Homeಚಳವಳಿಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಜನ್ಮದಿನ ಪ್ರಯುಕ್ತ ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮ

ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಜನ್ಮದಿನ ಪ್ರಯುಕ್ತ ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮ

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್‌.ಎಸ್‌.ದೊರೆಸ್ವಾಮಿಯವರ 104ನೇ ಹುಟ್ಟುಹಬ್ಬದ ಪ್ರಯುಕ್ತ ಎಚ್‌.ಎಸ್.ದೊರೆಸ್ವಾಮಿ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ `75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ’ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ 75 ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವನ್ನು ದೊರೆಸ್ವಾಮಿಯವರ ಜನ್ಮದಿನವಾದ ಏಪ್ರಿಲ್‌ 10ರಂದು ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಬಳಿಯ ಶಾಂತವೇರಿ ಗೋಪಾಲಗೌಡ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೊರೆಸ್ವಾಮಿಯವರು ತಮ್ಮ ಬದುಕಿನ ಕೊನೆ ಕ್ಷಣದವರೆಗೂ ನಿರಂತರವಾಗಿ ಹೋರಾಟಕ್ಕಾಗಿ ಮೀಸಲಿಟ್ಟವರು. ಸಿಎಎ, ಎನ್‌ಆರ್‌ಸಿ ವಿರುದ್ದ ಪ್ರತಿ ವಾರ ಪ್ರತಿಭಟನೆ ನಡೆಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಅವರು ಬಡವರಿಗೆ ಭೂಮಿ ಮತ್ತು ವಸತಿಗಾಗಿ ಶ್ರಮಿಸಿದ್ದರು. ಆದರೆ ಅವರ ನಿಧನದ ನಂತರದ ಕರ್ನಾಟಕದಲ್ಲಿ ಅನಪೇಕ್ಷಿತ ಘಟನೆಗಳು ಜರುಗುತ್ತಿವೆ. ಹಾಗಾಗಿ ಪ್ರತಿಯೊಬ್ಬರ ಸ್ವಾತಂತ್ರ್ಯದ ರಕ್ಷಣೆಗಾಗಿ, ಮತ್ತು ಸಮಾಜದ ಸೌಹಾರ್ದತೆಯನ್ನು ಕಾಪಾಡುವುದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಚ್.ಎಸ್ ದೊರೆಸ್ವಾಮಿ ಜನ್ಮದಿನಾಚರಣಾ ಸಮಿತಿಯ ಸಂಚಾಲಕರಾದ ಜಗದೀಶ್ ಜಗನ್ ರಾವ್ ತಿಳಿಸಿದ್ದಾರೆ.

ರಾಷ್ಟ್ರಧ್ವಜಗಳೊಂದಿಗೆ ನಡಿಗೆ ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ. ತದನಂತರ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕದ ಮುಂದಿರುವ ಸವಾಲುಗಳನ್ನು ಎದುರಿಸುವ ಬಗೆ ಹೇಗೆ ಎಂಬುದರ ಕುರಿತು ಚರ್ಚೆ ಇರುತ್ತದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಮೈಕಲ್ ಫರ್ನಾಂಡೀಸ್, ಸಮಾಜವಾದಿಗಳಾದ ಜಿ.ವಿ ಸುಂದರ್, ಕೋದಂಡರಾಮಯ್ಯ, ವೆಂಕಟೇಶ್, ಹೋರಾಟಗಾರರಾದ ಸಿರಿಮನೆ ನಾಗರಾಜ್, ಪ್ರಕಾಶ್ ಕಮ್ಮರಡಿ, ವಿವೇಕ್ ಮುಂತಾದವರು ಭಾಗವಹಿಸಲಿದ್ದಾರೆ. ಅಲ್ಲದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯರು, ವಿವಿಧ ಸಂಘಟನೆಗಳ ಮುಖಂಡರು, ಮಾಹಿತಿ ಹಕ್ಕು ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರರು, ಯುವಕ-ಯುವತಿಯರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಎಲ್ಲಾ ಸಮಾನ ಮನಸ್ಕರು ಉಪಸ್ಥಿತರಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ; ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ದೊರೆಸ್ವಾಮಿ ಮತ್ತು ಬಡಜನರ ಭೂಮಿ-ವಸತಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Veteran Freedom Fighter Dorai Swamyji was a Secular Democratic open heart very simple legend who’s always fight for every citizen’s right , It’s my great pleasure that I spend some un valuable days with them , my hearty Salutes with Proud to them always- —-

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...