Homeಕರ್ನಾಟಕಎಚ್.ಎಸ್.ದೊರೆಸ್ವಾಮಿಯವರ ಮಡದಿ ಶ್ರೀಮತಿ ಲಲಿತಮ್ಮ ನಿಧನ..

ಎಚ್.ಎಸ್.ದೊರೆಸ್ವಾಮಿಯವರ ಮಡದಿ ಶ್ರೀಮತಿ ಲಲಿತಮ್ಮ ನಿಧನ..

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿಯವರಿಗೆ ಪತ್ನಿ ವಿಯೋಗವಾಗಿದ್ದು ಅವರ ಮಡದಿ ಶ್ರೀಮತಿ ಲಲಿತಮ್ಮನವರು ಇಂದು ನಿಧನರಾಗಿದ್ದಾರೆ.

89 ವರ್ಷದ ಲಲತಮ್ಮನವರು ಬಹುಅಂಗಾಗ ವೈಫಲ್ಯಗಳಿಂದ ಬಳಲುತ್ತಿದ್ದರು. ಅವರನ್ನು ಬಿಎಂಸಿಯ ಎಮರ್ಜೆನ್ಸಿ ಅಂಡ್‌ ಟ್ರಾಮ ಕೇರ್‌ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ತಮ್ಮ ಪತಿ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರನ್ನು ಸೇರಿಂದತೆ ಒಬ್ಬ ಮಗ ಮತ್ತು ಒಬ್ಬ ಮಗಳನ್ನು ಅವರು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು 12:30ಕ್ಕೆ ಅವರ ಜಯನಗರದ ನಾಲ್ಕನೇ ಟಿ ಬ್ಲಾಕ್‌‌ನ ಮನೆಯ ಬಳಿ ತರುತ್ತಾರೆ. ನಂತರ 3 ಗಂಟೆಗೆ ಕಿಮ್ಸ್‌ಗೆ ದೇಹದಾನ ಮಾಡುತ್ತಾರೆ ಎಂದು ಎಚ್‌.ಎಸ್‌ ದೊರೆಸ್ವಾಮಿಯವರು ತಿಳಿಸಿದ್ದಾರೆ.

ದೊರೆಸ್ವಾಮಿ – ಲಲಿತಮ್ಮ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದರೂ ಸಹ ಅವರು ಸ್ವತಂತ್ರವಾಗಿ ಬದುಕುತ್ತಿದ್ದರು. ದೊರೆಸ್ವಾಮಿಯವರಂತೂ ನೂರು ವರ್ಷ ತುಂಬಿದ್ದರೂ ಸಹ ಹಣ ಅಧಿಕಾರದ ಯಾವುದೇ ಫಲಾಫೇಕ್ಷೆಯಿಲ್ಲದೇ ಇಂದಿಗೂ ಸಹ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದವರು. ಮೊನ್ನೆ ತಾನೇ ದೊರೆಸ್ವಾಮಿಯವರು ಸಮಾಜವಾದಿಗಳ ಸಮಾಗಮ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅದಕ್ಕೆ ಸಾಕ್ಷಿ.

ಬಡವರು, ಶೋಷಿತರ ಹೋರಾಟ ಕರ್ನಾಟಕದ ಯಾವ ಭಾಗದಲ್ಲಿ ನಡೆದರೂ ಪಾಲ್ಗೊಂಡು ಬಡವರ ಪರ ದನಿ ಎತ್ತುತ್ತಿದ್ದ, ಸರ್ಕಾರಕ್ಕೆ ಚಾಟೀ ಬೀಸುತ್ತಿದ್ದ ದೊರೆಸ್ವಾಮಿಯವರ ಬೆನ್ನೆಲುಬಾಗಿ ನಿಂತಿದ್ದು ಅವರ ಪತ್ನಿ ಲಲಿತಮ್ಮನವರು. ಅವರು ಕೂಡ ಸಾರ್ವಜನಿಕ ಕೆಲಸಗಳಿಗೆ ಸದಾ ಕಾಲ ಬೆಂಬಲ ನೀಡುತ್ತಾ ಬಂದಿದ್ದರು.

ಬಹಳಷ್ಟು ಸ್ವತಂತ್ರ ಹೋರಾಟಗಾರರು ಅಧಿಕಾರಕ್ಕೇರಿದರೆ ದೊರೆಸ್ವಾಮಿಯವರು ಮಾತ್ರ ಸಂಪೂರ್ಣ ಹೋರಾಟಕ್ಕೆ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಅದಕ್ಕೆ ಅವರ ಪತ್ನಿ ಸಂಪೂರ್ಣ ಜೊತೆ ನಿಂತಿದ್ದರು. ಅದಕ್ಕಾಗಿಯೇ ಇತ್ತೀಚೆಗೆ ದೊರೆಸ್ವಾಮಿಯವರಿಗೆ ಯಾರೇ ಸನ್ಮಾನ ಮಾಡಿದರೂ ಸಹ ಅವರ ಪತ್ನಿಗೂ ಜೊತೆ ಸೇರಿ ಸನ್ಮಾನ ಮಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...