Homeಕರ್ನಾಟಕಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ವಿಶ್ವನಾಥ್ ರವರು ಬರೆದ 'ಹಳ್ಳಿ ಹಕ್ಕಿ' ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ?

- Advertisement -
- Advertisement -

ಕಳೆದೊಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿರುವ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ವಿಶ್ವನಾಥ್ ರವರು ಜೂನ್ 4ರ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯನವರ ಪರವಾಗಿ ನಿಂತು ಬ್ಯಾಟ್ ಬೀಸುತ್ತಾ ದೇವೇಗೌಡರಿಗೆ ಎಗ್ಗ ಮಗ್ಗ ಜಾಡಿಸುತ್ತಿದ್ದ ಎಚ್.ವಿಶ್ವನಾಥ್ ರವರನ್ನು ದೇವೇಗೌಡರು 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಕೆಲಸ ಮಾಡಿದರು. ನಂತರ ಇದೇ ವಿಶ್ವನಾಥ್ ಅದೇ ಜೆಡಿಎಸ್ ಸೇರಿ ಹುಣಸೂರಿನಿಂದ ಶಾಸಕರಾಗಿದ್ದು ಆಯ್ತು.

ಜೆಡಿಎಸ್ – ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ರವರಿಗೆ ಕೊನೆಗೆ ಸಿಕ್ಕಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನ. ತನ್ನ ಪಾಲಿಗೆ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತವೆ ಎಂದು ವಿಶ್ವನಾಥ್ ಕಾದಿದ್ದೇ ಕಾದಿದ್ದು. ಆದರೆ ಅಂತಹ ಲಕ್ಷಣಗಳೇನು ಕಾಣಿಸಲಿಲ್ಲ.

ಮಂಡ್ಯ ಲೋಕಸಭೆಯ ವಿಚಾರವಾಗಿ ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ಕಣಕ್ಕಿಳಿದಾಗ ಎಚ್ ಡಿ ರೇವಣ್ಣ ನಾಲಿಗೆ ಹರಿಯಬಿಟ್ಟರು. ಗಂಡ ಸತ್ತು ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಿತ್ತಾ ಎಂದು ಹೇಳಿ ವಿವಾದ ಉಂಟು ಮಾಡಿದರು. ಎಲ್ಲಾ ಕಡೆಗಳಿಂದಲೂ ಪ್ರಬಲ ವಿರೋಧ ಬಂತು. ಆದರೆ ರೇವಣ್ಣ ತನ್ನ ಹೇಳಿಕೆ ಹಿಂದೆ ಪಡೆಯಲಿಲ್ಲ. ಕೊನೆಗೆ ಜೆಡಿಎಸ್ ರಾಜ್ಯಧ್ಯಕ್ಷರಾಗಿದ್ದ ತಪ್ಪಿಗೆ ವಿಶ್ವನಾಥ್ ರವರು ಸಾರಿ ಕೇಳಬೇಕಾಗಿಬಂತು.

ಹೀಗಿರುವಾಗಲೇ ವಿಶ್ವನಾಥರು ಸಿದ್ದರಾಮಯ್ಯನವರ ವಿರುದ್ಧ ಕತ್ತಿ ಮಸೆಯಲು ಆರಂಭಿಸಿದರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಾಧಿಸಿದ್ದು ಏನು ಇಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟರು. ಇದಕ್ಕೆ ಸಿದ್ದರಾಮನ್ಯನವರು ತಿರುಗೇಟು ನೀಡಿದಾಗ ಕುಲದೇವರು ಸಿದ್ದರಾಮಯ್ಯನವರಿಗೆ ಬುದ್ದಿ ಕರುಣಿಸಲಿ ಎಂದು ಕಟಕಿಯಾಡಿದರು.

ಲೋಕಸಭಾ ಎಲೆಕ್ಷನ್ ಮುಗಿಯುವವರೆಗೂ ಹೇಗೂ ಅದುಮಿಟ್ಟುಕೊಂಡಿದ್ದ ಅವರ ಅಸಮಾಧಾನ ಈಗ ಹೊರಬಂದಿದೆ. ದೇವೇಗೌಡರ ಬಗ್ಗೆ ಬಹಳ ದ್ವೇಷವಿದಿದ್ದರೂ ಅಂತಹ ಪ್ರೀತಿಯೇನು ಇರಲಿಲ್ಲ. ವಿಶ್ವನಾಥ್ ರವರು ಬರೆದ ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ? ರಾಜ್ಯ ರಾಜಕಾರಣ ಯಾವ ದಿಕ್ಕು ತೆಗೆದುಕೊಳ್ಳಲಿದೆ? ಎಲ್ಲಕ್ಕೂ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...