HomeUncategorizedದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

ದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ಸಿನಲ್ಲಿ `ಅಸಂಗ್ರಹ’ ಎಂಬ ವ್ರತವನ್ನು ಕಾಂಗ್ರೆಸ್ಸಿಗರು ಪಾಲಿಸುತ್ತಿದ್ದರು. ಅಸಂಗ್ರಹ ಎಂದರೆ ಕೂಡಿಹಾಕದೆ ಇರುವುದು. ಸಂಗ್ರಹಬುದ್ಧಿ ದುರಾಸೆಯಿಂದ ಕೂಡಿದ ಬುದ್ಧಿ. ಕೂಡಿಹಾಕುವ ಬುದ್ಧಿ ಬೆಳೆದಹಾಗೆ ಇತರರ ಸ್ವತ್ತನ್ನು ಸ್ವಾಹ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಸಂಗ್ರಹ ಬುದ್ಧಿ ವೃದ್ಧಿಯಾದಂತೆ ನ್ಯಾಯಯುತವಾಗಿಯೋ ಅಪಮಾರ್ಗದಿಂದಲೋ ಸಂಪಾದನೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಇದರಿಂದ ಉಳ್ಳವರು, ಕೊಂಡವರ ಮಧ್ಯದ ಕಂದಕ ಬೆಳೆಯುತ್ತಾ ಹೋಗುತ್ತದೆ. ಧನಿಕ ವರ್ಗ ಬಡವರ ಸಮೂಹಗಳ ಮಾನವ ಸಂಬಂಧ ಕೆಡುತ್ತದೆ. ಇದು ಮುಂದೆ ವರ್ಗ ಕಲಹಕ್ಕೂ, ಘರ್ಷಣೆಗೂ ಕಾರಣವಾಗುತ್ತದೆ. ಲೆನಿನ್ನನ ಕಾಲದಲ್ಲಿ ರಷ್ಯಾದಲ್ಲಿ ಈ ಬಗೆಯ ಘರ್ಷಣೆ ಏರ್ಪಟ್ಟು ಶ್ರೀಮಂತ ಭೂಮಾಲೀಕರ ತಲೆಗಳನ್ನು ಕಡಿಯಲಾಯಿತು.

ಸ್ವಾತಂತ್ರ್ಯ ಬಂದಮೇಲೆ ಈ ಶ್ರೀಮಂತರ ವರ್ಗ ರಾಜಕೀಯ ಪಕ್ಷಗಳನ್ನು ಸೇರಿ ಶಾಸಕರು, ಪಾರ್ಲಿಮೆಂಟ್ ಸದಸ್ಯರೂ, ಮಂತ್ರಿಗಳೂ ಆಗಿದ್ದಾರೆ. ಹಿಂದೆ ನಾವು ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಸ್ವಾತಂತ್ರ್ಯ ಆಂದೋಲನದಲ್ಲಿ ಸೆರೆಮನೆಗೆ ಹೋಗಿದ್ದವರನ್ನು ಕಾಂಗ್ರೆಸ್ಸಿನಿಂದ ಚುನಾವಣೆಗೆ ನಿಲ್ಲಿಸುತ್ತಿದ್ದೆವು. ಇವರ ವಿರುದ್ಧವಾಗಿ ನಿಂತ ಪಟ್ಟಭದ್ರರು, ಸಾಹುಕಾರರು ಠೇವಣಿ ಕಳೆದುಕೊಳ್ಳುತ್ತಿದ್ದರು. ಈಗ ಕಾಲ ಎಷ್ಟು ಕೆಟ್ಟಿದೆಯೆಂದರೆ, ಈ ಪಟ್ಟಭದ್ರರ ಎದುರಾಳಿಯಾಗಿ ಸಮಾಜಸೇವಕ ನಿಂತರೆ ಅವನು ಠೇವಣಿ ಕಳೆದುಕೊಳ್ಳುತ್ತಾನೆ.

ಈ ಪಟ್ಟಭದ್ರರ ಪಟ್ಟಿಯಲ್ಲಿ ಕತ್ತಿ ಸೋದರರು, ಡಿ.ಕೆ. ಸೋದರರು, ದೇವೇಗೌಡರ ಕುಟುಂಬ, ಕುಪೇಂದ್ರ ರೆಡ್ಡಿ, ಎಂಟಿಬಿ ನಾಗರಾಜ್, ಈಶ್ವರಪ್ಪ, ಯಡಿಯೂರಪ್ಪ ಮತ್ತವರ ಮಕ್ಕಳು, ಕರಂದ್ಲಾಜೆ, ಹುಕ್ಕೇರಿ ಕುಟುಂಬ, ಜಾರಕಿಹೊಳಿ ಸಹೋದರರು ಮುಂತಾದ ನೂರಕ್ಕೂ ಹೆಚ್ಚು ಜನ ಇದ್ದಾರೆ.

ಗ್ರೀಕ್ ಜನಪದ ಕಥೆಗಳಲ್ಲಿ ಮೈದಾಸ್ ಎಂಬುವವನಿದ್ದನಂತೆ. ಅವನು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿತ್ತಂತೆ. ಅವನು ಚಿನ್ನದ ಆಸೆಯಿಂದ ತನ್ನ ಮಗಳನ್ನು ಮುಟ್ಟಿದನಂತೆ. ಅವಳೂ ಚಿನ್ನವಾದಳು. ಕೋಟ್ಯಂತರ ರೂ.ಗಳನ್ನು ಸಂಗ್ರಹಿಸಿದರೂ, ನೂರಾರು ಎಕರೆ ಜಮೀನು ಕೊಂಡರೂ, ನೂರಾರು ಸೈಟ್‌ಗಳನ್ನು ಮಾಡಿದರೂ ಇನ್ನೂ ದೋಚಬೇಕು, ಬಾಚಬೇಕು ಎಂಬ ದುರಾಸೆ ಇದೆಯಲ್ಲಾ, ಅಬ್ಬಾ! ಇಷ್ಟೆಲ್ಲ ಐಶ್ವರ್ಯವನ್ನು ಇವರು ಹೇಗೆ ಅನುಭವಿಸುತ್ತಾರೆ?

ಚಿಕ್ಕಮಕ್ಕಳನ್ನು ಸಮುದ್ರ ತಡಿಯಲ್ಲಿ ಬಿಟ್ಟುನೋಡಿ, ಅವರು ಕಪ್ಪೆಚಿಪ್ಪು, ಕವಡೆ ಆರಿಸಲು ಶುರು ಮಾಡುತ್ತಾರೆ. ಎಷ್ಟು ಸಂಗ್ರಹಿಸಿದರೂ ಆ ಮಕ್ಕಳಿಗೆ ತೃಪ್ತಿ ಅನ್ನುವುದೇ ಇರಲ್ಲ. ಕಂಡದ್ದನ್ನೆಲ್ಲ ಎತ್ತಿಟ್ಟುಕೊಳ್ಳುತ್ತಾರೆ. ಇಲ್ಲಿ ಮುಗ್ಧ ಮನಸ್ಸಿನ ಮಕ್ಕಳ ಸಂಗ್ರಹದ ಹಿಂದೆ ಅಷ್ಟೇ ಮುಗ್ಧವಾದ ಖುಷಿ ಇರುತ್ತದೆ. ಅದನ್ನು ಬಿಟ್ಟರೆ, ಯಾವ ದುರಾಸೆಯೂ ಇರುವುದಿಲ್ಲ. ಈ ಪಟ್ಟಭದ್ರರು ಆ ಮಕ್ಕಳಂತೆಯೇ ಮುಗಿಬಿದ್ದು ಆಸ್ತಿ ಮಾಡಲು ಹಪಾಹಪಿಸುತ್ತಾರೆ, ಆದರೆ ಅಂತಹ ಹಪಾಹಪಿತನದ ಹಿಂದೆ ಆ ಮಕ್ಕಳಿಗಿದ್ದಂತೆ ಮುಗ್ಧ ಖುಷಿ ಇರುವುದಿಲ್ಲ, ಬದಲಿಗೆ ಕೆಟ್ಟ ದುರಾಸೆ, ದುಷ್ಟ ಸಂಚುಗಳು ಇರುತ್ತವೆ. ಸಂಪಾದಿಸಿರುವ ಎಲ್ಲಾ ಐಶ್ವರ್ಯಕ್ಕೂ ದಾಖಲೆ ಇದೆ ಎಂದು ಸಮರ್ಥಿಸಿಕೊಳ್ಳುತ್ತಾರೆ.

ಇಷ್ಟೊಂದು ಕಲೆಹಾಕುವ ಅಗತ್ಯ ನಿಮಗಿದೆಯೇ? ಎಂದು ಕೇಳಿದರೆ, `ದುಡ್ಡು ಮಾಡಲು ಯೋಗ್ಯತೆ ಇಲ್ಲದಿರುವ ನೀವು ಕೇಳುವ ಮಾತು ಇದು. ನಿಮ್ಮನ್ನು ನೋಡಿದರೆ ಅಯ್ಯೋ ಅನ್ನಿಸುತ್ತೆ’ ಎನ್ನುತ್ತಾರೆ.

ಒಂದು ತಲೆಮಾರಿಗೆ ಬೇಕಾದಷ್ಟು, ಎರಡು ತಲೆಮಾರು ಕೂತು ತಿಂದರೂ ಸವೆಯದಷ್ಟು, ಅದಕ್ಕಿಂತಲೂ ಹೆಚ್ಚು ಸಂಪಾದಿಸಿ ಕೊನೆಗೆ ಲಾಯರಿಗೆ, ಕೋರ್ಟಿಗೆ, ಕಚೇರಿಗೆ, ಪೊಲೀಸರಿಗೆ, ಅಧಿಕಾರಿಗಳಿಗೆ ಕೊಟ್ಟಿರಿ ಎಂದಿಟ್ಟುಕೊಳ್ಳಿ ಆಗ ನಿಮಗೆ ನೆಮ್ಮದಿ ಇರುತ್ತಾ? ಸೆರೆಮನೆ ವಾಸ, ಪೊಲೀಸ್ ಕಸ್ಟಡಿ, ವಿಚಾರಣೆ, ಮುಟ್ಟುಗೋಲು, ಸಜಾ ಇವುಗಳ ಭಯ ಸದಾ ಕಾಡುತ್ತಲೇ ಇರುತ್ತದೆಯಲ್ಲವೇ?. ಕೊಳ್ಳೆಹೊಡೆದ ಆಸ್ತಿ ಉಳಿಸಿಕೊಳ್ಳುವ ಆಲೋಚನೆಯಲ್ಲಿ ರಕ್ತದೊತ್ತಡ, ಹೃದಯಬೇನೆಯಂತಹ ತೀವ್ರತರನಾದ ಕಾಯಿಲೆಗಳಿಗೆ ಬಲಿಯಾಗುತ್ತಾರೆ.

ಲಿಯೋ ಟಾಲ್‌ಸ್ಟಾಯ್ `ಒಬ್ಬ ಮನುಷ್ಯನಿಗೆ ಎಷ್ಟು ಭೂಮಿ ಬೇಕು?’ ಎಂಬ ಒಂದು ಕತೆ ಬರೆದಿದ್ದಾನೆ. ಭೂಮಿ ದಾಹವುಳ್ಳ ಒಬ್ಬ ಮನುಷ್ಯ ಇದ್ದ. ಅವನಿಗೆ ಎಷ್ಟು ಭೂಮಿಕೊಂಡರೂ ತೃಪ್ತಿ ಇಲ್ಲ. ಇವನನ್ನು ಆ ಊರಿನ ಬೆಟ್ಟದ ಮೇಲಿರುವ ಸೈತಾನ್ ಬರಮಾಡಿಕೊಳ್ಳುತ್ತಾನೆ. `50 ಸಾವಿರ ಪೌಂಡ್ ಹಣವಿರುವ ಚೀಲ ಇಲ್ಲಿಡು, ಬೆಟ್ಟದ ಪೂರ್ವಭಾಗದಲ್ಲಿರುವ ಭೂಮಿಯೆಲ್ಲಾ ನನ್ನದೇ. ನೀನು ಬೆಳಿಗ್ಗೆ ಹೊರಟು ನಿನಗೆ ಬೇಕಾದ ಜಮೀನಿಗೆ ಇಂದು ಬಾಂದ್‌ಕಲ್ಲನ್ನು ಇಟ್ಟುಕೊಂಡು ಹೋಗು, ಸಂಜೆವೇಳೆಗೆ ನೀನೆಷ್ಟು ಜಮೀನಿಗೆ ಬಾಂದ್ ಕಲ್ಲು ಇಡುವೆಯೋ ಅದೆಲ್ಲಾ ನಿನ್ನದು. ಆದರೆ ಒಂದು ಕರಾರು. ನೀನು ಸೂರ್ಯಾಸ್ತಮಯದ ಹೊತ್ತಿಗೆ ಬೆಟ್ಟ ಹತ್ತಿ ನಾನು ಕುಳಿತಿರುವಲ್ಲಿಗೆ ಬರಬೇಕು. ನೀನು ಸೂರ್ಯಾಸ್ತದ ಒಳಗೆ ನಾನು ಕುಳಿತಿರುವಲ್ಲಿಗೆ ಬರುವೆಯಾದರೆ ನೀನು ಗುರುತಿಸಿರುವ ಎಲ್ಲಾ ಜಮೀನು ನಿನ್ನದು, ಆದರೆ ನೀನು ನಿಗದಿತ ಸಮಯದೊಳಗೆ ಈ ಸ್ಥಳ ತಲುಪಲು ವಿಫಲವಾದರೆ ಈ 50 ಸಾವಿರ ಪೌಂಡ್ ನನ್ನದಾಗುತ್ತದೆ, ನಿನಗೆ ಒಂದು ಕವಡೆ ಜಮೀನೂ ದಕ್ಕುವುದಿಲ್ಲ.

ಈ ಆಸೆಬುರುಕ ಸರಸರ ಬೆಟ್ಟ ಇಳಿದು ಪೂರ್ವ ದಿಕ್ಕಿನ ಜಮೀನುಗಳ ಅನ್ವೇಷಣೆಗಾಗಿ ಹೊರಟ. ಎದುರುಗಡೆ ವಿಸ್ತಾರವಾದ ಉತ್ಕೃಷ್ಟ ಜಮೀನು ಹರಡಿಕೊಂಡಿದೆ. ಅದರ ಪಕ್ಕದಲ್ಲಿ ನದಿ ಹರಿದುಹೋಗುತ್ತದೆ. ಜಮೀನನ್ನು ಸುತ್ತುಹಾಕಿ ಕಲ್ಲು ನೆಟ್ಟು ಮುಂದಕ್ಕೆ ಹೋದರೆ, ಒಂದು ದೊಡ್ಡ ಕೆರೆ, ಅದರ ಪಕ್ಕದಲ್ಲಿ ಹರಡಿಕೊಂಡಿದ್ದ ಜಮೀನು. ಅದಕ್ಕೂ ಪ್ರದಕ್ಷಿಣೆ ಹಾಕಿ ಕಲ್ಲು ನೆಟ್ಟಿದ್ದಾಯ್ತು. ಅಷ್ಟು ಹೊತ್ತಿಗೆ ಮಧ್ಯಾಹ್ನವಾಗಿತ್ತು. ಮುಂದೆ ಹೊರಟ. ಒಂದು ವಿಶಾಲವಾದ ಪ್ರದೇಶ, ಬಂಜರು ಭೂಮಿ. ಅದರ ಆಚೆಗೆ ಕಾಣಿಸಿತು ಹಚ್ಚಹಸುರಿನ ವಿಸ್ತಾರವಾದ ಭೂಮಿ. ಅಲ್ಲಿಗೆ ದಾಪುಗಾಲು ಹಾಕುತ್ತಾ ಹೋದ. ಅದನ್ನೂ ಸುತ್ತಿ ಒಂದು ಕಲ್ಲುನೆಟ್ಟ. ಸಂಜೆ ನಾಲ್ಕೂವರೆ ಗಂಟೆ. ಬಹುದೂರ ನಡೆದು ಬಂದುಬಿಟ್ಟಿದ್ದಾನೆ. ಸೂರ್ಯ ಮುಳುಗುವುದರ ಒಳಗೆ ಬೆಟ್ಟದ ತುದಿ ಸೇರಬೇಕೆಂಬ ತವಕ. ಸುಸ್ತಾಗಿಬಿಟ್ಟಿದ್ದಾನೆ. ಏದುಸಿರು ಬಿಡುತ್ತಾ ಪ್ರಯಾಸದಿಂದ ಬೆಟ್ಟ ಹತ್ತಿದ. ಬೆಟ್ಟದ ತುದಿ ಮುಟ್ಟಬೇಕು, ಅಷ್ಟರಲ್ಲಿ ಸೂರ್ಯ ದಿಗಂತಕ್ಕೆ ಸರಿದಿದ್ದ. ಗಾಬರಿಯಾಯಿತು. ಜೀವ ಹಿಡಿದುಕೊಂಡು ಶಿಖರದತ್ತ ಧಾವಿಸಿದ. ಬೆಟ್ಟದ ಶಿಖರಕ್ಕೆ ಬಂದವನೇ ತಾನಿಟ್ಟು ಹೋಗಿದ್ದ ಹಣದ ಗಂಟನ್ನು ಪಟ್ಟಾಗಿ ಹಿಡಿದುಕೊಂಡ. ಆದರೆ ಪ್ರಾಣಪಕ್ಷಿ ಹಾರಿಹೋಯಿತು! ಇಷ್ಟೊಂದು ಪ್ರಯಾಸಪಟ್ಟು ನೂರಾರು ಎಕರೆ ಜಮೀನಿನ ಒಡೆಯನಾಗುವ ಅವನ ಆಸೆ ಕಮರಿಹೋಯಿತು.

ಅವನನ್ನು ಮೂರಡಿ, ಆರಡಿ ಅಳತೆಯ ಹಳ್ಳ ತೆಗೆದು ಹೂಳಲಾಯಿತು!

ತಾತ್ಪರ್ಯ ಇಷ್ಟೇ, ಅಪಮಾರ್ಗದಲ್ಲೇ ಆಗಲಿ, ಯೋಗ್ಯ ಮಾರ್ಗದಲ್ಲೇ ಆಗಲಿ ಮನುಷ್ಯ ಎಷ್ಟೇ ಎಕರೆ ಜಮೀನು ಸಂಪಾದಿಸಿಟ್ಟರೂ ಅವನಿಗೆ ದಕ್ಕುವುದು ಮೂರಡಿ, ಆರಡಿ ಜಾಗ ಮಾತ್ರ!

ಸಂಗ್ರಹ ಬುದ್ಧಿಯನ್ನು ಬೆಳೆಸಿಕೊಂಡು, ದುರಾಸೆಯ ಪರಾಕಾಷ್ಠೆ ಏರಿರುವ ಡಿ.ಕೆ.ಶಿವಕುಮಾರ್ ಥರದವರಿಗೆ ಈ ಮಾತು ಅರ್ಥವಾದೀತೆಂದು ಭಾವಿಸಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಥೆ ಮಾರ್ಮಿಕವಾಗಿದೆ. ಇಷ್ಟಕ್ಕೆಲ್ಲಾ ಭ್ರಷ್ಟ ಮತದಾರರು ಕಾರಣ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...