Homeಕರ್ನಾಟಕಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಚ್ ವಿಶ್ವನಾಥ್!

ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಎಚ್ ವಿಶ್ವನಾಥ್!

- Advertisement -
- Advertisement -

ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,”ನಾನು ಆರ್ಥಿಕವಾಗಿ ಸ್ಥಿತಿವಂತನಲ್ಲ, ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ಹಣ ಎಷ್ಟಿದೆ ಎಂದು ಕೇಳುತ್ತಾರೆ. ರಾಜಕೀಯ ಪಕ್ಷಗಳಿಗಿಂತ ಅದರ ನಾಯಕರು ಪ್ರಬಲರಾಗಿದ್ದಾರೆ” ಎಂದು ವಿಶ್ವನಾಥ್ ಹೇಳಿದರು.

”ಈ ಬೆಳವಣಿಗಳನ್ನು ಗಮನಿಸಿದರೆ, ಇನ್ನು ಮುಂದೆ ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ ನಡೆಯುತ್ತದೆ. ಅವರು ಟಿಕೆಟ್‌ಗಾಗಿ 10 ಕೋಟಿ ರೂ. ನೀಡಲು ಸಹ ಸಿದ್ಧರಿದ್ದಾರೆ. ಇಂದು ದುಡ್ಡು ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ. ಇವರ ನಡುವೆ ಸಿದ್ಧಾಂತ, ಮೌಲ್ಯ ರಾಜಕಾರಣ ನಡೆಯುವುದಿಲ್ಲ, ಈ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ” ಎಂದ ತಿಳಿಸಿದರು.

ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದ ಅವರು ಇದೀಗ ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ”ಏನೋ ಒಂದು ದೊಡ್ಡ ಬದಲಾವಣೆಯಾಗಬಹುದು ಎನ್ನುವ ಕಾರಣಕ್ಕೆ ಬಿಜೆಪಿ ಸೇರಿದ್ದೆನು. ಆದರೆ ಅಲ್ಲಿಗೆ ಹೋದಾಗಲೇ ಅವರ ಬಣ್ಣ ಬಯಲಾಗಿದ್ದು. ಇವರಂತಹ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಶಾಲೆಗಳಲ್ಲಿನ ಪರೀಕ್ಷಾ ವ್ಯವಸ್ಥೆ, ಅಲ್ಲಿನ ಸೌಕರ್ಯ ಅಭಿವೃದ್ಧ ವಿಚಾರ ಬಗ್ಗೆ ಗಮನ ಹರಿಸುವ ಬದಲು, ಕೇಸರಿ ಬಣ್ಣ ಬಳಿದು ರಾಜಕಾರಣ ಮಾಡಲು ಹೊರಟಿದ್ದಾರೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದೇ ಇವರ ಆಡಳಿತ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?” ಎಂದು ಕಿಡಿಕಾರಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

”ಚುನಾವಣೆ ಪ್ರಜಾಪ್ರಭುತ್ವದ ಆತ್ಮವಿದ್ದಂತೆ, ಆದರೆ ಈಗ ಎಲ್ಲ ಬದಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತೆ ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳಿಕೊಂಡು ಸರ್ಕಾರ ರಚನೆ ಮಾಡುತ್ತಿದ್ದಾರೆ. ಇದನ್ನು ಸಾಧ್ಯವಾಗಿಸುವವರು ಮತದಾರರು. ಆದರೆ ದುರಂತದ ವಿಚಾರ ಎಂದರೆ, ಬಿಜೆಪಿಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದಲೇ ಕೈಬಿಡುವ ಕೆಲಸ ನಡೆಯುತ್ತಿದೆ. ಇಂತಹ ಅಯೋಗ್ಯ ರಾಜಕೀಯವನ್ನು ನನ್ನ ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದು ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನ” ಎಂದು ಬಿಜೆಪಿ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ಯಪಡಿಸಿದರು.

ಈ ವೇಳೆ ಹಾಲಿ, ಮಾಜಿ ಮುಖ್ಯಮಂತ್ರಿಗಳ ವಾಕ್ಸಮರದ ಬಗ್ಗೆ ಮಾತನಾಡಿದ ಅವರು, ”ಜವಾಬ್ದಾರಿಯುತ ಜಾಗದಲ್ಲಿರುವವರು ತಾವಾಡುವ ಮಾತಿನ ಮೇಲೆ ಸದಾ ಎಚ್ಚರಿಕೆ ವಹಿಸಬೇಕು. ಆದರೆ ನಮ್ಮ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರೂ ಇದರ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿದ್ದಾರೆ” ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

”ಧಮ್ ಇದ್ದರೆ, ತಾಕತ್ತಿದ್ದರೆ ಎನ್ನುವ ಮಾತುಗಳನ್ನು ಬಳಿಸಿ ರಾಜಕಾರಣಿಗಳು ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುವಂತೆ ಇವರುಗಳು ಮಾಡಿದ್ದಾರೆ. ಹೀಗಿದ್ದಾಗ ಮತದಾರರ ಬಳಿ ಯಾವ ಮುಖ ಇಟ್ಟುಕೊಂಡು ಹೋಗುತ್ತಾರೆ? ಇವರ ಮಾತನಾಡುವ ಈ ಮಾತುಗಳು, ಯುವಕರಿಗೆ, ಮತದಾರರಿಗೆ, ರಾಜಕಾರಣ, ಆಡಳಿತಕ್ಕೆ ಆದರ್ಶವೇ? ಇವರುಗಳ ನಡೆ ನೋಡಿದರೆ ಗಲ್ಲಿಯ ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿಕೊಂಡು ವಿಶ್ವನಾಥ್ ಕಿಡಿಕಾರಿದರು.

ಆಡಳಿತ ಪಕ್ಷದ ವಿರುದ್ಧ ವಿಪಕ್ಷದವರು ಭ್ರಷ್ಟಾಚಾರದ ವಿಚಾರವಾಗಿ ಗುರುತರ ಆರೋಪ ಮಾಡಿದಾಗ, ಆ ಬಗ್ಗೆ ಸರ್ಕಾರ ಗೌರವಯುತವಾಗಿ ನಡೆದುಕೊಳ್ಳಬೇಕು. ಹಿಂದಿನಿಂದಲೂ ಈ ವ್ಯವಸ್ಥೆ ಹಾಗೆಯೇ ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ 40 ಪರ್ಸೆಂಟ್ ಆರೋಪ ಕುರಿತು ತೆಗೆದುಕೊಂಡ ನಿಲುವನ್ನು ನಾನು ಖಂಡಿಸುತ್ತೇನೆ. ನೀವು ಮಾಡಿದ್ದೀರಿ, ನಾವು ಮಾಡುತ್ತಿದ್ದೇವೆ ಎಂದು ಆಡಳಿತ ಪಕ್ಷದವರು ಪರೋಕ್ಷವಾಗಿ ಹೇಳುವಂತಿದೆ ಎಂದು ಸರ್ಕಾರವನ್ನು ತಿವಿದಿದ್ದಾರೆ.

ವೈಯುಕ್ತಿಕ ಚಾರಿತ್ರ್ಯವಧೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ”ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ, ಡಿ ಕೆ ಶಿವಕುಮಾರ್ ಅವರನ್ನು ಮುಗಿಸುವವರೆಗೂ ನಾನು ರಾಜಕೀಯದಿಂದ ನಿವೃತ್ತಿಯಾಗಲಾರೆ ಎಂದು ಅವರು ಹೇಳಿರುವುದು ಸರಿಯಲ್ಲ. ಇದು ಅವರ ಕುಟುಂಬಕ್ಕೆ ಶೋಭೆ ತರುವ ವಿಚಾರವಲ್ಲ. ಸಿ ಡಿ ಬಿಡುಗಡೆ ಮೂಲಕ ಯಾರನ್ನು ಯಾರೂ ಮುಗಿಸಲು ಸಾಧ್ಯವಿಲ್ಲ. ರಾಜಕಾರಣಿಗಳ ಭವಿಷ್ಯ ನಿರ್ಧರಿಸುವವರು ಮತದಾರರು. ಅವರೇ ಎಳಿಸಬೇಕು, ಅವರೇ ಬೀಳಿಸಬೇಕೇ ಹೊರತು ರಾಜಕಾರಣಿಗಳೇನೂ ಮಾಡಲಾರರು” ಎಂದು ವಿಶ್ವನಾಥ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...