Homeಕರ್ನಾಟಕಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕೊಪ್ಪ ಪೊಲೀಸ್‌ ಠಾಣೆಯ ಪೇದೆ ರಮೇಶ್‌, ಈ ಹಿಂದೆ ಇನ್ನೂ ಕೆಲವರಿಗೆ ಇದೇ ರೀತಿ ಅವಮಾನಿಸಿರುವುದು ಬೆಳಕಿಗೆ ಬಂದಿದ್ದು, ಉಪನ್ಯಾಸಕರೊಬ್ಬರು ಮಾತಾಡಿರುವ ಆಡಿಯೋ ವೈರಲ್‌ ಆಗಿದೆ.

- Advertisement -
- Advertisement -

ಕೋಮು ಸೌಹಾರ್ದ ಚಳವಳಿಯ ಮುಂಚೂಣಿ ಸಂಘಟಕ ಕೆ.ಎಲ್. ಅಶೋಕ್‌ ಅವರಿಗೆ ಸಂಬಂಧಿಸಿದ ಒಂದು ಸುದ್ದಿ ಮೂರು ದಿನಗಳಿಂದ ಸದ್ದು ಮಾಡಿದೆ. ಅವರು ಕುಟುಂಬದ ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಹೋಗಿದ್ದಾಗ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರನ್ನು ನಿಲ್ಲಿಸಿಕೊಂಡಿದ್ದ (ಪಾರ್ಕಿಂಗ್‌ ಮಾಡಿ ಹೋಗಿಬಿಟ್ಟಿರಲಿಲ್ಲ) ಕಾರಣಕ್ಕೆ ಅವರಿಗೆ ಕಿರುಕುಳ ಕೊಟ್ಟಿರುವ ಪ್ರಕರಣವದು. ಅವರ ವಯಸ್ಸಾದ ಅತ್ತೆ ಮತ್ತು ಪುಟ್ಟ ಮಗಳಿನ ಎದುರಿಗೆ ಘಟನೆ ನಡೆದಿದೆ.


ಅಶೋಕ್‌ ಅವರ ತಂದೆಯ ಕಾರಿನಲ್ಲಿ ಹೋಗಿದ್ದಾಗ ಈ ಘಟನೆ ನಡೆಯಿತೆಂದು ಕೇಳಿ ಆ ಕಾರಣಕ್ಕೂ ಆಶ್ಚರ್ಯವೆನಿಸಿತು. ಏಕೆಂದರೆ ಪೊಲೀಸ್‌ ಪೇದೆಗಳು ಸಾಮಾನ್ಯವಾಗಿ ಕಾರಿನಲ್ಲಿ ಕುಳಿತವರ ಮೇಲೆ – ಅದರಲ್ಲೂ ಕೊಪ್ಪದಂತಹ ಪುಟ್ಟ ಪಟ್ಟಣದಲ್ಲಿ – ಜೋರು ಮಾಡುವುದು ಕಡಿಮೆ. ನಮ್ಮ ಇಡೀ ಪೊಲೀಸ್‌ ವ್ಯವಸ್ಥೆಯು ಬಡವರನ್ನು ನಡೆಸಿಕೊಳ್ಳುವ ರೀತಿ ಬೇರೆ, ಜೋರಿದ್ದವರನ್ನು ನಡೆಸಿಕೊಳ್ಳುವ ರೀತಿ ಬೇರೆ. ಅಂದರೆ ಇಲ್ಲಿ ಉದ್ದೇಶಪೂರ್ವಕವಾದುದೇನೋ ನಡೆದಿದೆ ಎಂಬುದು ಸ್ಪಷ್ಟ.

ಇದನ್ನೂ ಓದಿ: ಕೆ.ಎಲ್‌.ಅಶೋಕ್‌ರನ್ನು ಅಕಾರಣವಾಗಿ ನಿಂದಿಸಿದ ಕೊಪ್ಪ ಪೊಲೀಸ್‌ 

ಈ ಕಾರಣದಿಂದ ಇದಕ್ಕೊಂದು ಮಹತ್ವ ಬಂದಿದೆ. ಅಶೋಕ್‌ ಅದೇ ಪ್ರದೇಶದ, ಸಾಕಷ್ಟು ಜನರಿಗೆ ಪರಿಚಿತವಾಗಿರುವ ವ್ಯಕ್ತಿ. ಅವರ ಮದುವೆ ಸಾಂಪ್ರದಾಯಿಕವಾದ ರೀತಿಯಲ್ಲಿ ನಡೆಯಲಿಲ್ಲವೆಂದು ಸ್ಥಳೀಯವಾಗಿ ಕೆಂಗಣ್ಣಿಗೆ ಗುರಿಯಾದದ್ದರಿಂದ ಹಿಡಿದು, ಕೋಮುವಾದಿಗಳ ವಿರುದ್ಧ ನಿರಂತರವಾಗಿ ದನಿಯೆತ್ತಿದ್ದವರೆಗೆ ಆ ಪ್ರದೇಶದಲ್ಲೂ ಕೆಲಸ ಮಾಡಿದವರು. ಪೊಲೀಸ್‌ ಇಲಾಖೆಯಲ್ಲಿ ತಳಮಟ್ಟದಲ್ಲಿರುವ ಹಲವರು ಕೋಮುವಾದಿ ಮನಸ್ಥಿತಿ ಬೆಳೆಸಿಕೊಂಡಿದ್ದರೆ ಆಶ್ಚರ್ಯವಲ್ಲವಾದರೂ, ಅದನ್ನು ಅವರು ಸಾರ್ವಜನಿಕವಾಗಿ ಒಂದಷ್ಟು ಪ್ರಸಿದ್ಧರಾಗಿರುವ ವ್ಯಕ್ತಿಗಳ ಮೇಲೆ ತೋರಿಸುವುದಿಲ್ಲ. ಆದರೆ ಕುಟುಂಬ ಸಮೇತ ಖಾಸಗಿ ಕೆಲಸಕ್ಕೆ ಹೋಗಿದ್ದ ಸಾರ್ವಜನಿಕ ವ್ಯಕ್ತಿಯೊಬ್ಬರನ್ನು ಕ್ಷುಲ್ಲಕ ಕಾರಣ ಹಿಡಿದು ಅವಮಾನಿಸುವುದು, ಟಾರ್ಗೆಟ್‌ ಮಾಡುವುದು, ಇನ್ನೂ ಮುಂದಕ್ಕೆ ಹೋಗಿ ಕೇಸನ್ನೂ ದಾಖಲಿಸುವುದನ್ನು ಮಾಡುವ ಅಧಿಕಾರ ತಮಗಿದೆ ಎಂದು ಪೊಲೀಸರು ಭಾವಿಸಿದರೆ ಅಲ್ಲಿಗೆ ಬೀದಿಗಳಲ್ಲಿ ಸರ್ಕಾರೀ ಹಿಟ್ಲರ್‌ಗಿರಿ ಜಾರಿಯಾದಂತೆಯೇ. ಮುಂದಿನ ದಿನಗಳಲ್ಲಿ ಆಡಳಿತ ಪಕ್ಷದ ವಿರುದ್ಧ ಮಾತಾಡುವವರು ಅಂಗಡಿಗೆ ಹೋದಾಗಲೂ ಇಂಥದ್ದು ನಡೆಯಬಹುದು ಎಂದಾಗಿಬಿಡುತ್ತದೆ.

ಬೆಳಕಿಗೆ ಬಂದ ಪೇದೆ ರಮೇಶ್‌ರ ಇನ್ನೊಂದು ಪ್ರಕರಣ

ನಿರ್ದಿಷ್ಟವಾಗಿ ಈ ಪ್ರಕರಣಕ್ಕೆ ಬರುವುದಾದರೆ ರಮೇಶ್‌ ಎನ್ನುವ ಕೊಪ್ಪ ಠಾಣೆಯ ಪೇದೆಗೆ ಜನಸಾಮಾನ್ಯರ ಮೇಲೆ ಹರಿಹಾಯುವ ಮನೋಭಾವವಿರುವುದು ಹೊಸದೇನಲ್ಲ ಎಂಬುದಕ್ಕೆ ಇನ್ನೊಂದು ಸಾಕ್ಷ್ಯ ದೊರಕಿದೆ. ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಉಪನ್ಯಾಸಕರೊಬ್ಬರ ಮೇಲೆ ಹರಿಹಾಯ್ದು ಅವಮಾನಿಸಿರುವ ಕುರಿತು ಅವರು ಒಂದು ಆಡಿಯೋವನ್ನು ಕಳಿಸಿದ್ದು, ಕೊಪ್ಪ ಭಾಗದಲ್ಲಿ ವೈರಲ್‌ ಆಗಿದೆ. ಇಂಟೆಲಿಜೆನ್ಸ್‌ ಇಲಾಖೆಯಲ್ಲಿ ಕೆಲಸ ಮಾಡುವವರಲ್ಲಿ ಎರಡು ರೀತಿಯವರು ಇರುತ್ತಾರೆ. ಒಂದು, ಸಾರ್ವಜನಿಕ ಜೀವನದಲ್ಲಿರುವ ಎಲ್ಲರ ಜೊತೆಗೂ ಚೆನ್ನಾಗಿದ್ದು, ಮಾಹಿತಿ ಸಂಗ್ರಹಿಸಿ ಇಲಾಖೆಗೆ ನೀಡುವುದು. ಎರಡು, ಜನಪರ ಹೋರಾಟಗಾರರನ್ನು ತರಲೆಗಳೆಂದು ಬಗೆದು ಅವರ ವಿರುದ್ಧ ವೈಯಕ್ತಿಕ ಜಿದ್ದನ್ನು ಸಾಧಿಸುವ ರೀತಿಯಲ್ಲಿ ನಿರಂತರ ಕಿರುಕುಳ ನೀಡುವುದು. ಬಹುಕಾಲ ಗುಪ್ತಚರ ಇಲಾಖೆಯ ಭಾಗವಾಗಿದ್ದ ಈ ರಮೇಶ್‌ ಎರಡನೇ ಬಗೆಯವರಾಗಿರುವುದು ಸ್ಪಷ್ಟವಾಗಿದೆ.

ಕೆ.ಎಲ್ ಅಶೋಕ್ ರವರನ್ನು ನಿಂದಿಸಿದ್ದ ಕೊಪ್ಪ ಪೊಲೀಸ್‌ ಠಾಣೆಯ ಪೇದೆ ರಮೇಶ್‌, ಈ ಹಿಂದೆ ಇನ್ನೂ ಕೆಲವರಿಗೆ ಇದೇ ರೀತಿ ಅವಮಾನಿಸಿರುವುದು ಬೆಳಕಿಗೆ ಬಂದಿದ್ದು, ಉಪನ್ಯಾಸಕರೊಬ್ಬರು ಮಾತಾಡಿರುವ ಆಡಿಯೋ ವೈರಲ್‌ ಇಲ್ಲಿದೆ ಕೇಳಿ.

Posted by Naanu Gauri on Thursday, September 10, 2020

ಪೊಲೀಸ್‌ ಇಲಾಖೆಯೇ ನೆರವು ಕೇಳಿ, ಎನ್ನೆಸ್ಸೆಸ್‌ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಕೆಲಸ ಮಾಡಿಸಿ ನಂತರ ಸದರಿ ಉಪನ್ಯಾಸಕರನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಅದಕ್ಕೆ ಬೇರಾರಿಗಿಂತ ಇದೇ ಪೇದೆ ರಮೇಶ್‌ ಕಾರಣರಾಗಿದ್ದಾರೆ. ಅಂದರೆ ಪೊಲೀಸ್‌ ಇಲಾಖೆಯ ಕುರಿತು ಸಾರ್ವಜನಿಕ ವಲಯದಲ್ಲಿರುವ ಭಾವನೆಯನ್ನು ಪುಷ್ಟೀಕರಿಸುವ ರೀತಿಯಲ್ಲಿ ಅವರು ನಡೆದುಕೊಂಡಿದ್ದಾರೆ.

ಇಂತಹ ಪ್ರಕರಣ ತಡೆಯಲು ಏನು ಮಾಡಬೇಕು?

ಈ ಹಿನ್ನೆಲೆಯಲ್ಲಿ ಕೆಲವು ಸಂಗತಿಗಳು ಮುಖ್ಯವಾಗುತ್ತವೆ. ಸಮಾಜದಲ್ಲಿನ ಕ್ರೌರ್ಯ, ಅಪರಾಧ ಹಾಗೂ ದೌರ್ಜನ್ಯಕಾರಿ ಮನೋಭಾವವು ಪುನರುತ್ಪತ್ತಿಯಾಗಬಾರದೆಂದರೆ, ಅದಕ್ಕೆ ತಕ್ಕುನಾದ ಸಮಾಜದ ನಿರ್ಮಾಣವಾಗಬೇಕು. ಆದರೆ, ಇವೆಲ್ಲವನ್ನೂ ತಡೆಯಲು ನಿಯೋಜಿತವಾಗಿರುವ ಪೊಲೀಸ್‌ ಇಲಾಖೆಯು ಕ್ರೌರ್ಯ ಹಾಗೂ ದೌರ್ಜನ್ಯಗಳನ್ನೇ ಬಳಸಿದರೆ, ದೀರ್ಘಕಾಲದಲ್ಲಿ ಇವನ್ನು ತಡೆಯುವುದು ಸಾಧ್ಯವೇ ಇಲ್ಲ. ಅದರಲ್ಲೂ ಇಂತಹ ದಬ್ಬಾಳಿಕೆಗೆ ಒಳಗಾಗುವುದು ಸಮಾಜದ ದುರ್ಬಲ ಸಮುದಾಯದ ಮೇಲೆಯೇ ಹೆಚ್ಚಾಗಿರುತ್ತದೆ. ಹಾಗಾಗಿ ಇದರ ಮೇಲೆ ಇಡೀ ಸಮಾಜ ಹಾಗೂ ನಿರ್ದಿಷ್ಟವಾಗಿ ಪೊಲೀಸ್‌ ಇಲಾಖೆಯು ಗಮನ ಹರಿಸುವ ಅಗತ್ಯವಿದೆ. ಅದರಲ್ಲೂ, ರಮೇಶ್‌ರಂತಹ ರೂಢಿಗತ ಅಪರಾಧಿ (Habitual offender)ಯ ಮೇಲೆ ಕ್ರಮ ತೆಗೆದುಕೊಳ್ಳುವ ಮೂಲಕ ಆರಂಭಿಸಬೇಕಿದೆ.

ಎರಡನೆಯದಾಗಿ, ಚುನಾವಣೆಯಲ್ಲಿ ಗೆದ್ದು ಬರುವ ಪಕ್ಷದ ಅಣತಿಗೆ ತಕ್ಕಂತೆ ಪೊಲೀಸರು ಸೈದ್ಧಾಂತಿಕ, ರಾಜಕೀಯ ವಿರೋಧಿಗಳನ್ನು ಮತ್ತು ಹೋರಾಟಗಾರರನ್ನು ಗುರಿ ಮಾಡುವುದನ್ನು ತಪ್ಪಿಸಬೇಕು. ಅದಕ್ಕಾಗಿ ಪೊಲೀಸರು ಪ್ರತಿಯೊಂದು ಪ್ರಕರಣವನ್ನು ನಿಭಾಯಿಸಬೇಕಾದ ರೀತಿಯ ಕುರಿತು ಕಟ್ಟುನಿಟ್ಟಾದ ಪ್ರೋಟೋಕಾಲ್‌ ಹಾಗೂ ನಿಯಮಾವಳಿಗಳನ್ನು ರೂಪಿಸಬೇಕು. ನಿರ್ದಿಷ್ಟವಾಗಿ ಈ ಪ್ರಕರಣದಲ್ಲಿ ಕೆ.ಎಲ್‌. ಅಶೋಕ್‌ ಅವರು ದೀರ್ಘಕಾಲದಿಂದ ಮಲೆನಾಡಿನಲ್ಲಿ ಬಲಪಂಥೀಯ ಸಂಘಟನೆಗಳು ಹಾಗೂ ಕೋಮುದ್ವೇಷದ ವಿರುದ್ಧ ಕೆಲಸ ಮಾಡುತ್ತಾ ಬಂದವರಾಗಿರುವುದರಿಂದ, ಆಡಳಿತಪಕ್ಷದ ಪ್ರಭಾವದ ವಾಸನೆ ಎದ್ದು ಹೊಡೆಯುತ್ತಿದೆ.

ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ವಿಚಾರದಲ್ಲಿ ಪ್ರತಿಭಟನೆಗಳು ನಡೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಸಂಘಟನೆಗಳು ಹಾಗೂ ನಾಯಕರುಗಳು ಕೊಪ್ಪ ಚಲೋ ಕಾರ್ಯಕ್ರಮವನ್ನು ಸಂಘಟಿಸಲು ಯೋಜಿಸಿದ್ದಾರೆ. ಈ ಸಂದರ್ಭವನ್ನು ಪೊಲೀಸರು ಪ್ರತಿಷ್ಠೆಯ ವಿಚಾರವಾಗಿ ತೆಗೆದುಕೊಳ್ಳದೇ, ತಮ್ಮ ಇಲಾಖೆಯಲ್ಲಿರುವ ʼಸಾಮಾಜಿಕ ಸಮಸ್ಯೆʼಯನ್ನು ಬಗೆಹರಿಸುವ ಅವಕಾಶವನ್ನಾಗಿ ತೆಗೆದುಕೊಂಡರೆ ಎಲ್ಲರೂ ಗೆದ್ದಂತೆ. ಇಲ್ಲದಿದ್ದರೆ ಒಂದೆಡೆ ಸಾಮಾಜಿಕ ಹೋರಾಟಗಾರರೊಬ್ಬರಿಗಾದ ಅವಮಾನವನ್ನು ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಸಂಘಟನೆಗಳು ಮುಂದಕ್ಕೆ ತರುತ್ತವೆ; ಪೊಲೀಸ್‌ ಇಲಾಖೆಯು ಜಿದ್ದಿನಿಂದ ಸಮಸ್ಯೆಯನ್ನು ಹೆಚ್ಚು ಮಾಡಿಕೊಂಡೇ ಹೋಗುತ್ತಿರುತ್ತಾರೆ. ಹಾಗಾಗದಂತೆ ಇಲಾಖೆಯ ಉನ್ನತ ಅಧಿಕಾರಿಗಳು ನೋಡಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...