Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...