Homeನೂರರ ನೋಟಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.

- Advertisement -
- Advertisement -

ನನ್ನ ವಿಷಯದಲ್ಲಿ ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಪತ್ರ ವ್ಯವಹಾರವನ್ನು ಇಲ್ಲಿ ಮುದ್ರಿಸಲಾಗಿದೆ.

ಉಭಯತ್ರರೂ ನನ್ನ ಸ್ನೇಹಿತರು ಹಾಗೂ ಹಿತೈಷಿಗಳು. ದೇವನೂರು ಮಹದೇವ ಅವರು ತಮ್ಮ ಪತ್ರದಲ್ಲಿ ಅಸಲಿಯನ್ನು ನಕಲಿ ಮಾಡುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನ್ನ ಮೇಲೆ ಸಲ್ಲದ ಆರೋಪ ಹೊರೆಸಿ ನನ್ನನ್ನು ನಕಲಿ ಹೋರಾಟಗಾರ ಪಾಕ್ ಏಜೆಂಟ್ ಎಂದೆಲ್ಲ ಆಧಾರ ರಹಿತ ಆಪಾದನೆ ಮಾಡಿ ತೇಜೋವಧೆ ಮಾಡಿರುವ ಬಸವ ಗೌಡ ಯತ್ನಾಳ್ ನಾನು ನಕಲಿ ಪತ್ರಕರ್ತ, 38 ದಿನಗಳ ಪೌರವಾಣಿ ಸಂಪಾದಕ, ಅರುಳು ಮರುಳು ಎಂದೆಲ್ಲ ಅಪ್ಪಟ್ಟ ಸುಳ್ಳು ಆರೋಪಗಳನ್ನು ಮಾಡಿ ನನ್ನ ಚಾರಿತ್ರ್ಯ ವಧೆ ಮಾಡಿರುವ ಬಾಬುಕೃಷ್ಣಮೂರ್ತಿ ಮುಂತಾದ ಮಹನೀಯರೆಲ್ಲರನ್ನೂ ಕುರಿತು ದೇವನೂರು ಮಹದೇವ ನೊಂದು ನುಡಿದಿದ್ದಾರೆ.

ಮಹಾದೇವು ಮುಂದುವರೆದು ಕೊಳೆತ ಹಣ್ಣುಗಳ ಜೊತೆ ತಾಜಾ ಹಣ್ಣುಗಳು ಬೆರೆತುಹೊದಾಗ, ಅವೂ ಕೆಡಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಮಹದೇವರ ಈ ಮಾತು ಸುರೇಶ್‌ಕುಮಾರ್ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸುರೇಶ್‌ಕುಮಾರ್ ಅವರು ದೇವನೂರು ಮಹದೇವ ಅವರಿಗೆ ಈ ಪ್ರಶ್ನೆಗೆ ಉತ್ತರ ಕೊಡುವುದರಲ್ಲಿ ಮುಗ್ಗರಿಸಿ, ನನ್ನವರನ್ನು ಡಿಫೆಂಡ್ ಮಾಡಿಕೊಳ್ಳುವುದು ನನ್ನ ಧರ್ಮ ಎಂದು ಉತ್ತರಿಸಿದ್ದಾರೆ. ಅವರು ಯಾರನ್ನು ಡಿಫೆಂಡ್ ಮಾಡಿಕೊಂಡರು ಎಂಬುದನ್ನೂ ತಿಳಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಇದನ್ನೂ ಓದಿ: ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..


ಬ್ರಿಟಿಷರ ವಿರುದ್ಧ ಅಷ್ಟೊಂದು ತೀವ್ರತೆಯಿಂದ ಹೋರಾಡಿದ ವೀರಸಾವರ್ಕರ್ ಕರಿನೀರುಶಿಕ್ಷೆ ಅನುಭವಿಸುವಾಗ ಏಕೆ ಶತ್ರು ಬ್ರಿಟಿಷರಿಗೆ ಶರಣಾಗತರಾದರು? ಬ್ರಿಟಿಷರು ಹಾಕಿದ ಎಲ್ಲ ಷರತ್ತುಗಳಿಗೆ ಅಂದರೆ ನಾನು ಬಿಡುಗಡೆಯಾದರೆ ನನ್ನ ಜಿಲ್ಲೆಬಿಟ್ಟು ಹೊರಗೆ ಓಡಾಡುವುದಿಲ್ಲ. ಪತ್ರಿಕೆಗಳಿಗೆ ಲೇಖನ ಬರೆಯುವುದಿಲ್ಲ. ನಿಮ್ಮ ಆಜ್ಞಾಪಾಲಕನಾಗಿರುತ್ತೇನೆ ಎಂದೆಲ್ಲ ಬರೆದುಕೊಡಲು ಅವರ ಮನಸ್ಸು ಹೇಗೆ ಒಪ್ಪಿಕೊಂಡಿತು? ಧರ್ಮ ಗ್ಲಾನಿ ಅವರಲ್ಲಿ ಹೇಗೆ ಉಂಟಾಯಿತು? ಎಂದು ವೀರ ಸಾವರ್ಕರ್ ನಡವಳಿಕೆಯನ್ನು ಒಪ್ಪಿಕೊಳ್ಳುವ ಮೊದಲು ಚಿಂತಿಸಬೇಡವೇ ಸುರೇಶ್‌ಕುಮಾರ್ ಅವರೇ?

ನನ್ನನ್ನು ಶಾಸನ ಸಭೆಯಲ್ಲಿ ಮೇಲ್ಮನೆ ಸದಸ್ಯ ಬಿಜೆಪಿ ಎಂಎಲ್‌ಸಿ ರವಿಕುಮಾರ್ ನನಗೆ ಅಂತರಾಷ್ಟ್ರೀಯ ವ್ಯಕ್ತಿಗಳ ಸಂಬಂಧ ಇದೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಮಂತ್ರಿ ಈಶ್ವರಪ್ಪನವರು ನಾನು ಯಾರದ್ದೋ ಜೊತೆಗಿರುವ ಫೋಟೊ ತೋರಿಸಿ ಪಾಕಿಸ್ತಾನದ ನಂಟು ನನಗಿದೆ ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ನಾನು ಅತಿಥಿಯಾಗಿ ಹೋಗಿರುವ ನೂರಾರು ಸಮಾರಂಭಗಳಲ್ಲಿ ಸಮಾರಂಭ ಮುಗಿದ ಮೇಲೆ ಜನ ನನ್ನ ಜೊತೆ ಫೋಟೊ ತೆಗೆಸಿಕೊಳ್ಳಲು ಮುಗಿಬೀಳುತ್ತಾರೆ. ಹೀಗೆ ಫೋಟೊ ತೆಗೆಸಿಕೊಂಡವರು ಸಾವಿರಾರು ಜನ, ಅದರಲ್ಲಿ ಇದೂ ಒಂದಿರಬಹುದು. ಅಷ್ಟಕ್ಕೇ ನನ್ನನ್ನು ನಕ್ಸಲಿಯ, Anti National, ಪಾಕಿಸ್ತಾನಿ ಏಜೆಂಟ್ ಎಂದು ಕರೆಯವರು ಮೊದಲು ನನ್ನ ಅರಾಷ್ಟ್ರಿಕತೆಗೆ, ಪಾಕಿಸ್ತಾನ್ ಏಜೆಂಟ್ ಎಂಬುದಕ್ಕೆ ಬೇರೆ ಪುರಾವೆಗಳನ್ನು ನೀಡುವ ಒಂದು ಫೋಟೊ ತೋರಿಸಿ. ಇಂತಹ ಗುರುತರ ಆಪಾದನೆ ಮಾಡುವುದು ಮಂತ್ರಿವರ್ಯರಿಗೆ, ಶಾಸಕರಿಗೆ ಗೌರವ ತರುವುದಿಲ್ಲ.

ಅನಂತಕುಮಾರ್ ರಾಷ್ಟ್ರವಿರೊಧಿ ವ್ಯಕ್ತಿ ಎಂದು ಹೇಳಿ ನನಗೆ ಧಿಕ್ಕಾರ ಹೇಳಿದ್ದು, ಮಂತ್ರಿಗಳಾದ ಸೋಮಣ್ಣ, ಈಶ್ವರಪ್ಪ ಮುಂತಾದವರು ನನ್ನ ಮೇಲೆ ಆರೊಪಗಳನ್ನು ಮಾಡಿದ್ದು ನಿಮಗೆ ಸಮ್ಮತ ಮತ್ತು ಅವರನ್ನೆಲ್ಲ ಬೆಂಬಲಿಸುವುದು ನಿಮ್ಮ ಧರ್ಮ ಎಂದು ನಿಮ್ಮ ಹೃದಯ ಒಪ್ಪುತ್ತದೆಯೇ?

ವೀರಸಾವರ್ಕರರಿಗೂ, ಭಗತ್‌ಸಿಂಗ್‌ಗೂ ಬ್ರಿಟಿಷರ ಬಗೆಗೆ ಒಂದೇ ಬಗೆಯ ಭಾವನೆ ಇತ್ತು. ಬ್ರಿಟಿಷರನ್ನು ಭಾರತದಿಂದ ಓಡಿಸಲು ಅವರದೇ ಕಾರ್ಯಕ್ರಮವಿತ್ತು, ಭಗತ್‌ಸಿಂಗ್‌ಗೆ ಮರಣದಂಡನೆ ವಿಧಿಸಿ ಸೆರೆಮನೆಯಲ್ಲಿಟ್ಟಿದ್ದರು. ಆಗ ಅವರ ತಂದೆ ಬ್ರಿಟಿಷರಿಗೆ ಪತ್ರ ಬರೆದು ‘ನನ್ನ ಮಗ ತಿಳಿಯದೆ ಈ ಹತ್ಯೆ ಮಾಡಿದ್ದಾನೆ ದಯವಿಟ್ಟು ಅವನಿಗೆ ಪ್ರಾಣಭಿಕ್ಷೆ ನೀಡಿ’ ಎಂದು ಪತ್ರ ಬರೆದಿರುವ ವಿಚಾರ ಭಗತ್‌ಸಿಂಗ್‌ಗೆ ಗೊತ್ತಾಯಿತು. ನನ್ನ ತಂದೆ ಪುತ್ರ ಮೋಹದಿಂದ ನನ್ನ ಪ್ರಾಣ ಉಳಿಸಲು ನಮ್ಮ ಶತ್ರುಗಳಾದ ಬ್ರಿಟಿಷರಲ್ಲಿ ನನ್ನ ಪ್ರಾಣಭಿಕ್ಷೆ ಕೋರಿದ್ದಾರೆ ಇವರೆಂತಹ ತಂದೆ! ನನ್ನನ್ನು ಬ್ರಿಟಿಷರು ಪ್ರಾಣಭಿಕ್ಷೆ ನೀಡಿ ಬಿಡುಗಡೆ ಮಾಡಿದರೂ ನಾನೂ ಬ್ರಿಟಿಷ್ ಅಧಿಕಾರಿಗಳನ್ನು ಕೊಲ್ಲುವ ಕಾರ್ಯವನ್ನು ಮುಂದುವರೆಸುತ್ತೇನೆ ಎಂದು ಘರ್ಜಿಸಿದರು.

ತನ್ನ ಉಸಿರುವವರೆಗೆ ದೇಶಭಕ್ತಿಯನ್ನು ಬೆಳಗಿದ ಭಗತ್‌ಸಿಂಗ್ ಎಲ್ಲಿ? ಹೋರಾಟದ ಮಧ್ಯೆಯೇ ಶತ್ರುವಿಗೆ ಶರಣಾಗತನಾಗಿ, ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪು ಮಸಿ ಬಳಿದ ವೀರಸಾವರ್ಕರ್ ಎಲ್ಲಿ? ತನ್ನವರನ್ನು ಬೆಂಬಲಿಸುವ ಆತುರದಲ್ಲಿ ಹೋರಾಟದ ಚರಿತ್ರೆಯನ್ನೇ ಮರೆತರು ಸಚಿವ ಸುರೇಶ್‌ಕುಮಾರ್!

ಇನ್ನು ಎರಡನೆಯ ವಿಷಯವೆಂದರೆ ನಾನು ಮೋದಿಯವರನ್ನು ಮುಗಿಸಿಬಿಡಿ ಎಂದು ಹೇಳಿದೆನೆಂಬುದು. ಈ ಮಾತನ್ನು ನಾನು ಆಡಿರುವುದು ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ. ಮಹದೇವು ಈ ವಿಚಾರದಲ್ಲಿ ವಿವರಿಸಿ ಸಮಜಾಯಿಸಿ ನೀಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಹೇಳಿದ ಮಾತು. ಚುನಾವಣೆಯಲ್ಲಿ ಹೇಗಾದರೂ ಮಾಡಿ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜಾತ್ಯಾತೀತ ಜನತಾದಳಗಳನ್ನು ಸೋಲಿಸಬೇಕೆಂದು ಮೋದಿ ಪಣ ತೊಟ್ಟಿದ್ದ ಸಂದರ್ಭ ಅದು. ಆದರೆ ಆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬೇಕಾದಷ್ಟು ಸ್ಥಾನಗಳು ಮೋದಿಯ ಬಿಜೆಪಿಗೆ ಲಭಿಸಲೇ ಇಲ್ಲ.

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ.

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...