Homeಕರ್ನಾಟಕಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ವಿಶ್ವನಾಥ್ ರವರು ಬರೆದ 'ಹಳ್ಳಿ ಹಕ್ಕಿ' ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ?

- Advertisement -
- Advertisement -

ಕಳೆದೊಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿರುವ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ವಿಶ್ವನಾಥ್ ರವರು ಜೂನ್ 4ರ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯನವರ ಪರವಾಗಿ ನಿಂತು ಬ್ಯಾಟ್ ಬೀಸುತ್ತಾ ದೇವೇಗೌಡರಿಗೆ ಎಗ್ಗ ಮಗ್ಗ ಜಾಡಿಸುತ್ತಿದ್ದ ಎಚ್.ವಿಶ್ವನಾಥ್ ರವರನ್ನು ದೇವೇಗೌಡರು 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಕೆಲಸ ಮಾಡಿದರು. ನಂತರ ಇದೇ ವಿಶ್ವನಾಥ್ ಅದೇ ಜೆಡಿಎಸ್ ಸೇರಿ ಹುಣಸೂರಿನಿಂದ ಶಾಸಕರಾಗಿದ್ದು ಆಯ್ತು.

ಜೆಡಿಎಸ್ – ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ರವರಿಗೆ ಕೊನೆಗೆ ಸಿಕ್ಕಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನ. ತನ್ನ ಪಾಲಿಗೆ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತವೆ ಎಂದು ವಿಶ್ವನಾಥ್ ಕಾದಿದ್ದೇ ಕಾದಿದ್ದು. ಆದರೆ ಅಂತಹ ಲಕ್ಷಣಗಳೇನು ಕಾಣಿಸಲಿಲ್ಲ.

ಮಂಡ್ಯ ಲೋಕಸಭೆಯ ವಿಚಾರವಾಗಿ ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ಕಣಕ್ಕಿಳಿದಾಗ ಎಚ್ ಡಿ ರೇವಣ್ಣ ನಾಲಿಗೆ ಹರಿಯಬಿಟ್ಟರು. ಗಂಡ ಸತ್ತು ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಿತ್ತಾ ಎಂದು ಹೇಳಿ ವಿವಾದ ಉಂಟು ಮಾಡಿದರು. ಎಲ್ಲಾ ಕಡೆಗಳಿಂದಲೂ ಪ್ರಬಲ ವಿರೋಧ ಬಂತು. ಆದರೆ ರೇವಣ್ಣ ತನ್ನ ಹೇಳಿಕೆ ಹಿಂದೆ ಪಡೆಯಲಿಲ್ಲ. ಕೊನೆಗೆ ಜೆಡಿಎಸ್ ರಾಜ್ಯಧ್ಯಕ್ಷರಾಗಿದ್ದ ತಪ್ಪಿಗೆ ವಿಶ್ವನಾಥ್ ರವರು ಸಾರಿ ಕೇಳಬೇಕಾಗಿಬಂತು.

ಹೀಗಿರುವಾಗಲೇ ವಿಶ್ವನಾಥರು ಸಿದ್ದರಾಮಯ್ಯನವರ ವಿರುದ್ಧ ಕತ್ತಿ ಮಸೆಯಲು ಆರಂಭಿಸಿದರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಾಧಿಸಿದ್ದು ಏನು ಇಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟರು. ಇದಕ್ಕೆ ಸಿದ್ದರಾಮನ್ಯನವರು ತಿರುಗೇಟು ನೀಡಿದಾಗ ಕುಲದೇವರು ಸಿದ್ದರಾಮಯ್ಯನವರಿಗೆ ಬುದ್ದಿ ಕರುಣಿಸಲಿ ಎಂದು ಕಟಕಿಯಾಡಿದರು.

ಲೋಕಸಭಾ ಎಲೆಕ್ಷನ್ ಮುಗಿಯುವವರೆಗೂ ಹೇಗೂ ಅದುಮಿಟ್ಟುಕೊಂಡಿದ್ದ ಅವರ ಅಸಮಾಧಾನ ಈಗ ಹೊರಬಂದಿದೆ. ದೇವೇಗೌಡರ ಬಗ್ಗೆ ಬಹಳ ದ್ವೇಷವಿದಿದ್ದರೂ ಅಂತಹ ಪ್ರೀತಿಯೇನು ಇರಲಿಲ್ಲ. ವಿಶ್ವನಾಥ್ ರವರು ಬರೆದ ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ? ರಾಜ್ಯ ರಾಜಕಾರಣ ಯಾವ ದಿಕ್ಕು ತೆಗೆದುಕೊಳ್ಳಲಿದೆ? ಎಲ್ಲಕ್ಕೂ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...