Homeಅಂಕಣಗಳುಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

ಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‍ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮಥ್ರ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ. ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ಥರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.
ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗಿ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನ ತಳೆಯುತ್ತಾರೆ. 500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‍ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲವೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...