Homeಮುಖಪುಟರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ...

ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ಬಿಚ್ಚಿಟ್ಟ ವರದಿ

- Advertisement -
- Advertisement -

ಯುಎಸ್ ಮೂಲದ ಡಿಜಿಟಲ್ ಫೊರೆನ್ಸಿಕ್ಸ್ ಕಂಪನಿಯ ಹೊಸ ವರದಿಯ ಪ್ರಕಾರ, 2018 ರ ಜನವರಿಯಲ್ಲಿ ಮಹಾರಾಷ್ಟ್ರದ ಭೀಮಾ-ಕೋರೆಗಾಂವ್‌ನಲ್ಲಿ ಹಿಂಸಾಚಾರ ನಡೆದ ಕೆಲವು ದಿನಗಳ ನಂತರ ಕಾರ್ಯಕರ್ತ ರೋಣಾ ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಹ್ಯಾಕರ್ 22 “ದೋಷಾರೋಪಣೆ” ಫೈಲ್‌ಗಳನ್ನು ಸೇರಿಸಿದ್ದಾನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಈ ಫೈಲ್‌ಗಳನ್ನು 15 ನವೆಂಬರ್ 2018 ರಿಂದ, ಆರಂಭದಲ್ಲಿ ಪುಣೆ ಪೊಲೀಸರು ಮತ್ತು ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಸಾಕ್ಷಿಯಾಗಿ ಉಲ್ಲೇಖಿಸಲಾಗಿದೆ. ಈ ಸಾಕ್ಷ್ಯಗಳನ್ನೇ ಬಳಸಿಕೊಂಡು ರೋಣಾ ವಿಲ್ಸನ್ ಮತ್ತು ವಕೀಲರು, ಶಿಕ್ಷಣ ತಜ್ಞರು ಮತ್ತು ಕಲಾವಿದರು ಸೇರಿದಂತೆ ಇತರ 15 ಜನರನ್ನು ಎರಡು ವರ್ಷಗಳಿಂದ ಜಾಮೀನು ಇಲ್ಲದೆ ಬಂಧಿಸಿ ಜೈಲಿಗೆ ಹಾಕಲಾಗಿದೆ.

ವಿಲ್ಸನ್‌ನ ಕಂಪ್ಯೂಟರ್‌ನಲ್ಲಿ ಅವರಾಗಲಿ ಅಥವಾ ಬೇರೆಯವರಾಗಲಿ ಫೈಲ್‌ಗಳನ್ನು ಸೃಷ್ಟಿಸಿಲ್ಲ, ಅದನ್ನು ಒಪನ್ ಮಾಡಿಲ್ಲ ಮತ್ತು ಬಳಸಿಲ್ಲ. ಆದರೆ ಅವುಗಳನ್ನು ಸೇರಿಸಲು ಹ್ಯಾಕರ್ ಸಾಫ್ಟ್‌ವೇರ್ ಬಳಸಿದ್ದಾರೆ ಎಂದು ಆರ್ಸೆನಲ್ ಕನ್ಸಲ್ಟಿಂಗ್‌ನ ಹೊಸ ವರದಿ ತಿಳಿಸಿದೆ. ನ್ಯಾಯಾಲಯದ ಆದೇಶದ ನಂತರ 2019 ರ ನವೆಂಬರ್‌ನಲ್ಲಿ ವಿಲ್ಸನ್ ಅವರ ಕಂಪ್ಯೂಟರ್‌ನ ಎಲೆಕ್ಟ್ರಾನಿಕ್ ನಕಲನ್ನು ಪೊಲೀಸರಿಂದ ಪಡೆದು ಆರ್ಸೆನಲ್ ಕನ್ಸಲ್ಟಿಂಗ್ ವಿಶ್ಲೇಷಣೆ ನಡೆಸಿ ಈ ತೀರ್ಮಾನಕ್ಕೆ ಬಂದಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು, ನಿರಂತರ ಎಲೆಕ್ಟ್ರಾನಿಕ್ ಬೇಹುಗಾರಿಕೆ ನಡೆಸಲಾಗಿತ್ತು ಎಂದು ಫೆಬ್ರವರಿ 2021 ರಲ್ಲಿ ಅದು ತನ್ನ ಮೊದಲ ವರದಿಯಲ್ಲಿ ತಿಳಿಸಿತ್ತು. ಎರಡನೆ ವರದಿಯು ಅದರ ಮುಂದುವರಿದ ಅಧ್ಯಯನದ ಭಾಗವಾಗಿದೆ.

ಎರಡನೆಯ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಬೇಕಾಗಿದೆ. ವಿಲ್ಸನ್‌ರ ಕಂಪ್ಯೂಟರ್‌ನಲ್ಲಿನ ಫೈಲ್‌ಗಳಲ್ಲಿರುವ ಅಂಶಗಳ ಕಾನೂನುಬದ್ಧ ಸಂವಾದದ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಆ 24 ಫೈಲ್‌ಗಳಲ್ಲಿ 22 ಫೈಲ್‌ಗಳನ್ನು ನೇರವಾಗಿ ಸೇರಿಸಲಾಗಿದೆ ಮತ್ತು ಮೊದಲನೆ ವರದಿಯಲ್ಲಿನ ಹ್ಯಾಕರ್‌ನನ್ನು ಗುರುತಿಸಲಾಗಿದೆ ಎನ್ನಲಾಗಿದೆ.

ಹೆಚ್ಚುವರಿಯಾಗಿ ಸೇರಿಸಲಾಗಿರುವ 24 ಫೈಲ್‌ಗಳಲ್ಲಿ ಹೆಚ್ಚಾಗಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರ ನಡುವಿನ ಉದ್ದೇಶಿತ ಪತ್ರವ್ಯವಹಾರ, ಹಣ ವರ್ಗಾವಣೆಯ ಕುರಿತು ಚರ್ಚೆಗಳು, ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೇಗೆ ಸುಧಾರಿಸುವುದು, ಪಕ್ಷದ ಸದಸ್ಯರು ಪರಸ್ಪರ ಸಂವಹನ ನಡೆಸುವಲ್ಲಿ ಎದುರಾಗುವ ತೊಂದರೆಗಳು, ರಾಜ್ಯ ದೌರ್ಜನ್ಯದ ಬಗ್ಗೆ ಕಾಳಜಿಗಳು ಮತ್ತು ಕೆಲವು ಮಾವೋವಾದಿ ಗೆರಿಲ್ಲಾಗಳ ಛಾಯಾಚಿತ್ರಗಳು ಇವೆ ಎಂದು ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಎನ್‌ಐಎ ವಕ್ತಾರರಾದ ಜಯಾ ರಾಯ್‌ರವರನ್ನು ಆರ್ಟಿಕಲ್ 14 ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನಮ್ಮ ತನಿಖೆ ಪೂರ್ಣಗೊಂಡಿದೆ. ನಾವು ಖಾಸಗಿ ಲ್ಯಾಬ್‌ಗಳಿಂದ ಬರುವ ವರದಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ನಮ್ಮ ವಿಧಿವಿಜ್ಞಾನ ಪರೀಕ್ಷೆಗೆ ಆರ್‌ಎಫ್‌ಎಸ್‌ಎಲ್ (ಪ್ರಾದೇಶಿಕ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ಮತ್ತು ಸಿಎಫ್‌ಎಸ್ಎಲ್ (ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯ) ದಂತೆ ಅಧಿಸೂಚಿತ ಪ್ರಯೋಗಾಲಯಗಳಿವೆ” ಎಂದು ತಿಳಿಸಿದ್ದಾರೆ.

15 ಸಾಮಾಜಿಕ ಕಾರ್ಯಕರ್ತರ ಮತ್ತು ಹೋರಾಟಗಾರರ ವಿರುದ್ಧದ ಈ ಭಯೋತ್ಪಾದನಾ ಪ್ರಕರಣವು ಹಲವು ವರ್ಷಗಳವರೆಗೆ ಎಳೆಯುವ ಸಾಧ್ಯತೆಯಿದ್ದರೂ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವತ್ತ ವಕೀಲರು ಗಮನ ಹರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಡಿಜಿಟಲ್ ಸಾಕ್ಷ್ಯಗಳನ್ನು ಹ್ಯಾಕರ್‌ ಮೂಲಕ ಹೋರಾಟಗಾರರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸೇರಿಸಿ ಸಾಕ್ಷಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ವಾದಕ್ಕೆ ವಿಲ್ಸನ್ ಅವರ ವಕೀಲರು ಎರಡನೇ ಆರ್ಸೆನಲ್ ವರದಿಯನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಈ ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿದೆ. ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸಿದ್ದಾರೆ.

ಪೊಲೀಸರು ಕಾರ್ಯಕರ್ತರು ಮತ್ತು ಕಾರ್ಯಕ್ರಮದ ಸಂಘಟಕರ ಮೇಲೆ ದಾಳಿ ನಡೆಸಿ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಇತರ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಭೀಮಾ ಕೋರೆಗಾಂವ್ ಕಾರ್ಯಕ್ರಮದ ಮುಖ್ಯ ಸಂಘಟಕರಲ್ಲಿ ಒಬ್ಬರಾದ ಸುಧೀರ್ ಧವಾಲೆ ಅವರೊಂದಿಗೆ ಸಂವಹನ ನಡೆಸಿದ್ದರಿಂದ ಪೊಲೀಸರು ರೋನಾ ವಿಲ್ಸನ್ ಮತ್ತು ವಕೀಲ ಸುರೇಂದ್ರ ಗ್ಯಾಡ್ಲಿಂಗ್ ಅವರ ಮೇಲೆ ದಾಳಿ ನಡೆಸಿದ್ದಾರೆ.

ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ದೊರೆತ ಫೈಲ್‌ಗಳು ಆತನ ವಿರುದ್ಧ, ವಕೀಲ-ಕಾರ್ಯಕರ್ತ ಸುಧಾ ಭಾರದ್ವಾಜ್, ಕವಿ ವರವರ ರಾವ್ ಮತ್ತು ಇತರರ ವಿರುದ್ಧ ಸಲ್ಲಿಸಿದ ಸಾಕ್ಷ್ಯಗಳಲ್ಲಿ ಸೇರಿವೆ.

ಕೃಪೆ: ಆರ್ಟಿಕಲ್ 14


ಇದನ್ನೂ ಓದಿ: ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...