Homeಕರ್ನಾಟಕಎಚ್.ಎಸ್.ದೊರೆಸ್ವಾಮಿಯವರ ಮಡದಿ ಶ್ರೀಮತಿ ಲಲಿತಮ್ಮ ನಿಧನ..

ಎಚ್.ಎಸ್.ದೊರೆಸ್ವಾಮಿಯವರ ಮಡದಿ ಶ್ರೀಮತಿ ಲಲಿತಮ್ಮ ನಿಧನ..

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿಯವರಿಗೆ ಪತ್ನಿ ವಿಯೋಗವಾಗಿದ್ದು ಅವರ ಮಡದಿ ಶ್ರೀಮತಿ ಲಲಿತಮ್ಮನವರು ಇಂದು ನಿಧನರಾಗಿದ್ದಾರೆ.

89 ವರ್ಷದ ಲಲತಮ್ಮನವರು ಬಹುಅಂಗಾಗ ವೈಫಲ್ಯಗಳಿಂದ ಬಳಲುತ್ತಿದ್ದರು. ಅವರನ್ನು ಬಿಎಂಸಿಯ ಎಮರ್ಜೆನ್ಸಿ ಅಂಡ್‌ ಟ್ರಾಮ ಕೇರ್‌ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ತಮ್ಮ ಪತಿ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರನ್ನು ಸೇರಿಂದತೆ ಒಬ್ಬ ಮಗ ಮತ್ತು ಒಬ್ಬ ಮಗಳನ್ನು ಅವರು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು 12:30ಕ್ಕೆ ಅವರ ಜಯನಗರದ ನಾಲ್ಕನೇ ಟಿ ಬ್ಲಾಕ್‌‌ನ ಮನೆಯ ಬಳಿ ತರುತ್ತಾರೆ. ನಂತರ 3 ಗಂಟೆಗೆ ಕಿಮ್ಸ್‌ಗೆ ದೇಹದಾನ ಮಾಡುತ್ತಾರೆ ಎಂದು ಎಚ್‌.ಎಸ್‌ ದೊರೆಸ್ವಾಮಿಯವರು ತಿಳಿಸಿದ್ದಾರೆ.

ದೊರೆಸ್ವಾಮಿ – ಲಲಿತಮ್ಮ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದರೂ ಸಹ ಅವರು ಸ್ವತಂತ್ರವಾಗಿ ಬದುಕುತ್ತಿದ್ದರು. ದೊರೆಸ್ವಾಮಿಯವರಂತೂ ನೂರು ವರ್ಷ ತುಂಬಿದ್ದರೂ ಸಹ ಹಣ ಅಧಿಕಾರದ ಯಾವುದೇ ಫಲಾಫೇಕ್ಷೆಯಿಲ್ಲದೇ ಇಂದಿಗೂ ಸಹ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದವರು. ಮೊನ್ನೆ ತಾನೇ ದೊರೆಸ್ವಾಮಿಯವರು ಸಮಾಜವಾದಿಗಳ ಸಮಾಗಮ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅದಕ್ಕೆ ಸಾಕ್ಷಿ.

ಬಡವರು, ಶೋಷಿತರ ಹೋರಾಟ ಕರ್ನಾಟಕದ ಯಾವ ಭಾಗದಲ್ಲಿ ನಡೆದರೂ ಪಾಲ್ಗೊಂಡು ಬಡವರ ಪರ ದನಿ ಎತ್ತುತ್ತಿದ್ದ, ಸರ್ಕಾರಕ್ಕೆ ಚಾಟೀ ಬೀಸುತ್ತಿದ್ದ ದೊರೆಸ್ವಾಮಿಯವರ ಬೆನ್ನೆಲುಬಾಗಿ ನಿಂತಿದ್ದು ಅವರ ಪತ್ನಿ ಲಲಿತಮ್ಮನವರು. ಅವರು ಕೂಡ ಸಾರ್ವಜನಿಕ ಕೆಲಸಗಳಿಗೆ ಸದಾ ಕಾಲ ಬೆಂಬಲ ನೀಡುತ್ತಾ ಬಂದಿದ್ದರು.

ಬಹಳಷ್ಟು ಸ್ವತಂತ್ರ ಹೋರಾಟಗಾರರು ಅಧಿಕಾರಕ್ಕೇರಿದರೆ ದೊರೆಸ್ವಾಮಿಯವರು ಮಾತ್ರ ಸಂಪೂರ್ಣ ಹೋರಾಟಕ್ಕೆ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಅದಕ್ಕೆ ಅವರ ಪತ್ನಿ ಸಂಪೂರ್ಣ ಜೊತೆ ನಿಂತಿದ್ದರು. ಅದಕ್ಕಾಗಿಯೇ ಇತ್ತೀಚೆಗೆ ದೊರೆಸ್ವಾಮಿಯವರಿಗೆ ಯಾರೇ ಸನ್ಮಾನ ಮಾಡಿದರೂ ಸಹ ಅವರ ಪತ್ನಿಗೂ ಜೊತೆ ಸೇರಿ ಸನ್ಮಾನ ಮಾಡುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...