Homeಅಂಕಣಗಳುಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

ಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‍ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮಥ್ರ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ. ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ಥರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.
ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗಿ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನ ತಳೆಯುತ್ತಾರೆ. 500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‍ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲವೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...