Homeಕರ್ನಾಟಕಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ವಿಶ್ವನಾಥ್ ರವರು ಬರೆದ 'ಹಳ್ಳಿ ಹಕ್ಕಿ' ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ?

- Advertisement -
- Advertisement -

ಕಳೆದೊಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿರುವ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ವಿಶ್ವನಾಥ್ ರವರು ಜೂನ್ 4ರ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯನವರ ಪರವಾಗಿ ನಿಂತು ಬ್ಯಾಟ್ ಬೀಸುತ್ತಾ ದೇವೇಗೌಡರಿಗೆ ಎಗ್ಗ ಮಗ್ಗ ಜಾಡಿಸುತ್ತಿದ್ದ ಎಚ್.ವಿಶ್ವನಾಥ್ ರವರನ್ನು ದೇವೇಗೌಡರು 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಕೆಲಸ ಮಾಡಿದರು. ನಂತರ ಇದೇ ವಿಶ್ವನಾಥ್ ಅದೇ ಜೆಡಿಎಸ್ ಸೇರಿ ಹುಣಸೂರಿನಿಂದ ಶಾಸಕರಾಗಿದ್ದು ಆಯ್ತು.

ಜೆಡಿಎಸ್ – ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ರವರಿಗೆ ಕೊನೆಗೆ ಸಿಕ್ಕಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನ. ತನ್ನ ಪಾಲಿಗೆ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತವೆ ಎಂದು ವಿಶ್ವನಾಥ್ ಕಾದಿದ್ದೇ ಕಾದಿದ್ದು. ಆದರೆ ಅಂತಹ ಲಕ್ಷಣಗಳೇನು ಕಾಣಿಸಲಿಲ್ಲ.

ಮಂಡ್ಯ ಲೋಕಸಭೆಯ ವಿಚಾರವಾಗಿ ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ಕಣಕ್ಕಿಳಿದಾಗ ಎಚ್ ಡಿ ರೇವಣ್ಣ ನಾಲಿಗೆ ಹರಿಯಬಿಟ್ಟರು. ಗಂಡ ಸತ್ತು ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಿತ್ತಾ ಎಂದು ಹೇಳಿ ವಿವಾದ ಉಂಟು ಮಾಡಿದರು. ಎಲ್ಲಾ ಕಡೆಗಳಿಂದಲೂ ಪ್ರಬಲ ವಿರೋಧ ಬಂತು. ಆದರೆ ರೇವಣ್ಣ ತನ್ನ ಹೇಳಿಕೆ ಹಿಂದೆ ಪಡೆಯಲಿಲ್ಲ. ಕೊನೆಗೆ ಜೆಡಿಎಸ್ ರಾಜ್ಯಧ್ಯಕ್ಷರಾಗಿದ್ದ ತಪ್ಪಿಗೆ ವಿಶ್ವನಾಥ್ ರವರು ಸಾರಿ ಕೇಳಬೇಕಾಗಿಬಂತು.

ಹೀಗಿರುವಾಗಲೇ ವಿಶ್ವನಾಥರು ಸಿದ್ದರಾಮಯ್ಯನವರ ವಿರುದ್ಧ ಕತ್ತಿ ಮಸೆಯಲು ಆರಂಭಿಸಿದರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಾಧಿಸಿದ್ದು ಏನು ಇಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟರು. ಇದಕ್ಕೆ ಸಿದ್ದರಾಮನ್ಯನವರು ತಿರುಗೇಟು ನೀಡಿದಾಗ ಕುಲದೇವರು ಸಿದ್ದರಾಮಯ್ಯನವರಿಗೆ ಬುದ್ದಿ ಕರುಣಿಸಲಿ ಎಂದು ಕಟಕಿಯಾಡಿದರು.

ಲೋಕಸಭಾ ಎಲೆಕ್ಷನ್ ಮುಗಿಯುವವರೆಗೂ ಹೇಗೂ ಅದುಮಿಟ್ಟುಕೊಂಡಿದ್ದ ಅವರ ಅಸಮಾಧಾನ ಈಗ ಹೊರಬಂದಿದೆ. ದೇವೇಗೌಡರ ಬಗ್ಗೆ ಬಹಳ ದ್ವೇಷವಿದಿದ್ದರೂ ಅಂತಹ ಪ್ರೀತಿಯೇನು ಇರಲಿಲ್ಲ. ವಿಶ್ವನಾಥ್ ರವರು ಬರೆದ ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ? ರಾಜ್ಯ ರಾಜಕಾರಣ ಯಾವ ದಿಕ್ಕು ತೆಗೆದುಕೊಳ್ಳಲಿದೆ? ಎಲ್ಲಕ್ಕೂ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...