Homeನೂರರ ನೋಟಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.

- Advertisement -
- Advertisement -

ನನ್ನ ವಿಷಯದಲ್ಲಿ ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಪತ್ರ ವ್ಯವಹಾರವನ್ನು ಇಲ್ಲಿ ಮುದ್ರಿಸಲಾಗಿದೆ.

ಉಭಯತ್ರರೂ ನನ್ನ ಸ್ನೇಹಿತರು ಹಾಗೂ ಹಿತೈಷಿಗಳು. ದೇವನೂರು ಮಹದೇವ ಅವರು ತಮ್ಮ ಪತ್ರದಲ್ಲಿ ಅಸಲಿಯನ್ನು ನಕಲಿ ಮಾಡುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನ್ನ ಮೇಲೆ ಸಲ್ಲದ ಆರೋಪ ಹೊರೆಸಿ ನನ್ನನ್ನು ನಕಲಿ ಹೋರಾಟಗಾರ ಪಾಕ್ ಏಜೆಂಟ್ ಎಂದೆಲ್ಲ ಆಧಾರ ರಹಿತ ಆಪಾದನೆ ಮಾಡಿ ತೇಜೋವಧೆ ಮಾಡಿರುವ ಬಸವ ಗೌಡ ಯತ್ನಾಳ್ ನಾನು ನಕಲಿ ಪತ್ರಕರ್ತ, 38 ದಿನಗಳ ಪೌರವಾಣಿ ಸಂಪಾದಕ, ಅರುಳು ಮರುಳು ಎಂದೆಲ್ಲ ಅಪ್ಪಟ್ಟ ಸುಳ್ಳು ಆರೋಪಗಳನ್ನು ಮಾಡಿ ನನ್ನ ಚಾರಿತ್ರ್ಯ ವಧೆ ಮಾಡಿರುವ ಬಾಬುಕೃಷ್ಣಮೂರ್ತಿ ಮುಂತಾದ ಮಹನೀಯರೆಲ್ಲರನ್ನೂ ಕುರಿತು ದೇವನೂರು ಮಹದೇವ ನೊಂದು ನುಡಿದಿದ್ದಾರೆ.

ಮಹಾದೇವು ಮುಂದುವರೆದು ಕೊಳೆತ ಹಣ್ಣುಗಳ ಜೊತೆ ತಾಜಾ ಹಣ್ಣುಗಳು ಬೆರೆತುಹೊದಾಗ, ಅವೂ ಕೆಡಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಮಹದೇವರ ಈ ಮಾತು ಸುರೇಶ್‌ಕುಮಾರ್ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸುರೇಶ್‌ಕುಮಾರ್ ಅವರು ದೇವನೂರು ಮಹದೇವ ಅವರಿಗೆ ಈ ಪ್ರಶ್ನೆಗೆ ಉತ್ತರ ಕೊಡುವುದರಲ್ಲಿ ಮುಗ್ಗರಿಸಿ, ನನ್ನವರನ್ನು ಡಿಫೆಂಡ್ ಮಾಡಿಕೊಳ್ಳುವುದು ನನ್ನ ಧರ್ಮ ಎಂದು ಉತ್ತರಿಸಿದ್ದಾರೆ. ಅವರು ಯಾರನ್ನು ಡಿಫೆಂಡ್ ಮಾಡಿಕೊಂಡರು ಎಂಬುದನ್ನೂ ತಿಳಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಇದನ್ನೂ ಓದಿ: ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..


ಬ್ರಿಟಿಷರ ವಿರುದ್ಧ ಅಷ್ಟೊಂದು ತೀವ್ರತೆಯಿಂದ ಹೋರಾಡಿದ ವೀರಸಾವರ್ಕರ್ ಕರಿನೀರುಶಿಕ್ಷೆ ಅನುಭವಿಸುವಾಗ ಏಕೆ ಶತ್ರು ಬ್ರಿಟಿಷರಿಗೆ ಶರಣಾಗತರಾದರು? ಬ್ರಿಟಿಷರು ಹಾಕಿದ ಎಲ್ಲ ಷರತ್ತುಗಳಿಗೆ ಅಂದರೆ ನಾನು ಬಿಡುಗಡೆಯಾದರೆ ನನ್ನ ಜಿಲ್ಲೆಬಿಟ್ಟು ಹೊರಗೆ ಓಡಾಡುವುದಿಲ್ಲ. ಪತ್ರಿಕೆಗಳಿಗೆ ಲೇಖನ ಬರೆಯುವುದಿಲ್ಲ. ನಿಮ್ಮ ಆಜ್ಞಾಪಾಲಕನಾಗಿರುತ್ತೇನೆ ಎಂದೆಲ್ಲ ಬರೆದುಕೊಡಲು ಅವರ ಮನಸ್ಸು ಹೇಗೆ ಒಪ್ಪಿಕೊಂಡಿತು? ಧರ್ಮ ಗ್ಲಾನಿ ಅವರಲ್ಲಿ ಹೇಗೆ ಉಂಟಾಯಿತು? ಎಂದು ವೀರ ಸಾವರ್ಕರ್ ನಡವಳಿಕೆಯನ್ನು ಒಪ್ಪಿಕೊಳ್ಳುವ ಮೊದಲು ಚಿಂತಿಸಬೇಡವೇ ಸುರೇಶ್‌ಕುಮಾರ್ ಅವರೇ?

ನನ್ನನ್ನು ಶಾಸನ ಸಭೆಯಲ್ಲಿ ಮೇಲ್ಮನೆ ಸದಸ್ಯ ಬಿಜೆಪಿ ಎಂಎಲ್‌ಸಿ ರವಿಕುಮಾರ್ ನನಗೆ ಅಂತರಾಷ್ಟ್ರೀಯ ವ್ಯಕ್ತಿಗಳ ಸಂಬಂಧ ಇದೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಮಂತ್ರಿ ಈಶ್ವರಪ್ಪನವರು ನಾನು ಯಾರದ್ದೋ ಜೊತೆಗಿರುವ ಫೋಟೊ ತೋರಿಸಿ ಪಾಕಿಸ್ತಾನದ ನಂಟು ನನಗಿದೆ ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ನಾನು ಅತಿಥಿಯಾಗಿ ಹೋಗಿರುವ ನೂರಾರು ಸಮಾರಂಭಗಳಲ್ಲಿ ಸಮಾರಂಭ ಮುಗಿದ ಮೇಲೆ ಜನ ನನ್ನ ಜೊತೆ ಫೋಟೊ ತೆಗೆಸಿಕೊಳ್ಳಲು ಮುಗಿಬೀಳುತ್ತಾರೆ. ಹೀಗೆ ಫೋಟೊ ತೆಗೆಸಿಕೊಂಡವರು ಸಾವಿರಾರು ಜನ, ಅದರಲ್ಲಿ ಇದೂ ಒಂದಿರಬಹುದು. ಅಷ್ಟಕ್ಕೇ ನನ್ನನ್ನು ನಕ್ಸಲಿಯ, Anti National, ಪಾಕಿಸ್ತಾನಿ ಏಜೆಂಟ್ ಎಂದು ಕರೆಯವರು ಮೊದಲು ನನ್ನ ಅರಾಷ್ಟ್ರಿಕತೆಗೆ, ಪಾಕಿಸ್ತಾನ್ ಏಜೆಂಟ್ ಎಂಬುದಕ್ಕೆ ಬೇರೆ ಪುರಾವೆಗಳನ್ನು ನೀಡುವ ಒಂದು ಫೋಟೊ ತೋರಿಸಿ. ಇಂತಹ ಗುರುತರ ಆಪಾದನೆ ಮಾಡುವುದು ಮಂತ್ರಿವರ್ಯರಿಗೆ, ಶಾಸಕರಿಗೆ ಗೌರವ ತರುವುದಿಲ್ಲ.

ಅನಂತಕುಮಾರ್ ರಾಷ್ಟ್ರವಿರೊಧಿ ವ್ಯಕ್ತಿ ಎಂದು ಹೇಳಿ ನನಗೆ ಧಿಕ್ಕಾರ ಹೇಳಿದ್ದು, ಮಂತ್ರಿಗಳಾದ ಸೋಮಣ್ಣ, ಈಶ್ವರಪ್ಪ ಮುಂತಾದವರು ನನ್ನ ಮೇಲೆ ಆರೊಪಗಳನ್ನು ಮಾಡಿದ್ದು ನಿಮಗೆ ಸಮ್ಮತ ಮತ್ತು ಅವರನ್ನೆಲ್ಲ ಬೆಂಬಲಿಸುವುದು ನಿಮ್ಮ ಧರ್ಮ ಎಂದು ನಿಮ್ಮ ಹೃದಯ ಒಪ್ಪುತ್ತದೆಯೇ?

ವೀರಸಾವರ್ಕರರಿಗೂ, ಭಗತ್‌ಸಿಂಗ್‌ಗೂ ಬ್ರಿಟಿಷರ ಬಗೆಗೆ ಒಂದೇ ಬಗೆಯ ಭಾವನೆ ಇತ್ತು. ಬ್ರಿಟಿಷರನ್ನು ಭಾರತದಿಂದ ಓಡಿಸಲು ಅವರದೇ ಕಾರ್ಯಕ್ರಮವಿತ್ತು, ಭಗತ್‌ಸಿಂಗ್‌ಗೆ ಮರಣದಂಡನೆ ವಿಧಿಸಿ ಸೆರೆಮನೆಯಲ್ಲಿಟ್ಟಿದ್ದರು. ಆಗ ಅವರ ತಂದೆ ಬ್ರಿಟಿಷರಿಗೆ ಪತ್ರ ಬರೆದು ‘ನನ್ನ ಮಗ ತಿಳಿಯದೆ ಈ ಹತ್ಯೆ ಮಾಡಿದ್ದಾನೆ ದಯವಿಟ್ಟು ಅವನಿಗೆ ಪ್ರಾಣಭಿಕ್ಷೆ ನೀಡಿ’ ಎಂದು ಪತ್ರ ಬರೆದಿರುವ ವಿಚಾರ ಭಗತ್‌ಸಿಂಗ್‌ಗೆ ಗೊತ್ತಾಯಿತು. ನನ್ನ ತಂದೆ ಪುತ್ರ ಮೋಹದಿಂದ ನನ್ನ ಪ್ರಾಣ ಉಳಿಸಲು ನಮ್ಮ ಶತ್ರುಗಳಾದ ಬ್ರಿಟಿಷರಲ್ಲಿ ನನ್ನ ಪ್ರಾಣಭಿಕ್ಷೆ ಕೋರಿದ್ದಾರೆ ಇವರೆಂತಹ ತಂದೆ! ನನ್ನನ್ನು ಬ್ರಿಟಿಷರು ಪ್ರಾಣಭಿಕ್ಷೆ ನೀಡಿ ಬಿಡುಗಡೆ ಮಾಡಿದರೂ ನಾನೂ ಬ್ರಿಟಿಷ್ ಅಧಿಕಾರಿಗಳನ್ನು ಕೊಲ್ಲುವ ಕಾರ್ಯವನ್ನು ಮುಂದುವರೆಸುತ್ತೇನೆ ಎಂದು ಘರ್ಜಿಸಿದರು.

ತನ್ನ ಉಸಿರುವವರೆಗೆ ದೇಶಭಕ್ತಿಯನ್ನು ಬೆಳಗಿದ ಭಗತ್‌ಸಿಂಗ್ ಎಲ್ಲಿ? ಹೋರಾಟದ ಮಧ್ಯೆಯೇ ಶತ್ರುವಿಗೆ ಶರಣಾಗತನಾಗಿ, ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪು ಮಸಿ ಬಳಿದ ವೀರಸಾವರ್ಕರ್ ಎಲ್ಲಿ? ತನ್ನವರನ್ನು ಬೆಂಬಲಿಸುವ ಆತುರದಲ್ಲಿ ಹೋರಾಟದ ಚರಿತ್ರೆಯನ್ನೇ ಮರೆತರು ಸಚಿವ ಸುರೇಶ್‌ಕುಮಾರ್!

ಇನ್ನು ಎರಡನೆಯ ವಿಷಯವೆಂದರೆ ನಾನು ಮೋದಿಯವರನ್ನು ಮುಗಿಸಿಬಿಡಿ ಎಂದು ಹೇಳಿದೆನೆಂಬುದು. ಈ ಮಾತನ್ನು ನಾನು ಆಡಿರುವುದು ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ. ಮಹದೇವು ಈ ವಿಚಾರದಲ್ಲಿ ವಿವರಿಸಿ ಸಮಜಾಯಿಸಿ ನೀಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಹೇಳಿದ ಮಾತು. ಚುನಾವಣೆಯಲ್ಲಿ ಹೇಗಾದರೂ ಮಾಡಿ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜಾತ್ಯಾತೀತ ಜನತಾದಳಗಳನ್ನು ಸೋಲಿಸಬೇಕೆಂದು ಮೋದಿ ಪಣ ತೊಟ್ಟಿದ್ದ ಸಂದರ್ಭ ಅದು. ಆದರೆ ಆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬೇಕಾದಷ್ಟು ಸ್ಥಾನಗಳು ಮೋದಿಯ ಬಿಜೆಪಿಗೆ ಲಭಿಸಲೇ ಇಲ್ಲ.

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ.

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...