Homeಕರ್ನಾಟಕಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ವಿಶ್ವನಾಥ್ ರವರು ಬರೆದ 'ಹಳ್ಳಿ ಹಕ್ಕಿ' ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ?

- Advertisement -
- Advertisement -

ಕಳೆದೊಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿರುವ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ವಿಶ್ವನಾಥ್ ರವರು ಜೂನ್ 4ರ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯನವರ ಪರವಾಗಿ ನಿಂತು ಬ್ಯಾಟ್ ಬೀಸುತ್ತಾ ದೇವೇಗೌಡರಿಗೆ ಎಗ್ಗ ಮಗ್ಗ ಜಾಡಿಸುತ್ತಿದ್ದ ಎಚ್.ವಿಶ್ವನಾಥ್ ರವರನ್ನು ದೇವೇಗೌಡರು 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಕೆಲಸ ಮಾಡಿದರು. ನಂತರ ಇದೇ ವಿಶ್ವನಾಥ್ ಅದೇ ಜೆಡಿಎಸ್ ಸೇರಿ ಹುಣಸೂರಿನಿಂದ ಶಾಸಕರಾಗಿದ್ದು ಆಯ್ತು.

ಜೆಡಿಎಸ್ – ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ರವರಿಗೆ ಕೊನೆಗೆ ಸಿಕ್ಕಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನ. ತನ್ನ ಪಾಲಿಗೆ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತವೆ ಎಂದು ವಿಶ್ವನಾಥ್ ಕಾದಿದ್ದೇ ಕಾದಿದ್ದು. ಆದರೆ ಅಂತಹ ಲಕ್ಷಣಗಳೇನು ಕಾಣಿಸಲಿಲ್ಲ.

ಮಂಡ್ಯ ಲೋಕಸಭೆಯ ವಿಚಾರವಾಗಿ ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ಕಣಕ್ಕಿಳಿದಾಗ ಎಚ್ ಡಿ ರೇವಣ್ಣ ನಾಲಿಗೆ ಹರಿಯಬಿಟ್ಟರು. ಗಂಡ ಸತ್ತು ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಿತ್ತಾ ಎಂದು ಹೇಳಿ ವಿವಾದ ಉಂಟು ಮಾಡಿದರು. ಎಲ್ಲಾ ಕಡೆಗಳಿಂದಲೂ ಪ್ರಬಲ ವಿರೋಧ ಬಂತು. ಆದರೆ ರೇವಣ್ಣ ತನ್ನ ಹೇಳಿಕೆ ಹಿಂದೆ ಪಡೆಯಲಿಲ್ಲ. ಕೊನೆಗೆ ಜೆಡಿಎಸ್ ರಾಜ್ಯಧ್ಯಕ್ಷರಾಗಿದ್ದ ತಪ್ಪಿಗೆ ವಿಶ್ವನಾಥ್ ರವರು ಸಾರಿ ಕೇಳಬೇಕಾಗಿಬಂತು.

ಹೀಗಿರುವಾಗಲೇ ವಿಶ್ವನಾಥರು ಸಿದ್ದರಾಮಯ್ಯನವರ ವಿರುದ್ಧ ಕತ್ತಿ ಮಸೆಯಲು ಆರಂಭಿಸಿದರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಾಧಿಸಿದ್ದು ಏನು ಇಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟರು. ಇದಕ್ಕೆ ಸಿದ್ದರಾಮನ್ಯನವರು ತಿರುಗೇಟು ನೀಡಿದಾಗ ಕುಲದೇವರು ಸಿದ್ದರಾಮಯ್ಯನವರಿಗೆ ಬುದ್ದಿ ಕರುಣಿಸಲಿ ಎಂದು ಕಟಕಿಯಾಡಿದರು.

ಲೋಕಸಭಾ ಎಲೆಕ್ಷನ್ ಮುಗಿಯುವವರೆಗೂ ಹೇಗೂ ಅದುಮಿಟ್ಟುಕೊಂಡಿದ್ದ ಅವರ ಅಸಮಾಧಾನ ಈಗ ಹೊರಬಂದಿದೆ. ದೇವೇಗೌಡರ ಬಗ್ಗೆ ಬಹಳ ದ್ವೇಷವಿದಿದ್ದರೂ ಅಂತಹ ಪ್ರೀತಿಯೇನು ಇರಲಿಲ್ಲ. ವಿಶ್ವನಾಥ್ ರವರು ಬರೆದ ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ? ರಾಜ್ಯ ರಾಜಕಾರಣ ಯಾವ ದಿಕ್ಕು ತೆಗೆದುಕೊಳ್ಳಲಿದೆ? ಎಲ್ಲಕ್ಕೂ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...