Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...