Homeಕರ್ನಾಟಕಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ವಿಶ್ವನಾಥ್ ರಾಜಿನಾಮೆ? ನಾಳೆ ಪತ್ರಿಕಾಗೋಷ್ಟಿ

ವಿಶ್ವನಾಥ್ ರವರು ಬರೆದ 'ಹಳ್ಳಿ ಹಕ್ಕಿ' ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ?

- Advertisement -
- Advertisement -

ಕಳೆದೊಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿರುವ ಜೆಡಿಎಸ್ ರಾಜ್ಯಧ್ಯಕ್ಷರಾದ ಎಚ್ ವಿಶ್ವನಾಥ್ ರವರು ಜೂನ್ 4ರ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮೊದಲು ಕಾಂಗ್ರೆಸ್ ನಲ್ಲಿದ್ದಾಗ ಸಿದ್ದರಾಮಯ್ಯನವರ ಪರವಾಗಿ ನಿಂತು ಬ್ಯಾಟ್ ಬೀಸುತ್ತಾ ದೇವೇಗೌಡರಿಗೆ ಎಗ್ಗ ಮಗ್ಗ ಜಾಡಿಸುತ್ತಿದ್ದ ಎಚ್.ವಿಶ್ವನಾಥ್ ರವರನ್ನು ದೇವೇಗೌಡರು 2014ರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಕೆಲಸ ಮಾಡಿದರು. ನಂತರ ಇದೇ ವಿಶ್ವನಾಥ್ ಅದೇ ಜೆಡಿಎಸ್ ಸೇರಿ ಹುಣಸೂರಿನಿಂದ ಶಾಸಕರಾಗಿದ್ದು ಆಯ್ತು.

ಜೆಡಿಎಸ್ – ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್ ರವರಿಗೆ ಕೊನೆಗೆ ಸಿಕ್ಕಿದ್ದು ಜೆಡಿಎಸ್ ರಾಜ್ಯಧ್ಯಕ್ಷ ಸ್ಥಾನ. ತನ್ನ ಪಾಲಿಗೆ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತವೆ ಎಂದು ವಿಶ್ವನಾಥ್ ಕಾದಿದ್ದೇ ಕಾದಿದ್ದು. ಆದರೆ ಅಂತಹ ಲಕ್ಷಣಗಳೇನು ಕಾಣಿಸಲಿಲ್ಲ.

ಮಂಡ್ಯ ಲೋಕಸಭೆಯ ವಿಚಾರವಾಗಿ ಸುಮಲತಾ ಅಂಬರೀಶ್ ರವರು ಪಕ್ಷೇತರರಾಗಿ ಕಣಕ್ಕಿಳಿದಾಗ ಎಚ್ ಡಿ ರೇವಣ್ಣ ನಾಲಿಗೆ ಹರಿಯಬಿಟ್ಟರು. ಗಂಡ ಸತ್ತು ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಿತ್ತಾ ಎಂದು ಹೇಳಿ ವಿವಾದ ಉಂಟು ಮಾಡಿದರು. ಎಲ್ಲಾ ಕಡೆಗಳಿಂದಲೂ ಪ್ರಬಲ ವಿರೋಧ ಬಂತು. ಆದರೆ ರೇವಣ್ಣ ತನ್ನ ಹೇಳಿಕೆ ಹಿಂದೆ ಪಡೆಯಲಿಲ್ಲ. ಕೊನೆಗೆ ಜೆಡಿಎಸ್ ರಾಜ್ಯಧ್ಯಕ್ಷರಾಗಿದ್ದ ತಪ್ಪಿಗೆ ವಿಶ್ವನಾಥ್ ರವರು ಸಾರಿ ಕೇಳಬೇಕಾಗಿಬಂತು.

ಹೀಗಿರುವಾಗಲೇ ವಿಶ್ವನಾಥರು ಸಿದ್ದರಾಮಯ್ಯನವರ ವಿರುದ್ಧ ಕತ್ತಿ ಮಸೆಯಲು ಆರಂಭಿಸಿದರು. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಾಧಿಸಿದ್ದು ಏನು ಇಲ್ಲ ಎಂದು ಬಹಿರಂಗ ಹೇಳಿಕೆ ಕೊಟ್ಟರು. ಇದಕ್ಕೆ ಸಿದ್ದರಾಮನ್ಯನವರು ತಿರುಗೇಟು ನೀಡಿದಾಗ ಕುಲದೇವರು ಸಿದ್ದರಾಮಯ್ಯನವರಿಗೆ ಬುದ್ದಿ ಕರುಣಿಸಲಿ ಎಂದು ಕಟಕಿಯಾಡಿದರು.

ಲೋಕಸಭಾ ಎಲೆಕ್ಷನ್ ಮುಗಿಯುವವರೆಗೂ ಹೇಗೂ ಅದುಮಿಟ್ಟುಕೊಂಡಿದ್ದ ಅವರ ಅಸಮಾಧಾನ ಈಗ ಹೊರಬಂದಿದೆ. ದೇವೇಗೌಡರ ಬಗ್ಗೆ ಬಹಳ ದ್ವೇಷವಿದಿದ್ದರೂ ಅಂತಹ ಪ್ರೀತಿಯೇನು ಇರಲಿಲ್ಲ. ವಿಶ್ವನಾಥ್ ರವರು ಬರೆದ ‘ಹಳ್ಳಿ ಹಕ್ಕಿ’ ಪುಸ್ತಕದಲ್ಲಿ ದೇವೇಗೌಡರನ್ನು ನಯವಾಗಿಯೇ ತರಾಟೆಗೆ ತೆಗೆದುಕೊಂಡಿದ್ದ ವಿಶ್ವನಾಥ್ ರವರು ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಡೆಸುತ್ತಿದ್ದಾರೆ. ಎಂತಹ ಬಾಂಬ್ ಸಿಡಿಯಲಿದೆ? ರಾಜ್ಯ ರಾಜಕಾರಣ ಯಾವ ದಿಕ್ಕು ತೆಗೆದುಕೊಳ್ಳಲಿದೆ? ಎಲ್ಲಕ್ಕೂ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...