Homeಅಂಕಣಗಳುವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

ವಿಧಾನ ಪರಿಷತ್ತು ಪುಡಾರಿಗಳ ಪುನರ್ವಸತಿ ಕೇಂದ್ರವೇ?

- Advertisement -
- Advertisement -

ವಿಧಾನ ಪರಿಷತ್ತಿಗೆ ಹಾಲಿ ಇದ್ದ ಸದಸ್ಯರ ಅವಧಿ ಮುಗಿದಿದ್ದರಿಂದ ಅವರ ಸ್ಥಾನದಲ್ಲಿ ಹೊಸಬರನ್ನು ಚುನಾಯಿಸುವ ಸಂದರ್ಭ ಒದಗಿದೆ. ವಿಧಾನ ಪರಿಷತ್ತನ್ನು ಸಾಮಾನ್ಯವಾಗಿ ಮೇಲ್ಮನೆ ಎಂದು ಕರೆಯಲಾಗುತ್ತದೆ. ಮೇಲ್ಮನೆಯ ಕೆಲಸ ವಿಧಾನ ಸಭೆಯಲ್ಲಿ ಮಂಡಿಸಲಾಗುವ ಹಾಗೂ ಅಂಗೀಕಾರವಾಗುವ ಮಸೂದೆಗಳು ಜನಪರವಾಗಿವೆಯೇ ಇಲ್ಲವೇ ಎಂಬುದನ್ನು ಅಥವಾ ಏನಾದರೂ ದೋಷಗಳಿವೆಯೇ ಎಂಬುದನ್ನು ಪರಿಶೀಲಿಸುವುದು; ಒಂದುವೇಳೆ ಏನಾದರೂ ದೋಷಗಳು ಕಂಡುಬಂದಲ್ಲಿ ಸದರಿ ಮಸೂದೆಯನ್ನು ಪುನರ್‍ಪರಿಶೀಲನೆಗಾಗಿ ವಿಧಾನಸಭೆಗೆ ವಾಪಸ್ ಕಳಿಸಲಾಗುತ್ತದೆ. ಮೇಲ್ಮನೆಯಲ್ಲಿ ಎತ್ತಲಾದ ಎಲ್ಲಾ ಆಕ್ಷೇಪಣೆಗಳನ್ನು ಪುನಃ ಪರಿಶೀಲಿಸಿ ಮತ್ತೆ ವಿಧಾನಸಭೆಯ ಮುಂದೆ ಮಂಡಿಸಿ ಹೀಗೆ ತಿದ್ದುಪಡಿಯಾದ ಮಸೂದೆಯನ್ನು ಮತ್ತೆ ವಿಧಾನಪರಿಷತ್ತಿಗೆ ರವಾನಿಸಬೇಕು. ವಿಧಾನ ಪರಿಷತ್ತು ಈ ತಿದ್ದುಪಡಿಯಾದ ಮಸೂದೆಯನ್ನೂ ಕೂಲಂಕಷವಾಗಿ ಪರಿಶೀಲಿಸಿ ಅದಕ್ಕೆ ಒಪ್ಪಿಗೆ ಕೊಟ್ಟ ನಂತರ ಮತ್ತೆ ವಿಧಾನಸಭೆಗೆ ಕಳಿಸಲಾಗುವುದು. ಈ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿದ ಮೇಲೆಯೇ ಮಸೂದೆ ಶಾಸನವಾಗಿ ಪರಿವರ್ತನೆಯಾಗುವುದು. ಅದರಂತೆಯೇ, ಸರ್ಕಾರ ರೂಪಿಸುವ ಎಲ್ಲವನ್ನೂ ಪ್ರಶ್ನಿಸುವ ಅಧಿಕಾರ ಕೂಡ ಈ ಮೇಲ್ಮನೆಗೆ ಇದೆ.

ಮೇಲ್ಮನೆಯಲ್ಲಿ ಶಾಸನಸಭೆಯಿಂದ ಆರಿಸಿ ಹೋಗುವ 25 ಸದಸ್ಯರು, ಸ್ಥಳೀಯ ಸಂಸ್ಥೆಗಳಿಂದ 25, ಶಿಕ್ಷಕರ ಕ್ಷೇತ್ರದಿಂದ 7 ಮತ್ತು ಪದವೀಧರರ ಕ್ಷೇತ್ರದಿಂದ 7 ಸದಸ್ಯರು ಆಯ್ಕೆಯಾಗುತ್ತಾರೆ. ಇವರ ಜೊತೆಗೆ ಸರ್ಕಾರ (ರಾಜ್ಯಪಾಲರ ಮೂಲಕ) 11 ಮಂದಿ ಗಣ್ಯರನ್ನು ನಾಮಕರಣ ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಹೀಗೆ ನಮ್ಮ ವಿಧಾನ ಪರಿಷತ್ತಿನಲ್ಲಿ ಒಟ್ಟು 75 ಸದಸ್ಯ ಬಲವಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ 1/3 ಭಾಗದಷ್ಟು ಸದಸ್ಯರು ನಿವೃತ್ತಿಯಾಗಿ ಹೊಸಸದಸ್ಯರು ಆಯ್ಕೆಯಾಗಬೇಕಾಗುತ್ತದೆ. ಈಗಿನ ಚುನಾವಣೆ ಕೂಡ ಅಂಥ ಒಂದು ಪ್ರಕ್ರಿಯೆಯೇ.

ಒಟ್ಟಿನಲ್ಲಿ ಈ ಮೇಲ್ಮನೆ ವಿಧಾನಸಭೆಯ ಕಾವಲು ಸಮಿತಿಯಾಗಿ ಕೆಲಸ ಮಾಡಬೇಕು. ಈ ಕಾವಲು ಸಮಿತಿಯಲ್ಲಿ ಪಕ್ಷಾತೀತರೂ, ಗಣ್ಯರೂ, ಕಾನೂನು ಕಟ್ಟಲೆಗಳ ಜ್ಞಾನ ಇರುವವರೂ, ಶಾಸನ ಸಭೆಯ ಸದಸ್ಯರ ಮನ್ನಣೆಗೆ ಪಾತ್ರರಾದವರು ಮಾತ್ರ ಇರಬೇಕು. ಹಾಗಾದಾಗ ಮಾತ್ರ ಮೇಲ್ಮನೆಯ ಪರಿಕಲ್ಪನೆ ಸಾರ್ಥಕವಾಗುತ್ತದೆ. ರಾಜ್ಯದ ವಿಧಾನ ಪರಿಷತ್ತಿನ ರೀತಿಯಲ್ಲೇ ಕೇಂದ್ರದಲ್ಲಿ ರಾಜ್ಯಸಭೆ ಇದೆ. ಪ್ರತಿಭಾವಂತರು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಉತ್ತಮ ಕೊಡುಗೆ ನೀಡಬಲ್ಲವರನ್ನು ಇಂಥಾ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರೆಂಬುದಕ್ಕೆ ಅಂಬೇಡ್ಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿಸಿದ್ದು ಉತ್ತಮ ಉದಾಹರಣೆ. ಖ್ಯಾತ ವಿಜ್ಞಾನಿ ಡಾ.ರಾಜಾರಾಮಣ್ಣನಂಥವರೂ ಕೂಡ ರಾಜ್ಯಸಭೆ ಸದಸ್ಯರಾಗಿದ್ದರು. ಕರ್ನಾಟಕದ ಉದಾಹರಣೆ ನೋಡುವುದಾದರೂ ಕಾರ್ಮಿಕ ನಾಯಕ ಬಿವಿ ಕಕ್ಕಿಲ್ಲಾಯ, ಅಬ್ದುಲ್ ನಜೀರ್ ಸಾಬ್, ವೈಕುಂಠ ಬಾಳಿಗಾ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಬಸವರಾಜ ಕಟ್ಟೀಮನಿ ಮುಂತಾದ ಗಣ್ಯರು ಈ ಮೇಲ್ಮನೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದನ್ನು ನಾವು ಸ್ಮರಿಸಿಕೊಳ್ಳಬಹುದು. ಇದು ಇತಿಹಾಸದ ಮಾತು.
ಸ್ವಾತಂತ್ರ್ಯ ಬಂದ ಮೇಲೆ ಹತ್ತಾರು ವರ್ಷಗಳ ಕಾಲ ಇಂತಹ ಗಣ್ಯರನ್ನೇ ಆಡಳಿತ ನಡೆಸುವ ಸರ್ಕಾರಗಳು ಆಯ್ಕೆಮಾಡುತ್ತಿದ್ದವು. ನಂತರದ ದಿನಮಾನಗಳಲ್ಲಿ ಆರಂಭವಾಯಿತು ಅಧಃಪತನ. ಜಾತಿವಾರು ಆಯ್ಕೆ, ಸ್ವಜನ ಪಕ್ಷಪಾತ, ತಮ್ಮ ಪಕ್ಷದವರನ್ನೇ ಆಯ್ಕೆ ಮಾಡಿಕೊಳ್ಳುವುದು, ಚುನಾವಣೆಗಳಲ್ಲಿ ಸೋತ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮೇಲ್ಮನೆಯಲ್ಲಿ ‘ಪುನರ್‍ವಸತಿ ಕಲ್ಪಿಸುವುದು’ ಇಂದು ಎಲ್ಲ ಪಕ್ಷಗಳಲ್ಲೂ ವ್ಯಾಪಕವಾಗಿದೆ. ಕೆಲವು ಉದ್ಯಮಿಗಳ ಬಳಿ ಕೋಟ್ಯಾಂತರ ರೂಪಾಯಿ ಹಣ ಪಡೆದು ಮೇಲ್ಮನೆಯ ಸದಸ್ಯತ್ವವನ್ನು ಮಾರಾಟ ಮಾಡುವ ಅಧಮ ರಾಜಕೀಯ ನಾಯಕರು ಹುಟ್ಟಿಕೊಂಡಿದ್ದಾರೆ. ಈಗಿನ ಮೇಲ್ಮನೆಯಲ್ಲಿ 50 ವರ್ಷಗಳ ಹಿಂದಿನಂತೆ ಅರ್ಹತೆಯುಳ್ಳವರು, ವರ್ಚಸುಳ್ಳವರು, ಗಣ್ಯರು, ಪಾರ್ಲಮೆಂಟೇರಿಯನ್‍ಗಳು, ಜನರ ಗೌರವಕ್ಕೆ ಪಾತ್ರರಾದವರ ಸಂಖ್ಯೆ ವಿರಳವಾಗುತ್ತಿದೆ. ವಾಸ್ತವದಲ್ಲಿ, ಮೇಲ್ಮನೆ ಕೆಳಮನೆಯ ಮಟ್ಟಕ್ಕೇ ಇಳಿದುಬಿಟ್ಟಿದೆ.


ಮೇಲ್ಮನೆ ಈಗ ವಿಧಾನಸಭೆಯ ಕಾಲೆಳೆಯುವ, ಕುಹಕಿಗಳಿಂದ ಕೂಡಿದ ಕೂಟವಾಗಿದೆ. ಇದರ ಘನತೆ ಗೌರವಗಳು ಹಾರಿಹೋಗಿವೆ. ಮೇಲ್ಮನೆ ವಿಧಾನಸಭೆಯ ಹಿತೈಷಿಯಾಗಿದ್ದರ ಬದಲಾಗಿ, ವಿಧಾನಸಭೆಯ ಶತ್ರು ಎನಿಸಿದೆ. ವಿಧಾನಸಭೆಯ ಘನತೆಯನ್ನು ಹೆಚ್ಚಿಸುವ ಕೆಲಸ ವಿಧಾನಪರಿಷತ್ತು ಮಾಡಬೇಕು. ಕಾಲ ಕಾಲಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಿ, ವಿಧಾನ ಸಭೆ ಸರಿಯಾದ ದಾರಿಯಲ್ಲಿ ಸಾಗಲು ನೆರವಾಗಬೇಕು.
ವಿಧಾನಸಭೆ ಜನಪರವಾಗಿ ಕೆಲಸಮಾಡಲಿಕ್ಕೂ, ಸಂವಿಧಾನದ ಆಶಯವಾದ ಬಡವ – ಬಲ್ಲಿದ ಅಂತರವನ್ನು ತಗ್ಗಿಸುವ ಸಾಧನವನ್ನಾಗಿ ಪರಿವರ್ತಿಸುವ ಕೆಲಸವನ್ನೂ ವಿಧಾನ ಪರಿಷತ್ತು ಮಾಡಬೇಕಿತ್ತು. ಸರ್ಕಾರ ನಡೆಸುವವರ ಓರೆಕೋರೆಗಳನ್ನು ತಿದ್ದಿ, ಕಾನೂನಿಗನುಸಾರ ಕೆಲಸ ಮಾಡಿಸುವ ಕಾವಲು ಸಮಿತಿಯ ಪಾತ್ರವನ್ನು ನಿರ್ವಹಿಸಬೇಕು.
ಈಗಿನ ದುರಂತವೆಂದರೆ, ಹಾಲಿ ವಿಧಾನ ಪರಿಷತ್ತಿನಲ್ಲಿ ಕ್ರಿಮಿನಲ್‍ಗಳು, ಭೂಗಳ್ಳರು, ರಿಯಲ್ ಎಸ್ಟೇಟ್ ಧಂಧೆಯವರು, ಪಕ್ಷದ ನಾಯಕರ ಆಸ್ತಿಗಳನ್ನು ಕಾಪಾಡುವ ಏಜೆಂಟರು… ಎಲ್ಲರೂ ಇದ್ದಾರೆ. ಇಂತಹ ವಿಧಾನಪರಿಷತ್ತಿನ ಅಗತ್ಯತೆ ಇದೆಯೇ?
ಕುಮಾರಸ್ವಾಮಿಯವರ ಸರ್ಕಾರದಲ್ಲಿಯಾದರೂ ಘನತೆವೆತ್ತ ಜನರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪರಿಪಾಠ ಆರಂಭವಾಗುತ್ತದೆಯೆಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನ ಪರಿಷತ್ತನ್ನು ಯಾವ ಉದಾತ್ತ ದೃಷ್ಟಿಯಿಂದ ಆರಂಭಿಸಲಾಯಿತೋ ಆ ದಿನಗಳು ಮತ್ತೆ ಬರುತ್ತವೆಯೆ?
– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...