Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...