HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...