HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...