HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...