HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...