HomeಮುಖಪುಟFact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

Fact Check: ಮೋದಿಯನ್ನು ಸಾಯಿಸಬೇಕೆಂದು ದೊರೆಸ್ವಾಮಿಯವರು ಹೇಳಿಲ್ಲ.. ಅದು ಸುಳ್ಳು ಸುದ್ದಿ.

- Advertisement -
- Advertisement -

ಮೋದಿಯನ್ನು ಮುಗಿಸಿಬಿಡಿ ಎಂದು ಕರ್ನಾಟಕದ ಜನತೆಗೆ ದೊರೆಸ್ವಾಮಿಯವರು ಕರೆ ಕೊಟ್ಟಿದ್ದಾರೆ ಎಂದು 2018ರ ಮೇ09 ರಂದು ಪಬ್ಲಿಕ್ ಟಿವಿ ಪ್ರಕಟಿಸಿದ್ದ ವರದಿ ಎಲ್ಲಾ ಕಡೆ ಹರಿದಾಡುತ್ತಿದೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಅದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ಆ ವರದಿಯಲ್ಲಿರುವ ದೊರೆಸ್ವಾಮಿಯವರು ಮಾತನಾಡಿರುವ ಸುಮಾರು 07 ನಿಮಿಷಗಳ ವಿಡಿಯೋವನ್ನು ಕೂಲಂಕಷವಾಗಿ ನೋಡಿದರೆ ಈ ಅಂಶ ಸ್ಪಷ್ಟವಾಗುತ್ತದೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುನ್ನಾ ದಿನ ಪಬ್ಲಿಕ್ ಟಿವಿಯವರು ದೊರೆಸ್ವಾಮಿಯವರನ್ನು ಅವರ ನಿವಾಸದಲ್ಲಿ ಮಾತನಾಡಿಸಿದ್ದಾರೆ. ಅದರಲ್ಲಿ ದೊರೆಸ್ವಾಮಿಯವರು “ಮೋದಿ ವರ್ಸಸ್ ಕರ್ನಾಟಕ ಎಂಬ ಪರಿಸ್ಥಿತಿ ನಿರ್ಮಣವಾಗಿದೆ. ಮೋದಿಯವರು ಎಲ್ಲಾ ರಾಜ್ಯಗಳನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಾ, ಚಕ್ರಾಧಿಪತ್ಯ ಕಟ್ಟಿ ತನ್ನ ಹಿಡೆನ್ ಅಜೆಂಡಾ ಜಾರಿಗೊಳಿಸಲು ಮುಂದಾಗಿದ್ದಾರೆ. ಆತ ಬರೀ ಮಾತನಾಡುತ್ತಾನೆ, ಆದರೆ ನಿರ್ದಿಷ್ಟವಾಗಿ ಯಾವುದೇ ಕೆಲಸ ಮಾಡಿಲ್ಲ, ಟಚ್ ಅಂಡ್ ಗೋ ರೀತಿಯ ಕೆಲಸಗಳನ್ನು ಮಾತ್ರ ಮಾಡಿದ್ದಾರೆ. ಅವರು ವಿಫಲರಾಗಿದ್ದಾರೆ, ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ ಮತ್ತು ಬಹಳ ನೀಚತನದಿಂದ ಮಾತನಾಡುತ್ತಾರೆ. ಈ ಹಿಂದೆ ಎಂದೂ ಹೀಗೆ ಆಗಿಲ್ಲ‌. ಆಗೆಲ್ಲ ಜನರ ಆಶೋತ್ತರಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದರು. ಆದರೆ ಇವರು ಬರೀ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ.

ವಿಡಿಯೋ ನೋಡಿ.

ಕರ್ನಾಟಕವನ್ನು ತೆಗೆದುಕೊಂಡುಬಿಟ್ರೆ ಇಡೀ ದೇಶವನ್ನೇ ತಗೋಬಹುದು ಎಂದು ಆತನ ಆಲೋಚನೆ ಇದೆ. ಅದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು. ಬಿಜೆಪಿಯಲ್ಲಿ ಇನ್ಯಾರೂ ನೇತಾರರಿಲ್ಲ ಬಿಡಿ. ಇದ್ದವರು ಯಡಿಯೂರಪ್ಪ ಮಾತ್ರ. ಆದರೆ ಅವರು ಭ್ರಷ್ಟರ ಸುಳಿಗೆ ಸಿಕ್ಕಿ, ಅವರು ಮಾಡಬಾರದ್ದನ್ನೆಲ್ಲ ಮಾಡಿ ಈ ರೀತಿ ಕೆಟ್ಟ ಹೆಸರು ತೆಗೆದುಕೊಂಡು, ಸೆರೆಮನೆಗೆ ಹೋಗಿ 22-23 ಆಪಾದನೆಗಳನ್ನು ಹೊತ್ತಿದ್ದಾರೆ.

ಮೋದಿಯವರು ಕಾಂಗ್ರೆಸ್ ಅನ್ನು ಮುಗಿಸಿಬಿಡುತ್ತೇನೆ ಅಂದಿದ್ದಾರೆ. ಸೋಲಿಸುತ್ತೇನೆ, ನಾನು ಅಧಿಕಾರಕ್ಕೆ ಬರುತ್ತೇನೆ ಎಂಬುದಕ್ಕಿಂತ ನಾಶ ಮಾಡುತ್ತೇನೆ ಎನ್ನುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ. ಪ್ರಜಾಪ್ರಭುತ್ವದ ರಾಜ್ಯವಾಳುತ್ತಾ, ಸರ್ವಾಧಿಕಾರಿ ಥರ ಮಾತನಾಡುತ್ತೀರಿ. ಎಲ್ಲರನ್ನು ನಾಶಮಾಡಿ ನೀವು ಅಧಿಕಾರ ನಡೆಸಬೇಕು ಅನ್ನುತ್ತಿದ್ದೀರಿ. ಇದು ಸರಿಯಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.

ಹಾಗಾಗಿ ನಮ್ಮ ಹೋರಾಟ ನೇರ ಮೋದಿಯ ಮೇಲಿದೆ ಎಂದು ದೊರೆಸ್ವಾಮಿಯವರು ಹೇಳಿದ್ದಾರೆ. ಮುಂದುವರೆದ ಅದಕ್ಕೆ ಬೇರೆ ಯಾರಾದರೂ ಗೆಲ್ಲಬೇಕು. ಸದ್ಯಕ್ಕೆ ಅವಕಾಶ ಸಿದ್ದರಾಮಯ್ಯನವರಿಗೆ ಇದೆ. ದೇವೇಗೌಡರು ಇದನ್ನು ಅರ್ಥ ಮಾಡಿಕೊಳ್ಳಬೇಕು, ತನ್ನ ಮಗನೇ ಮುಖ್ಯಮಂತ್ರಿಯಾಗಬೇಕೆಂಬ ಹಠ ಹಿಡಿಯಬಾರದು ಎಂದು ಸಹ ಅವರು ಮಾತನಾಡಿದ್ದಾರೆ.

ಅವರು ಮಾತನಾಡಿರುವುದು ಚುನಾವಣೆಯ ಹಿಂದಿನ ದಿನ. ಹಾಗಾಗಿ ಮೋದಿ ಸೋಲಿಸಬೇಕು ಎಂಬುದು ಅವರ ಮಾತಿನ ಅರ್ಥವೇ ಹೊರತು ಸಾಯಿಸಬೇಕೆಂಬುದ್ದಲ್ಲ. ಇದು ಗೊತ್ತಿದ್ದರೂ ಸಹ ಇಡೀ ವಿಡಿಯೋದಲ್ಲಿ ಬರುವ 2.12 ನಿಮಿಷವನ್ನು (ಮೋದಿಯನ್ನು ಮುಗಿಸಬೇಕು) ಮಾತ್ರ ತೋರಿಸಿ ಸುಳ್ಳು ಹರಡಲಾಗುತ್ತಿದೆ.

ಅದರ ಮುಂದಿನ ವಾಕ್ಯವೇ ಅವರು ಮೋದಿಯನ್ನು ಸೋಲಿಸಬೇಕು ಎಂದಿರುವುದನ್ನು ಮರೆಮಾಚಲಾಗಿದೆ. ಅಲ್ಲದೇ ಆತ ಎಂಬುದನ್ನು ಬಿಟ್ಟರೆ ಉಳಿದೆಲ್ಲಾ ಕಡೆ ದೊರೆಸ್ವಾಮಿಯವರು ಬಹುವಚನವನ್ನೇ ಬಳಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಈಗ ಈ ಸುದ್ದಿ ಹರಿದಾಡಲು ಕಾರಣವೇಂದರೆ ಅದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರತಿಭಟನೆಗಳು ಜೋರಾಗಿವೆ. ಇಂತಹ ಸಮಯದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ದೊರೆಸ್ವಾಮಿಯವರ ವಿರುದ್ಧ ಸುಳ್ಳು ಹರಡಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...