಮ್ಮ ಸೈಕೋಬುದ್ದಿಗಳನ್ನು ಬಿಡದಿರುವುದು ಆಶ್ಚರ್ಯವೇನಲ್ಲ. ಸುಪ್ರೀಂಕೋರ್ಟ್ ಶಬರಿಮಲೆ ದೇವರ ದರ್ಶನಕ್ಕೆ ಹೆಂಗಸರನ್ನು ಬಿಟ್ಟಿದ್ದೇ ಕಾರಣವೆಂದು ಈ ಅನ್ಯಗ್ರಹ ಮೂದೇವಿಗಳು ತಲೆಚಚ್ಚಿಕೊಂಡು ಅಳುತ್ತಿವೆ. ಆ ಲೆಕ್ಕದಲ್ಲಿ ನೋಡಿದರೆ ಸುಪ್ರೀಂ ತೀರ್ಪಿಗೆ ಸಿಟ್ಟಿಗೆದ್ದ ಅಯ್ಯಪ್ಪಸ್ವಾಮಿ ಕೋರ್ಟನ್ನೇ ಪ್ರವಾಹದೊಳಗೆ ಮುಳುಗಿಸುವ ಬದಲು ತನ್ನ ಟೆಂಪಲ್ಲನ್ನೇ ಯಾಕೆ ಪಂಪಾನದಿಯೊಳಗೆ ಕಂಠಮಟ್ಟ ಮುಳುಗಿಸಿಕೊಂಡನೆಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಉತ್ತರಾಖಂಡದಲ್ಲಿ ನೆರೆ ಬಂದು ಇಡೀ ಕಣಿವೆ ದೇಗುಲದ ಊರನ್ನು ಕೊಚ್ಚಿಕೊಂಡು ಹೋದಾಗ ಆ ದೇವರೇನು ಶಾಪ ಕೊಟ್ಟಿತ್ತು? ಗುಜರಾತಲ್ಲಿ ಭೂಕಂಪ ಸಂಭವಿಸಿದಾಗ ಆ ರಾಜ್ಯವೇನು ಪಾಪ ಮಾಡಿತ್ತು? ಅನ್ನತಕ್ಕಂಥ ಪ್ರಶ್ನೆಗಳು ಜನರಿಂದ ಬರುತ್ತಿದ್ದಂತೆ.. ಸೆಗಣಿ ಬ್ರೈನ್ ಸೈಕೋಭಕ್ತರು ಕಣ್ಣಿಗೆ ಬಿದ್ದ ಇಲಿಬಿಲಗಳನ್ನು ಹೊಕ್ಕಿದ್ದು, ಅಲ್ಲಿ ವಾಸವಿದ್ದ ಮೂಗಿಲಿಗಳೊಡನೆ ವೀರಾವೇಶದಿಂದ ಹೋರಾಡಿ ಅವನ್ನು ಹೊರಗಾಕಿ ಬಿಲದಲ್ಲೇ ಠಿಕಾಣಿ ಹೂಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*********

ಪಾಕಿಸ್ತಾನದ ಹೊಸ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪದವಿ ಸ್ವೀಕಾರ ಪ್ರೋಗ್ರಾಂಗೆ ಹೋಗಿಬಂದ ಮಾಜಿ ಕ್ರಿಕೆಟರ್ ಸಿಕ್ಸರ್ ಸಿದ್ದುವಿನ ಮೇಲೆ ಬ್ರಿಟಿಷರ ಬೂಟನ್ನು ನಾಲಿಗೆಯಿಂದ ಸ್ವಚ್ಛಗೊಳಿಸುತ್ತಿದ್ದ ದ್ವೇಷಭಕ್ತರು ಮುಗಿಬಿದ್ದಿದ್ದಾರೆ. ಶತ್ರು ದೇಶಕ್ಕೆ ಯಾಕೆ ಹೋದ್ರಿ, ಅಲ್ಲಿನ ಆರ್ಮಿ ಚೀಫನ್ನ ಯಾಕ್ ತಬ್ಕೊಂಡ್ರಿ, ಲೊಟ್ಟೆ ಲೊಸಕು ಅಂತ ಕೂಗಾಡುತ್ತಿದ್ದಾರೆ. ಆಲ್ ಇಂಡಿಯ ನಿರುದ್ಯೋಗಿಗಳ ಸಂಘದ ‘ಭಜ ಮಂಗದಳ’ದ ಕಮಂಗಿಗಳು ಸಿದ್ದು ತಲೆ ತೆಗೆದವರಿಗೆ 5 ಲಕ್ಷ ದುಡ್ಡನ್ನ ಪೇಟಿಎಂಲಿ ಕಳಿಸ್ತೀವಿ ಅಂತ ಬೊಗಳಾಡುತ್ತಿದ್ದಾರೆ. ಎಲ್ಲವನ್ನು ಕೇಳಿಸಿಕೊಂಡ ಸಿಕ್ಸರ್ ಸಿದ್ದು ಇದೀಗ ಅರಚಾಡುತ್ತಿರೋ ‘ಬ್ರಿಟಿಶ್ ಬೂಟ್ ಪಾಲಿಶ್’ ಗ್ಯಾಂಗಿಗೆ ಒಂದೊಂದೇ ಪ್ರಶ್ನೆಗಳನ್ನು ಹಳೇಕೆರಗಳಿಗೆ ಸಿಕ್ಕಿಸಿ ಎಸೆಯತೊಡಗಿದ್ದಾರೆ. ವಾಜಪೇಯಿ ಕಾಲದಲ್ಲಿ ಕಾರ್ಗಿಲ್ ಯುದ್ಧಕ್ಕೆ ಕಾರಣನಾಗಿ ನಮ್ಮ ಸಾವಿರಾರು ಸೈನಿಕರನ್ನು ಕೊಂದ ಪರ್ವೆಜ್ ಮುಶರಫ್‍ನನ್ನು ಅ’ತಾತ’ಶತ್ರು ವಾಜಪೇಯಿ ಇಂಡಿಯಾಗೆ ಆಹ್ವಾನಿಸಿ ತಬ್ಬಿಕೊಂಡಿದ್ರಲ್ಲ.. ಅವಾಗ ಈ ‘ಬ್ರಿಟಿಶ್ ಬೂಟ್ ಪಾಲಿಶ್ ಗ್ಯಾಂಗ್’ ಯಾವ ಹೋಟೆಲಿನಲ್ಲಿ ಎಂಜಲೆತ್ತುತ್ತಿತ್ತು? “ಕರೆಯದೇ ಬರುವನ ಕರೆದು ಹಳೆಯ ರೀಬೋಕ್ ಬೂಟಲ್ಲಿ ಹೊಡೆಯೆಂದ ಸರ್ವಜ್ಞ” ಎಂಬ ಗಾದೆಯಂತೆ ಕರೆಯದಿದ್ರೂ ನವಾಜ್ ಶರೀಫ್ ಮಗಳ ಮದ್ವೆಗೆ ಪಾಕಿಸ್ತಾನಕ್ಕೆ ಓಡೋಗಿ “ಮಮ್ಮಿಗೆ ಸೀರೆ ಇಲ್ಲ, ಇರೋ ಸೀರೆಗಳೆಲ್ಲ ಹರಿದು ಹೋಗಿವೆ, ನನಗೆ ಕೊಡಿಸೋ ತಾಕತ್ತಿಲ್ಲ, ಒಂದೆರಡು ಸೀರೆ ಕೊಡ್ರಿ” ಅಂತ ನವಾಜ್ ಶರೀಫನಿಂದ ಸೀರೆ ತಗೊಂಡು ಬಂದ ‘ಗಟರ್ ಗ್ಯಾಸ್ ಮೋರಿ’ಯ ತಲೆಗೆಷ್ಟು ಬಹುಮಾನ ಕಟ್ತೀರಿ? ಪಠಾಣ್ ಕೋಟ್ ಆರ್ಮಿಬೇಸಿಗೆ ಬಾಂಬೆಸೆದು ಹೋದ ಪಾಕ್ ಉಗ್ರರನ್ನು ಸದೆ ಬಡೆಯೋದು ಬಿಟ್ಟು ಪಾಕ್ ಗುಪ್ತಚರ ದಳದ ಐಎಸ್‍ಐ ಅಧಿಕಾರಿಗಳನ್ನ ಪಠಾಣ್ ಕೋಟಿನಲ್ಲಿ ರತ್ನಗಂಬಳಿ ಹಾಸಿ ಕರೆದುಕೊಂಡ ಅರುಳುಮರುಳು ಪಕೋಡತಾತನ್ನ ಯಾವ ಸಮುದ್ರದ ಒಳಗೆ ಎಸೀತೀರಿ? ಅಂತ ಸೈಕೋ ದ್ವೇಷಭಕ್ತರನ್ನು ಕಂಡಕಂಡಲ್ಲಿ ಒದೆಯುತ್ತಿರೋ ಸಿಕ್ಸರ್ ಸಿದ್ದು ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...