HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...