Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...