Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...