Homeನೂರರ ನೋಟಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ: ದೊರೆಸ್ವಾಮಿ

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.

- Advertisement -
- Advertisement -

ನನ್ನ ವಿಷಯದಲ್ಲಿ ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಪತ್ರ ವ್ಯವಹಾರವನ್ನು ಇಲ್ಲಿ ಮುದ್ರಿಸಲಾಗಿದೆ.

ಉಭಯತ್ರರೂ ನನ್ನ ಸ್ನೇಹಿತರು ಹಾಗೂ ಹಿತೈಷಿಗಳು. ದೇವನೂರು ಮಹದೇವ ಅವರು ತಮ್ಮ ಪತ್ರದಲ್ಲಿ ಅಸಲಿಯನ್ನು ನಕಲಿ ಮಾಡುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ. ನನ್ನ ಮೇಲೆ ಸಲ್ಲದ ಆರೋಪ ಹೊರೆಸಿ ನನ್ನನ್ನು ನಕಲಿ ಹೋರಾಟಗಾರ ಪಾಕ್ ಏಜೆಂಟ್ ಎಂದೆಲ್ಲ ಆಧಾರ ರಹಿತ ಆಪಾದನೆ ಮಾಡಿ ತೇಜೋವಧೆ ಮಾಡಿರುವ ಬಸವ ಗೌಡ ಯತ್ನಾಳ್ ನಾನು ನಕಲಿ ಪತ್ರಕರ್ತ, 38 ದಿನಗಳ ಪೌರವಾಣಿ ಸಂಪಾದಕ, ಅರುಳು ಮರುಳು ಎಂದೆಲ್ಲ ಅಪ್ಪಟ್ಟ ಸುಳ್ಳು ಆರೋಪಗಳನ್ನು ಮಾಡಿ ನನ್ನ ಚಾರಿತ್ರ್ಯ ವಧೆ ಮಾಡಿರುವ ಬಾಬುಕೃಷ್ಣಮೂರ್ತಿ ಮುಂತಾದ ಮಹನೀಯರೆಲ್ಲರನ್ನೂ ಕುರಿತು ದೇವನೂರು ಮಹದೇವ ನೊಂದು ನುಡಿದಿದ್ದಾರೆ.

ಮಹಾದೇವು ಮುಂದುವರೆದು ಕೊಳೆತ ಹಣ್ಣುಗಳ ಜೊತೆ ತಾಜಾ ಹಣ್ಣುಗಳು ಬೆರೆತುಹೊದಾಗ, ಅವೂ ಕೆಡಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಮಹದೇವರ ಈ ಮಾತು ಸುರೇಶ್‌ಕುಮಾರ್ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸುರೇಶ್‌ಕುಮಾರ್ ಅವರು ದೇವನೂರು ಮಹದೇವ ಅವರಿಗೆ ಈ ಪ್ರಶ್ನೆಗೆ ಉತ್ತರ ಕೊಡುವುದರಲ್ಲಿ ಮುಗ್ಗರಿಸಿ, ನನ್ನವರನ್ನು ಡಿಫೆಂಡ್ ಮಾಡಿಕೊಳ್ಳುವುದು ನನ್ನ ಧರ್ಮ ಎಂದು ಉತ್ತರಿಸಿದ್ದಾರೆ. ಅವರು ಯಾರನ್ನು ಡಿಫೆಂಡ್ ಮಾಡಿಕೊಂಡರು ಎಂಬುದನ್ನೂ ತಿಳಿಸಿದ್ದಾರೆ.


ಇದನ್ನೂ ಓದಿ: ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಇದನ್ನೂ ಓದಿ: ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..


ಬ್ರಿಟಿಷರ ವಿರುದ್ಧ ಅಷ್ಟೊಂದು ತೀವ್ರತೆಯಿಂದ ಹೋರಾಡಿದ ವೀರಸಾವರ್ಕರ್ ಕರಿನೀರುಶಿಕ್ಷೆ ಅನುಭವಿಸುವಾಗ ಏಕೆ ಶತ್ರು ಬ್ರಿಟಿಷರಿಗೆ ಶರಣಾಗತರಾದರು? ಬ್ರಿಟಿಷರು ಹಾಕಿದ ಎಲ್ಲ ಷರತ್ತುಗಳಿಗೆ ಅಂದರೆ ನಾನು ಬಿಡುಗಡೆಯಾದರೆ ನನ್ನ ಜಿಲ್ಲೆಬಿಟ್ಟು ಹೊರಗೆ ಓಡಾಡುವುದಿಲ್ಲ. ಪತ್ರಿಕೆಗಳಿಗೆ ಲೇಖನ ಬರೆಯುವುದಿಲ್ಲ. ನಿಮ್ಮ ಆಜ್ಞಾಪಾಲಕನಾಗಿರುತ್ತೇನೆ ಎಂದೆಲ್ಲ ಬರೆದುಕೊಡಲು ಅವರ ಮನಸ್ಸು ಹೇಗೆ ಒಪ್ಪಿಕೊಂಡಿತು? ಧರ್ಮ ಗ್ಲಾನಿ ಅವರಲ್ಲಿ ಹೇಗೆ ಉಂಟಾಯಿತು? ಎಂದು ವೀರ ಸಾವರ್ಕರ್ ನಡವಳಿಕೆಯನ್ನು ಒಪ್ಪಿಕೊಳ್ಳುವ ಮೊದಲು ಚಿಂತಿಸಬೇಡವೇ ಸುರೇಶ್‌ಕುಮಾರ್ ಅವರೇ?

ನನ್ನನ್ನು ಶಾಸನ ಸಭೆಯಲ್ಲಿ ಮೇಲ್ಮನೆ ಸದಸ್ಯ ಬಿಜೆಪಿ ಎಂಎಲ್‌ಸಿ ರವಿಕುಮಾರ್ ನನಗೆ ಅಂತರಾಷ್ಟ್ರೀಯ ವ್ಯಕ್ತಿಗಳ ಸಂಬಂಧ ಇದೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಮಂತ್ರಿ ಈಶ್ವರಪ್ಪನವರು ನಾನು ಯಾರದ್ದೋ ಜೊತೆಗಿರುವ ಫೋಟೊ ತೋರಿಸಿ ಪಾಕಿಸ್ತಾನದ ನಂಟು ನನಗಿದೆ ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ನಾನು ಅತಿಥಿಯಾಗಿ ಹೋಗಿರುವ ನೂರಾರು ಸಮಾರಂಭಗಳಲ್ಲಿ ಸಮಾರಂಭ ಮುಗಿದ ಮೇಲೆ ಜನ ನನ್ನ ಜೊತೆ ಫೋಟೊ ತೆಗೆಸಿಕೊಳ್ಳಲು ಮುಗಿಬೀಳುತ್ತಾರೆ. ಹೀಗೆ ಫೋಟೊ ತೆಗೆಸಿಕೊಂಡವರು ಸಾವಿರಾರು ಜನ, ಅದರಲ್ಲಿ ಇದೂ ಒಂದಿರಬಹುದು. ಅಷ್ಟಕ್ಕೇ ನನ್ನನ್ನು ನಕ್ಸಲಿಯ, Anti National, ಪಾಕಿಸ್ತಾನಿ ಏಜೆಂಟ್ ಎಂದು ಕರೆಯವರು ಮೊದಲು ನನ್ನ ಅರಾಷ್ಟ್ರಿಕತೆಗೆ, ಪಾಕಿಸ್ತಾನ್ ಏಜೆಂಟ್ ಎಂಬುದಕ್ಕೆ ಬೇರೆ ಪುರಾವೆಗಳನ್ನು ನೀಡುವ ಒಂದು ಫೋಟೊ ತೋರಿಸಿ. ಇಂತಹ ಗುರುತರ ಆಪಾದನೆ ಮಾಡುವುದು ಮಂತ್ರಿವರ್ಯರಿಗೆ, ಶಾಸಕರಿಗೆ ಗೌರವ ತರುವುದಿಲ್ಲ.

ಅನಂತಕುಮಾರ್ ರಾಷ್ಟ್ರವಿರೊಧಿ ವ್ಯಕ್ತಿ ಎಂದು ಹೇಳಿ ನನಗೆ ಧಿಕ್ಕಾರ ಹೇಳಿದ್ದು, ಮಂತ್ರಿಗಳಾದ ಸೋಮಣ್ಣ, ಈಶ್ವರಪ್ಪ ಮುಂತಾದವರು ನನ್ನ ಮೇಲೆ ಆರೊಪಗಳನ್ನು ಮಾಡಿದ್ದು ನಿಮಗೆ ಸಮ್ಮತ ಮತ್ತು ಅವರನ್ನೆಲ್ಲ ಬೆಂಬಲಿಸುವುದು ನಿಮ್ಮ ಧರ್ಮ ಎಂದು ನಿಮ್ಮ ಹೃದಯ ಒಪ್ಪುತ್ತದೆಯೇ?

ವೀರಸಾವರ್ಕರರಿಗೂ, ಭಗತ್‌ಸಿಂಗ್‌ಗೂ ಬ್ರಿಟಿಷರ ಬಗೆಗೆ ಒಂದೇ ಬಗೆಯ ಭಾವನೆ ಇತ್ತು. ಬ್ರಿಟಿಷರನ್ನು ಭಾರತದಿಂದ ಓಡಿಸಲು ಅವರದೇ ಕಾರ್ಯಕ್ರಮವಿತ್ತು, ಭಗತ್‌ಸಿಂಗ್‌ಗೆ ಮರಣದಂಡನೆ ವಿಧಿಸಿ ಸೆರೆಮನೆಯಲ್ಲಿಟ್ಟಿದ್ದರು. ಆಗ ಅವರ ತಂದೆ ಬ್ರಿಟಿಷರಿಗೆ ಪತ್ರ ಬರೆದು ‘ನನ್ನ ಮಗ ತಿಳಿಯದೆ ಈ ಹತ್ಯೆ ಮಾಡಿದ್ದಾನೆ ದಯವಿಟ್ಟು ಅವನಿಗೆ ಪ್ರಾಣಭಿಕ್ಷೆ ನೀಡಿ’ ಎಂದು ಪತ್ರ ಬರೆದಿರುವ ವಿಚಾರ ಭಗತ್‌ಸಿಂಗ್‌ಗೆ ಗೊತ್ತಾಯಿತು. ನನ್ನ ತಂದೆ ಪುತ್ರ ಮೋಹದಿಂದ ನನ್ನ ಪ್ರಾಣ ಉಳಿಸಲು ನಮ್ಮ ಶತ್ರುಗಳಾದ ಬ್ರಿಟಿಷರಲ್ಲಿ ನನ್ನ ಪ್ರಾಣಭಿಕ್ಷೆ ಕೋರಿದ್ದಾರೆ ಇವರೆಂತಹ ತಂದೆ! ನನ್ನನ್ನು ಬ್ರಿಟಿಷರು ಪ್ರಾಣಭಿಕ್ಷೆ ನೀಡಿ ಬಿಡುಗಡೆ ಮಾಡಿದರೂ ನಾನೂ ಬ್ರಿಟಿಷ್ ಅಧಿಕಾರಿಗಳನ್ನು ಕೊಲ್ಲುವ ಕಾರ್ಯವನ್ನು ಮುಂದುವರೆಸುತ್ತೇನೆ ಎಂದು ಘರ್ಜಿಸಿದರು.

ತನ್ನ ಉಸಿರುವವರೆಗೆ ದೇಶಭಕ್ತಿಯನ್ನು ಬೆಳಗಿದ ಭಗತ್‌ಸಿಂಗ್ ಎಲ್ಲಿ? ಹೋರಾಟದ ಮಧ್ಯೆಯೇ ಶತ್ರುವಿಗೆ ಶರಣಾಗತನಾಗಿ, ಸ್ವಾತಂತ್ರ್ಯ ಹೋರಾಟಕ್ಕೆ ಕಪ್ಪು ಮಸಿ ಬಳಿದ ವೀರಸಾವರ್ಕರ್ ಎಲ್ಲಿ? ತನ್ನವರನ್ನು ಬೆಂಬಲಿಸುವ ಆತುರದಲ್ಲಿ ಹೋರಾಟದ ಚರಿತ್ರೆಯನ್ನೇ ಮರೆತರು ಸಚಿವ ಸುರೇಶ್‌ಕುಮಾರ್!

ಇನ್ನು ಎರಡನೆಯ ವಿಷಯವೆಂದರೆ ನಾನು ಮೋದಿಯವರನ್ನು ಮುಗಿಸಿಬಿಡಿ ಎಂದು ಹೇಳಿದೆನೆಂಬುದು. ಈ ಮಾತನ್ನು ನಾನು ಆಡಿರುವುದು ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆ ಸಮಯದಲ್ಲಿ. ಮಹದೇವು ಈ ವಿಚಾರದಲ್ಲಿ ವಿವರಿಸಿ ಸಮಜಾಯಿಸಿ ನೀಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಹೇಳಿದ ಮಾತು. ಚುನಾವಣೆಯಲ್ಲಿ ಹೇಗಾದರೂ ಮಾಡಿ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜಾತ್ಯಾತೀತ ಜನತಾದಳಗಳನ್ನು ಸೋಲಿಸಬೇಕೆಂದು ಮೋದಿ ಪಣ ತೊಟ್ಟಿದ್ದ ಸಂದರ್ಭ ಅದು. ಆದರೆ ಆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬೇಕಾದಷ್ಟು ಸ್ಥಾನಗಳು ಮೋದಿಯ ಬಿಜೆಪಿಗೆ ಲಭಿಸಲೇ ಇಲ್ಲ.

ಆದರೂ ಸಹ ನನ್ನ ಬಾಯಿಂದ ‘ಮುಗಿಸಿಬಿಡಿ’ ಎಂಬ ಮಾತು ಬರಬಾರದಾಗಿತ್ತು ಎಂದು ಆತ್ಮ ಹೇಳುತ್ತದೆ.

ದೇವನೂರು ಮಹದೇವ ಮತ್ತು ಸಚಿವ ಸುರೇಶ್‌ಕುಮಾರ್ ಮಧ್ಯೆ ನಡೆದ ಈ ಪತ್ರ ವ್ಯವಹಾರ ಬಹಳ ಆತ್ಮೀಯತೆಯಿಂದ ಕೂಡಿದೆ. ರಾಗದ್ವೇಷರಹಿತವಾದ ಈ ಬಗೆಯ ಪತ್ರ ವ್ಯವಹಾರ ಸಮಾಜದಲ್ಲಿ, ದ್ವೇಷ ಬೆಳೆಸುವ ಈ ದಿನಗಳಲ್ಲಿ ಸಾಮರಸ್ಯ ತರಲು ಸಹಕಾರಿಯಾಗುವುದೆಂದು ನಾನು ಭಾವಿಸುತ್ತೇನೆ.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...