Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...