Homeಕರ್ನಾಟಕಬಡತಾಯಂದಿರ ಪರವಾಗಿ ದನಿಯೆತ್ತಿದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ...

ಬಡತಾಯಂದಿರ ಪರವಾಗಿ ದನಿಯೆತ್ತಿದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ…

- Advertisement -
- Advertisement -

ಮದ್ಯ ನಿಷೇಧದ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆಯಬೇಕೆಂದು ಒತ್ತಾಯಿಸಿ ’ಮದ್ಯ ನಿಷೇಧ ಆಂದೋಲ’ದ ವತಿಯಿಂದ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸ್ವಾತಂತ್ರ್ಯ ಸೇನಾನಿ ಎಚ್. ಎಸ್ ದೊರೆಸ್ವಾಮಿಯವರು ಭಾಗವಹಿಸಿ ಹೋರಾಟ ನಿರತ ಬಡ ಮಹಿಳೆಯರಿಗೆ ಬೆಂಬಲ ಸೂಚಿಸಿದ್ದಾರೆ.

ಪಾನಮುಕ್ತ ಕರ್ನಾಟಕ ಆಗಬೇಕು ಅಂತ ಈ ಹೆಣ್ಣುಮಕ್ಕಳು ಕಳೆದ ಬಾರಿ ಚಿತ್ರದುರ್ಗದಿಂದ ಬೆಂಗಳೂರಿಗೆ ಬಂದಿದ್ರು. ಆಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ರು. ಅವರು ಯಾಕೆ ಬಂದಿದ್ದಾರೆ ಏನು ಎತ್ತ ಅಂತ ಕೇಳಲೇ ಇಲ್ಲ. ಪಾಪ ಹೆಣ್ಣುಮಕ್ಕಳು ವಾಪಾಸ್ ಹೋದ್ರು. ಈಗ ಯಡಿಯೂರಪ್ಪ ಇದ್ದಾರೆ. ಹೆಣ್ಣುಮಕ್ಕಳು ಚಳವಳಿ ಮಾಡಲು ಬಂದಿಲ್ಲ, ಬಸಲಿಗೆ ಒಂದು ಸಭೆ ಮಾಡಲು ಬಂದಿದ್ದಾರೆ ಅದಕ್ಕೂ ಸಮಯ ಕೊಟ್ಟಿಲ್ಲ ಅಂದ್ರೆ ಹೇಗೆ? ಎಂದು ಶತಾಯುಷಿಗಳು ಬೇಸರ ವ್ಯಕ್ತಪಡಿಸಿದರು.

ಸತ್ಯಾಗ್ರಹಕ್ಕೆ ಪೋಲಿಸರೂ ಸ್ಥಳವೇ ಕೊಡಲ್ಲ ಅಂದ್ರೆ ಹೇಗೆ? ಮುಂದಿನ ದಿನಗಳಲ್ಲಿ ನೀವು ಹೀಗೆ ಮಾಡಿದ್ರೆ ನಮಗೆ ಬೇಕಾದ ಜಾಗದಲ್ಲಿ ಕೂತುಕೊಳ್ಳುತ್ತೇವೆ, ಬೇಕಾದ್ರೆ ಜೈಲಿಗೆ ಹಾಕಿ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳನ್ನೇ ಬೀದಿಪಾಲು ಮಾಡುತ್ತಿರೋದು ಸರಿ ಅಲ್ಲ. ನಾವು ಕಲ್ಲು, ದೊಣ್ಣೆ, ಬಾಂಬು ತಂದಿಲ್ಲ, ಬದಲಿಗೆ ಶಾಂತರೀತಿಯಿಂದ ಹೋರಾಟ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮದ್ಯ ನಿಷೇಧದ ಹೋರಾಟಕ್ಕೆ ಯಡಿಯೂರಪ್ಪ ಪೂರ್ಣ ಬೆಂಬಲ ಕೊಡ್ತೀವಿ ಅಂತ ಆಗ ಹೇಳಿದ್ರು. ಈಗ ಅವರ ಮಾತನ್ನೇ ಪುಷ್ಟಿ ಕೊಡೋಕೆ ಬಂದಿದ್ದೇವೆ. ಮದ್ಯ ನಿಷೇಧಕ್ಕೆ ಕೇಂದ್ರ ಸರ್ಕಾರ ಕೂಡ ಬೆಂಬಲಿಸಲಿದೆ. ಪೂರ್ಣಪ್ರತಿಬಂದಕ ಮಾಡೋದ್ರಿಂದ ರಾಜ್ಯ ಸರ್ಕಾರಕ್ಕೆ ಮೂರು ವರ್ಷಕ್ಕೆ ಆಗುವ ನಷ್ಟದ ಅರ್ಧ ಹಣ ಕೇಂದ್ರ ಕೊಡುತ್ತೆ ಅಂತ ಹೇಳಿದೆ. ಹಾಗಾಗಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳ ಕಛೇರಿ ಇಂದ ಸಭೆಗೆ ಇಂದೇ ನಮ್ಮನ್ನು ಕರಿಸುತ್ತಾರೆ ಅಂತ ನಂಬಿಕೆ ಇದೆ‌. ಏಕೆಂದರೆ ನಾವು ನಮ್ಮ ವಯಕ್ತಿಕ ವಿಚಾರ ಮಾತಾಡೋಕೆ ಬಂದಿಲ್ಲ. ಇದು ಸಾಮಾಜಿಕ ಪಿಡುಗು, ಇದನ್ನು ತೊಲಗಿಸಬೇಕು. ಅದಕ್ಕೆ ಸರ್ಕಾರದ, ಮುಖ್ಯಮಂತ್ರಿಗಳ ಜವಾಬ್ದಾರಿಯೂ ಇರುತ್ತದೆ ಎಂಬುದನ್ನು ಮರೆಯಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲಿಗೆ, ಹೋರಾಟವಿರುವ ರಾಯಚೂರು ಕಡೆಯ ಊರುಗಳಲ್ಲಾದರೂ ಹೆಂಡಮಾರಾಟ ನಿಲ್ಲಿಸಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...