HomeUncategorizedದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

ದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ಸಿನಲ್ಲಿ `ಅಸಂಗ್ರಹ’ ಎಂಬ ವ್ರತವನ್ನು ಕಾಂಗ್ರೆಸ್ಸಿಗರು ಪಾಲಿಸುತ್ತಿದ್ದರು. ಅಸಂಗ್ರಹ ಎಂದರೆ ಕೂಡಿಹಾಕದೆ ಇರುವುದು. ಸಂಗ್ರಹಬುದ್ಧಿ ದುರಾಸೆಯಿಂದ ಕೂಡಿದ ಬುದ್ಧಿ. ಕೂಡಿಹಾಕುವ ಬುದ್ಧಿ ಬೆಳೆದಹಾಗೆ ಇತರರ ಸ್ವತ್ತನ್ನು ಸ್ವಾಹ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಸಂಗ್ರಹ ಬುದ್ಧಿ ವೃದ್ಧಿಯಾದಂತೆ ನ್ಯಾಯಯುತವಾಗಿಯೋ ಅಪಮಾರ್ಗದಿಂದಲೋ ಸಂಪಾದನೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಇದರಿಂದ ಉಳ್ಳವರು, ಕೊಂಡವರ ಮಧ್ಯದ ಕಂದಕ ಬೆಳೆಯುತ್ತಾ ಹೋಗುತ್ತದೆ. ಧನಿಕ ವರ್ಗ ಬಡವರ ಸಮೂಹಗಳ ಮಾನವ ಸಂಬಂಧ ಕೆಡುತ್ತದೆ. ಇದು ಮುಂದೆ ವರ್ಗ ಕಲಹಕ್ಕೂ, ಘರ್ಷಣೆಗೂ ಕಾರಣವಾಗುತ್ತದೆ. ಲೆನಿನ್ನನ ಕಾಲದಲ್ಲಿ ರಷ್ಯಾದಲ್ಲಿ ಈ ಬಗೆಯ ಘರ್ಷಣೆ ಏರ್ಪಟ್ಟು ಶ್ರೀಮಂತ ಭೂಮಾಲೀಕರ ತಲೆಗಳನ್ನು ಕಡಿಯಲಾಯಿತು.

ಸ್ವಾತಂತ್ರ್ಯ ಬಂದಮೇಲೆ ಈ ಶ್ರೀಮಂತರ ವರ್ಗ ರಾಜಕೀಯ ಪಕ್ಷಗಳನ್ನು ಸೇರಿ ಶಾಸಕರು, ಪಾರ್ಲಿಮೆಂಟ್ ಸದಸ್ಯರೂ, ಮಂತ್ರಿಗಳೂ ಆಗಿದ್ದಾರೆ. ಹಿಂದೆ ನಾವು ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಸ್ವಾತಂತ್ರ್ಯ ಆಂದೋಲನದಲ್ಲಿ ಸೆರೆಮನೆಗೆ ಹೋಗಿದ್ದವರನ್ನು ಕಾಂಗ್ರೆಸ್ಸಿನಿಂದ ಚುನಾವಣೆಗೆ ನಿಲ್ಲಿಸುತ್ತಿದ್ದೆವು. ಇವರ ವಿರುದ್ಧವಾಗಿ ನಿಂತ ಪಟ್ಟಭದ್ರರು, ಸಾಹುಕಾರರು ಠೇವಣಿ ಕಳೆದುಕೊಳ್ಳುತ್ತಿದ್ದರು. ಈಗ ಕಾಲ ಎಷ್ಟು ಕೆಟ್ಟಿದೆಯೆಂದರೆ, ಈ ಪಟ್ಟಭದ್ರರ ಎದುರಾಳಿಯಾಗಿ ಸಮಾಜಸೇವಕ ನಿಂತರೆ ಅವನು ಠೇವಣಿ ಕಳೆದುಕೊಳ್ಳುತ್ತಾನೆ.

ಈ ಪಟ್ಟಭದ್ರರ ಪಟ್ಟಿಯಲ್ಲಿ ಕತ್ತಿ ಸೋದರರು, ಡಿ.ಕೆ. ಸೋದರರು, ದೇವೇಗೌಡರ ಕುಟುಂಬ, ಕುಪೇಂದ್ರ ರೆಡ್ಡಿ, ಎಂಟಿಬಿ ನಾಗರಾಜ್, ಈಶ್ವರಪ್ಪ, ಯಡಿಯೂರಪ್ಪ ಮತ್ತವರ ಮಕ್ಕಳು, ಕರಂದ್ಲಾಜೆ, ಹುಕ್ಕೇರಿ ಕುಟುಂಬ, ಜಾರಕಿಹೊಳಿ ಸಹೋದರರು ಮುಂತಾದ ನೂರಕ್ಕೂ ಹೆಚ್ಚು ಜನ ಇದ್ದಾರೆ.

ಗ್ರೀಕ್ ಜನಪದ ಕಥೆಗಳಲ್ಲಿ ಮೈದಾಸ್ ಎಂಬುವವನಿದ್ದನಂತೆ. ಅವನು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿತ್ತಂತೆ. ಅವನು ಚಿನ್ನದ ಆಸೆಯಿಂದ ತನ್ನ ಮಗಳನ್ನು ಮುಟ್ಟಿದನಂತೆ. ಅವಳೂ ಚಿನ್ನವಾದಳು. ಕೋಟ್ಯಂತರ ರೂ.ಗಳನ್ನು ಸಂಗ್ರಹಿಸಿದರೂ, ನೂರಾರು ಎಕರೆ ಜಮೀನು ಕೊಂಡರೂ, ನೂರಾರು ಸೈಟ್‌ಗಳನ್ನು ಮಾಡಿದರೂ ಇನ್ನೂ ದೋಚಬೇಕು, ಬಾಚಬೇಕು ಎಂಬ ದುರಾಸೆ ಇದೆಯಲ್ಲಾ, ಅಬ್ಬಾ! ಇಷ್ಟೆಲ್ಲ ಐಶ್ವರ್ಯವನ್ನು ಇವರು ಹೇಗೆ ಅನುಭವಿಸುತ್ತಾರೆ?

ಚಿಕ್ಕಮಕ್ಕಳನ್ನು ಸಮುದ್ರ ತಡಿಯಲ್ಲಿ ಬಿಟ್ಟುನೋಡಿ, ಅವರು ಕಪ್ಪೆಚಿಪ್ಪು, ಕವಡೆ ಆರಿಸಲು ಶುರು ಮಾಡುತ್ತಾರೆ. ಎಷ್ಟು ಸಂಗ್ರಹಿಸಿದರೂ ಆ ಮಕ್ಕಳಿಗೆ ತೃಪ್ತಿ ಅನ್ನುವುದೇ ಇರಲ್ಲ. ಕಂಡದ್ದನ್ನೆಲ್ಲ ಎತ್ತಿಟ್ಟುಕೊಳ್ಳುತ್ತಾರೆ. ಇಲ್ಲಿ ಮುಗ್ಧ ಮನಸ್ಸಿನ ಮಕ್ಕಳ ಸಂಗ್ರಹದ ಹಿಂದೆ ಅಷ್ಟೇ ಮುಗ್ಧವಾದ ಖುಷಿ ಇರುತ್ತದೆ. ಅದನ್ನು ಬಿಟ್ಟರೆ, ಯಾವ ದುರಾಸೆಯೂ ಇರುವುದಿಲ್ಲ. ಈ ಪಟ್ಟಭದ್ರರು ಆ ಮಕ್ಕಳಂತೆಯೇ ಮುಗಿಬಿದ್ದು ಆಸ್ತಿ ಮಾಡಲು ಹಪಾಹಪಿಸುತ್ತಾರೆ, ಆದರೆ ಅಂತಹ ಹಪಾಹಪಿತನದ ಹಿಂದೆ ಆ ಮಕ್ಕಳಿಗಿದ್ದಂತೆ ಮುಗ್ಧ ಖುಷಿ ಇರುವುದಿಲ್ಲ, ಬದಲಿಗೆ ಕೆಟ್ಟ ದುರಾಸೆ, ದುಷ್ಟ ಸಂಚುಗಳು ಇರುತ್ತವೆ. ಸಂಪಾದಿಸಿರುವ ಎಲ್ಲಾ ಐಶ್ವರ್ಯಕ್ಕೂ ದಾಖಲೆ ಇದೆ ಎಂದು ಸಮರ್ಥಿಸಿಕೊಳ್ಳುತ್ತಾರೆ.

ಇಷ್ಟೊಂದು ಕಲೆಹಾಕುವ ಅಗತ್ಯ ನಿಮಗಿದೆಯೇ? ಎಂದು ಕೇಳಿದರೆ, `ದುಡ್ಡು ಮಾಡಲು ಯೋಗ್ಯತೆ ಇಲ್ಲದಿರುವ ನೀವು ಕೇಳುವ ಮಾತು ಇದು. ನಿಮ್ಮನ್ನು ನೋಡಿದರೆ ಅಯ್ಯೋ ಅನ್ನಿಸುತ್ತೆ’ ಎನ್ನುತ್ತಾರೆ.

ಒಂದು ತಲೆಮಾರಿಗೆ ಬೇಕಾದಷ್ಟು, ಎರಡು ತಲೆಮಾರು ಕೂತು ತಿಂದರೂ ಸವೆಯದಷ್ಟು, ಅದಕ್ಕಿಂತಲೂ ಹೆಚ್ಚು ಸಂಪಾದಿಸಿ ಕೊನೆಗೆ ಲಾಯರಿಗೆ, ಕೋರ್ಟಿಗೆ, ಕಚೇರಿಗೆ, ಪೊಲೀಸರಿಗೆ, ಅಧಿಕಾರಿಗಳಿಗೆ ಕೊಟ್ಟಿರಿ ಎಂದಿಟ್ಟುಕೊಳ್ಳಿ ಆಗ ನಿಮಗೆ ನೆಮ್ಮದಿ ಇರುತ್ತಾ? ಸೆರೆಮನೆ ವಾಸ, ಪೊಲೀಸ್ ಕಸ್ಟಡಿ, ವಿಚಾರಣೆ, ಮುಟ್ಟುಗೋಲು, ಸಜಾ ಇವುಗಳ ಭಯ ಸದಾ ಕಾಡುತ್ತಲೇ ಇರುತ್ತದೆಯಲ್ಲವೇ?. ಕೊಳ್ಳೆಹೊಡೆದ ಆಸ್ತಿ ಉಳಿಸಿಕೊಳ್ಳುವ ಆಲೋಚನೆಯಲ್ಲಿ ರಕ್ತದೊತ್ತಡ, ಹೃದಯಬೇನೆಯಂತಹ ತೀವ್ರತರನಾದ ಕಾಯಿಲೆಗಳಿಗೆ ಬಲಿಯಾಗುತ್ತಾರೆ.

ಲಿಯೋ ಟಾಲ್‌ಸ್ಟಾಯ್ `ಒಬ್ಬ ಮನುಷ್ಯನಿಗೆ ಎಷ್ಟು ಭೂಮಿ ಬೇಕು?’ ಎಂಬ ಒಂದು ಕತೆ ಬರೆದಿದ್ದಾನೆ. ಭೂಮಿ ದಾಹವುಳ್ಳ ಒಬ್ಬ ಮನುಷ್ಯ ಇದ್ದ. ಅವನಿಗೆ ಎಷ್ಟು ಭೂಮಿಕೊಂಡರೂ ತೃಪ್ತಿ ಇಲ್ಲ. ಇವನನ್ನು ಆ ಊರಿನ ಬೆಟ್ಟದ ಮೇಲಿರುವ ಸೈತಾನ್ ಬರಮಾಡಿಕೊಳ್ಳುತ್ತಾನೆ. `50 ಸಾವಿರ ಪೌಂಡ್ ಹಣವಿರುವ ಚೀಲ ಇಲ್ಲಿಡು, ಬೆಟ್ಟದ ಪೂರ್ವಭಾಗದಲ್ಲಿರುವ ಭೂಮಿಯೆಲ್ಲಾ ನನ್ನದೇ. ನೀನು ಬೆಳಿಗ್ಗೆ ಹೊರಟು ನಿನಗೆ ಬೇಕಾದ ಜಮೀನಿಗೆ ಇಂದು ಬಾಂದ್‌ಕಲ್ಲನ್ನು ಇಟ್ಟುಕೊಂಡು ಹೋಗು, ಸಂಜೆವೇಳೆಗೆ ನೀನೆಷ್ಟು ಜಮೀನಿಗೆ ಬಾಂದ್ ಕಲ್ಲು ಇಡುವೆಯೋ ಅದೆಲ್ಲಾ ನಿನ್ನದು. ಆದರೆ ಒಂದು ಕರಾರು. ನೀನು ಸೂರ್ಯಾಸ್ತಮಯದ ಹೊತ್ತಿಗೆ ಬೆಟ್ಟ ಹತ್ತಿ ನಾನು ಕುಳಿತಿರುವಲ್ಲಿಗೆ ಬರಬೇಕು. ನೀನು ಸೂರ್ಯಾಸ್ತದ ಒಳಗೆ ನಾನು ಕುಳಿತಿರುವಲ್ಲಿಗೆ ಬರುವೆಯಾದರೆ ನೀನು ಗುರುತಿಸಿರುವ ಎಲ್ಲಾ ಜಮೀನು ನಿನ್ನದು, ಆದರೆ ನೀನು ನಿಗದಿತ ಸಮಯದೊಳಗೆ ಈ ಸ್ಥಳ ತಲುಪಲು ವಿಫಲವಾದರೆ ಈ 50 ಸಾವಿರ ಪೌಂಡ್ ನನ್ನದಾಗುತ್ತದೆ, ನಿನಗೆ ಒಂದು ಕವಡೆ ಜಮೀನೂ ದಕ್ಕುವುದಿಲ್ಲ.

ಈ ಆಸೆಬುರುಕ ಸರಸರ ಬೆಟ್ಟ ಇಳಿದು ಪೂರ್ವ ದಿಕ್ಕಿನ ಜಮೀನುಗಳ ಅನ್ವೇಷಣೆಗಾಗಿ ಹೊರಟ. ಎದುರುಗಡೆ ವಿಸ್ತಾರವಾದ ಉತ್ಕೃಷ್ಟ ಜಮೀನು ಹರಡಿಕೊಂಡಿದೆ. ಅದರ ಪಕ್ಕದಲ್ಲಿ ನದಿ ಹರಿದುಹೋಗುತ್ತದೆ. ಜಮೀನನ್ನು ಸುತ್ತುಹಾಕಿ ಕಲ್ಲು ನೆಟ್ಟು ಮುಂದಕ್ಕೆ ಹೋದರೆ, ಒಂದು ದೊಡ್ಡ ಕೆರೆ, ಅದರ ಪಕ್ಕದಲ್ಲಿ ಹರಡಿಕೊಂಡಿದ್ದ ಜಮೀನು. ಅದಕ್ಕೂ ಪ್ರದಕ್ಷಿಣೆ ಹಾಕಿ ಕಲ್ಲು ನೆಟ್ಟಿದ್ದಾಯ್ತು. ಅಷ್ಟು ಹೊತ್ತಿಗೆ ಮಧ್ಯಾಹ್ನವಾಗಿತ್ತು. ಮುಂದೆ ಹೊರಟ. ಒಂದು ವಿಶಾಲವಾದ ಪ್ರದೇಶ, ಬಂಜರು ಭೂಮಿ. ಅದರ ಆಚೆಗೆ ಕಾಣಿಸಿತು ಹಚ್ಚಹಸುರಿನ ವಿಸ್ತಾರವಾದ ಭೂಮಿ. ಅಲ್ಲಿಗೆ ದಾಪುಗಾಲು ಹಾಕುತ್ತಾ ಹೋದ. ಅದನ್ನೂ ಸುತ್ತಿ ಒಂದು ಕಲ್ಲುನೆಟ್ಟ. ಸಂಜೆ ನಾಲ್ಕೂವರೆ ಗಂಟೆ. ಬಹುದೂರ ನಡೆದು ಬಂದುಬಿಟ್ಟಿದ್ದಾನೆ. ಸೂರ್ಯ ಮುಳುಗುವುದರ ಒಳಗೆ ಬೆಟ್ಟದ ತುದಿ ಸೇರಬೇಕೆಂಬ ತವಕ. ಸುಸ್ತಾಗಿಬಿಟ್ಟಿದ್ದಾನೆ. ಏದುಸಿರು ಬಿಡುತ್ತಾ ಪ್ರಯಾಸದಿಂದ ಬೆಟ್ಟ ಹತ್ತಿದ. ಬೆಟ್ಟದ ತುದಿ ಮುಟ್ಟಬೇಕು, ಅಷ್ಟರಲ್ಲಿ ಸೂರ್ಯ ದಿಗಂತಕ್ಕೆ ಸರಿದಿದ್ದ. ಗಾಬರಿಯಾಯಿತು. ಜೀವ ಹಿಡಿದುಕೊಂಡು ಶಿಖರದತ್ತ ಧಾವಿಸಿದ. ಬೆಟ್ಟದ ಶಿಖರಕ್ಕೆ ಬಂದವನೇ ತಾನಿಟ್ಟು ಹೋಗಿದ್ದ ಹಣದ ಗಂಟನ್ನು ಪಟ್ಟಾಗಿ ಹಿಡಿದುಕೊಂಡ. ಆದರೆ ಪ್ರಾಣಪಕ್ಷಿ ಹಾರಿಹೋಯಿತು! ಇಷ್ಟೊಂದು ಪ್ರಯಾಸಪಟ್ಟು ನೂರಾರು ಎಕರೆ ಜಮೀನಿನ ಒಡೆಯನಾಗುವ ಅವನ ಆಸೆ ಕಮರಿಹೋಯಿತು.

ಅವನನ್ನು ಮೂರಡಿ, ಆರಡಿ ಅಳತೆಯ ಹಳ್ಳ ತೆಗೆದು ಹೂಳಲಾಯಿತು!

ತಾತ್ಪರ್ಯ ಇಷ್ಟೇ, ಅಪಮಾರ್ಗದಲ್ಲೇ ಆಗಲಿ, ಯೋಗ್ಯ ಮಾರ್ಗದಲ್ಲೇ ಆಗಲಿ ಮನುಷ್ಯ ಎಷ್ಟೇ ಎಕರೆ ಜಮೀನು ಸಂಪಾದಿಸಿಟ್ಟರೂ ಅವನಿಗೆ ದಕ್ಕುವುದು ಮೂರಡಿ, ಆರಡಿ ಜಾಗ ಮಾತ್ರ!

ಸಂಗ್ರಹ ಬುದ್ಧಿಯನ್ನು ಬೆಳೆಸಿಕೊಂಡು, ದುರಾಸೆಯ ಪರಾಕಾಷ್ಠೆ ಏರಿರುವ ಡಿ.ಕೆ.ಶಿವಕುಮಾರ್ ಥರದವರಿಗೆ ಈ ಮಾತು ಅರ್ಥವಾದೀತೆಂದು ಭಾವಿಸಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಥೆ ಮಾರ್ಮಿಕವಾಗಿದೆ. ಇಷ್ಟಕ್ಕೆಲ್ಲಾ ಭ್ರಷ್ಟ ಮತದಾರರು ಕಾರಣ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...